ಮೈಸೂರು

ಸಕಲ ಸರ್ಕಾರಿ ಗೌರವಗಳೊಂದಿಗೆ ಪಂಚಭೂತಗಳಲ್ಲಿ ಲೀನನಾದ “ಪ್ರಸಾದ”

ಮೈಸೂರು: ಸ್ವಾಭಿಮಾನಿ ಚಕ್ರವರ್ತಿ, ದಲಿತ, ದಮಿನತರ ಧ್ವನಿಯಾಗಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಅವರು ಇಂದು ಲಿಂಗೈಕ್ಯರಾದರು.

ಭಾನುವಾರ ರಾತ್ರಿ ನಿಧನರಾದ ಶ್ರೀನಿವಾಸಪ್ರಸಾದ್ ಅವರ ಅಂತ್ಯಕ್ರಿಯೆಯು ಸಹಸ್ರಾರು ಜನರ ಶೋಕ ಸಾಗರದ ನಡುವೆ ಸಕಲ ಸರ್ಕಾರಿ ಗೌರವ ವಂದನೆ ಹಾಗೂ ಬೌದ್ಧಧರ್ಮದ ವಿಧಿವಿಧಾನಗಳಂತೆ ನಡೆಯಿತು.

ಡಾ.ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಯಾಗಿದ್ದ ವಿ.ಶ್ರೀನಿವಾಸಪ್ರಸಾದ್ ಬೌದ್ಧಧರ್ಮವನ್ನು ಅಪ್ಪಿಕೊಂಡಿದ್ದರಿಂದಾಗಿ ಕುಟುಂಬದವರು ಅವರ ಕನಸಿನಂತೆ ಬೌದ್ಧ ಧರ್ಮದ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿದರು.

ಅಶೋಕಪುರಂನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಮಧ್ಯಾಹ್ನದಿಂದ ಮಂಗಳವಾರ ಮಧ್ಯಾಹ್ನದವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಂತರ, ಅಲಂಕೃತ ವಾಹನದಲ್ಲಿ ಪಾರ್ಥಿವ ಶರೀರದ ಅಂತಿಮ ಯಾತ್ರೆ ಅಶೋಕಪುರಂನಲ್ಲಿ ನಡೆದು ಅಲ್ಲಿಂದ ಮಾನಂದವಾಡಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಕಲ್ಚರಲ್ ಅಂಡ್ ಎಜುಕೇಷನ್ ಟ್ರಸ್ಟ್ ಆವರಣಕ್ಕೆ ತರಲಾಯಿತು.

ರಾಜ್ಯ,ಮತ್ತು ಕೇಂದ್ರದ ಮಾಜಿ ಸಚಿವರಾಗಿದ್ದರಿಂದ ಬಹಾಗೂ ಹಾಲಿ ಸಂಸದರಾಗಿದ್ದ ಕಾರಣ ಸಕಲ ಸರ್ಕಾರಿ ಗೌರವ ವಂದನೆ ಸಲ್ಲಿಸಲಾಯಿತು.

ಬೆಂಗಳೂರಿನ ತೇರಾ ಮಹಾಬೋದಿ ಸೊಸೈಟಿಯ ಆನಂದ್ ಭಂತೇಜಿ, ಮನೋರಖ್ಖಿತ ಭಂತೇಜಿ ನೇತೃತ್ವದಲ್ಲಿ ಬೌದ್ಧ ಧರ್ಮದ ಬುದ್ಧವಂದನೆ, ಧಮ್ಮ ವಂದನೆ, ಸಂಘ ವಂದನೆ ಸಲ್ಲಿಸಿ ಗೌತಮ ಬುದ್ಧರ ಪಂಚಶೀಲ ಬೋಧನೆ ಮಾಡಲಾಯಿತು. ನಂತರ, ಸುತ್ತಪಠಣ, ಧ್ಯಾನಪಠಣ, ಸೂತ್ರಪಠಣವನ್ನು ಮಣ್ಣು ಮಾಡಲಾಯಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

2 mins ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

1 hour ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

1 hour ago

ರಾಜ್ಯದಲ್ಲಿ ಪೂರ್ವ ಮುಂಗಾರು ಆರ್ಭಟ: ಮುಂದಿನ 7 ದಿನ ಮುಂದುವರಿಯಲಿದೆ ಮಳೆ

ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ…

2 hours ago

ಬೆಂಗಳೂರಿಗಿಂತ ಮಡಿಕೇರಿಯ ವಾಯುಗುಣಮಟ್ಟವೇ ಉತ್ತಮ!

ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…

2 hours ago

ತಮಿಳುನಾಡು ಸಿಎಂ ವಿಜಯ್‌ ಸಾಧನೆ ಹೊಗಳಿದ ರಜಿನಿಕಾಂತ್‌

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ‌ ಚನ್ನೈನ ತಮ್ಮ ನಿವಾಸದಲ್ಲಿ…

3 hours ago