ಮೈಸೂರು: ಸ್ವಾಭಿಮಾನಿ ಚಕ್ರವರ್ತಿ, ದಲಿತ, ದಮಿನತರ ಧ್ವನಿಯಾಗಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರು ಇಂದು ಲಿಂಗೈಕ್ಯರಾದರು.
ಭಾನುವಾರ ರಾತ್ರಿ ನಿಧನರಾದ ಶ್ರೀನಿವಾಸಪ್ರಸಾದ್ ಅವರ ಅಂತ್ಯಕ್ರಿಯೆಯು ಸಹಸ್ರಾರು ಜನರ ಶೋಕ ಸಾಗರದ ನಡುವೆ ಸಕಲ ಸರ್ಕಾರಿ ಗೌರವ ವಂದನೆ ಹಾಗೂ ಬೌದ್ಧಧರ್ಮದ ವಿಧಿವಿಧಾನಗಳಂತೆ ನಡೆಯಿತು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಯಾಗಿದ್ದ ವಿ.ಶ್ರೀನಿವಾಸಪ್ರಸಾದ್ ಬೌದ್ಧಧರ್ಮವನ್ನು ಅಪ್ಪಿಕೊಂಡಿದ್ದರಿಂದಾಗಿ ಕುಟುಂಬದವರು ಅವರ ಕನಸಿನಂತೆ ಬೌದ್ಧ ಧರ್ಮದ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿದರು.
ಅಶೋಕಪುರಂನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಮಧ್ಯಾಹ್ನದಿಂದ ಮಂಗಳವಾರ ಮಧ್ಯಾಹ್ನದವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ, ಅಲಂಕೃತ ವಾಹನದಲ್ಲಿ ಪಾರ್ಥಿವ ಶರೀರದ ಅಂತಿಮ ಯಾತ್ರೆ ಅಶೋಕಪುರಂನಲ್ಲಿ ನಡೆದು ಅಲ್ಲಿಂದ ಮಾನಂದವಾಡಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಕಲ್ಚರಲ್ ಅಂಡ್ ಎಜುಕೇಷನ್ ಟ್ರಸ್ಟ್ ಆವರಣಕ್ಕೆ ತರಲಾಯಿತು.
ರಾಜ್ಯ,ಮತ್ತು ಕೇಂದ್ರದ ಮಾಜಿ ಸಚಿವರಾಗಿದ್ದರಿಂದ ಬಹಾಗೂ ಹಾಲಿ ಸಂಸದರಾಗಿದ್ದ ಕಾರಣ ಸಕಲ ಸರ್ಕಾರಿ ಗೌರವ ವಂದನೆ ಸಲ್ಲಿಸಲಾಯಿತು.
ಬೆಂಗಳೂರಿನ ತೇರಾ ಮಹಾಬೋದಿ ಸೊಸೈಟಿಯ ಆನಂದ್ ಭಂತೇಜಿ, ಮನೋರಖ್ಖಿತ ಭಂತೇಜಿ ನೇತೃತ್ವದಲ್ಲಿ ಬೌದ್ಧ ಧರ್ಮದ ಬುದ್ಧವಂದನೆ, ಧಮ್ಮ ವಂದನೆ, ಸಂಘ ವಂದನೆ ಸಲ್ಲಿಸಿ ಗೌತಮ ಬುದ್ಧರ ಪಂಚಶೀಲ ಬೋಧನೆ ಮಾಡಲಾಯಿತು. ನಂತರ, ಸುತ್ತಪಠಣ, ಧ್ಯಾನಪಠಣ, ಸೂತ್ರಪಠಣವನ್ನು ಮಣ್ಣು ಮಾಡಲಾಯಿತು.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…