ಮೈಸೂರು: ಸ್ವಾಭಿಮಾನಿ ಚಕ್ರವರ್ತಿ, ದಲಿತ, ದಮಿನತರ ಧ್ವನಿಯಾಗಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರು ಇಂದು ಲಿಂಗೈಕ್ಯರಾದರು.
ಭಾನುವಾರ ರಾತ್ರಿ ನಿಧನರಾದ ಶ್ರೀನಿವಾಸಪ್ರಸಾದ್ ಅವರ ಅಂತ್ಯಕ್ರಿಯೆಯು ಸಹಸ್ರಾರು ಜನರ ಶೋಕ ಸಾಗರದ ನಡುವೆ ಸಕಲ ಸರ್ಕಾರಿ ಗೌರವ ವಂದನೆ ಹಾಗೂ ಬೌದ್ಧಧರ್ಮದ ವಿಧಿವಿಧಾನಗಳಂತೆ ನಡೆಯಿತು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಯಾಗಿದ್ದ ವಿ.ಶ್ರೀನಿವಾಸಪ್ರಸಾದ್ ಬೌದ್ಧಧರ್ಮವನ್ನು ಅಪ್ಪಿಕೊಂಡಿದ್ದರಿಂದಾಗಿ ಕುಟುಂಬದವರು ಅವರ ಕನಸಿನಂತೆ ಬೌದ್ಧ ಧರ್ಮದ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿದರು.
ಅಶೋಕಪುರಂನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಮಧ್ಯಾಹ್ನದಿಂದ ಮಂಗಳವಾರ ಮಧ್ಯಾಹ್ನದವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ, ಅಲಂಕೃತ ವಾಹನದಲ್ಲಿ ಪಾರ್ಥಿವ ಶರೀರದ ಅಂತಿಮ ಯಾತ್ರೆ ಅಶೋಕಪುರಂನಲ್ಲಿ ನಡೆದು ಅಲ್ಲಿಂದ ಮಾನಂದವಾಡಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಕಲ್ಚರಲ್ ಅಂಡ್ ಎಜುಕೇಷನ್ ಟ್ರಸ್ಟ್ ಆವರಣಕ್ಕೆ ತರಲಾಯಿತು.
ರಾಜ್ಯ,ಮತ್ತು ಕೇಂದ್ರದ ಮಾಜಿ ಸಚಿವರಾಗಿದ್ದರಿಂದ ಬಹಾಗೂ ಹಾಲಿ ಸಂಸದರಾಗಿದ್ದ ಕಾರಣ ಸಕಲ ಸರ್ಕಾರಿ ಗೌರವ ವಂದನೆ ಸಲ್ಲಿಸಲಾಯಿತು.
ಬೆಂಗಳೂರಿನ ತೇರಾ ಮಹಾಬೋದಿ ಸೊಸೈಟಿಯ ಆನಂದ್ ಭಂತೇಜಿ, ಮನೋರಖ್ಖಿತ ಭಂತೇಜಿ ನೇತೃತ್ವದಲ್ಲಿ ಬೌದ್ಧ ಧರ್ಮದ ಬುದ್ಧವಂದನೆ, ಧಮ್ಮ ವಂದನೆ, ಸಂಘ ವಂದನೆ ಸಲ್ಲಿಸಿ ಗೌತಮ ಬುದ್ಧರ ಪಂಚಶೀಲ ಬೋಧನೆ ಮಾಡಲಾಯಿತು. ನಂತರ, ಸುತ್ತಪಠಣ, ಧ್ಯಾನಪಠಣ, ಸೂತ್ರಪಠಣವನ್ನು ಮಣ್ಣು ಮಾಡಲಾಯಿತು.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…