ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ ಮೂರು ಹೊತ್ತು ಪ್ರಸಾದ ವಿತರಣೆ ಮಾಡಲಾಗುತ್ತದೆ.
ಮಧ್ಯಾಹ್ನದ ವೇಳೆ ಮಾತ್ರ ಪ್ರಸಾದ(ಊಟ ) ನೀಡುತ್ತಿದ್ದ ದೇವಸ್ಥಾನದ ದಾಸೋಹ ಭವನದಲ್ಲಿ ಇಂದಿನಿಂದ ಬೆಳಗ್ಗೆ ತಿಂಡಿ ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ.
ಮಹದೇಶ್ವರ ಬೆಟ್ಟದ ಮಾದರಿಯಲ್ಲಿ ನಂಜುಂಡೇಶ್ವರನ ದೇವಸ್ಥಾನದಲ್ಲೂ ಊಟದ ವ್ಯವಸ್ಥೆ ಮಾಡಲಾಗಿದ್ದು, ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಇಂದು ಈ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.
ರಾಜ್ಯ ಸರ್ಕಾರದ ಉಚಿತ ಬಸ್ ವ್ಯವಸ್ಥೆಯ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲ ಭಕ್ತರ ಅನುಕೂಲಕ್ಕಾಗಿ ಬೆಳಿಗ್ಗೆ, ಮಧ್ಯಾಹ್ನ ರಾತ್ರಿ ಪ್ರಸಾದ ವಿತರಣೆ ಮಾಡಲಾಗುತ್ತದೆ.
ಈ ಮೂಲಕ ವರ್ಷದ ಎಲ್ಲಾ ದಿನಗಳಲ್ಲೂ ಭಕ್ತರಿಗೆ ನಂಜುಂಡೇಶ್ವರನ ಪ್ರಸಾದ ಇರಲಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…