ಮೈಸೂರು

ರಘುಪತಿ ಭಟ್‌ಗೆ ಟಿಕೆಟ್‌ ಸಿಗದಿದ್ದಕ್ಕೆ ಅಸಮಧಾನ ವ್ಯಕ್ತಪಡಿಸಿದ ಪ್ರತಾಪ್‌ ಸಿಂಹ

ಮೈಸೂರು: ವಿಧಾನ ಪರಿಷತ್‌ ನೈಋತ್ಯ ಪದವೀಧರರ ಕ್ಷೇತ್ರದಿಂದ ಟಿಕೆಟ್‌ ಆಕಾಂಕ್ಷಿಯಾಗಿದ್ದ ರಘುಪತಿ ಭಟ್‌ ಅವರಿಗೆ ಬಿಜೆಪಿ ಟಿಕೆಟ್‌ ನಿರಾಕರಿಸಿತ್ತು. ಹೀಗಾಗಿ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೇ ಮಾಡಿದ್ದಾರೆ.

ಈ ಸಂಬಂಧ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಬಂಡಾಯ ಅಭ್ಯರ್ಥಿ ವಿರುದ್ಧ ಶಿಸ್ತು ಉಲ್ಲಂಘನೆ ಆರೋಪದಡಿ ಪಕ್ಷ ಅವರನ್ನು ಉಚ್ಛಾಟಿಸಿತು.

ಇದರ ಬೆನ್ನಲ್ಲೇ ರಘುಪತಿ ಭಟ್‌ರ ಉಚ್ಛಾಟನೆ ಬಗ್ಗೆ ಹಿಜಾಬ್‌ ವಿಚಾರವಾಗಿ ಪ್ರಚಾರವಾಗಿದ್ದ ಆಲಿಯಾ ಗೇಲಿ ಮಾಡಿದ್ದರು. ಇಷ್ಟೆಲ್ಲಾ ವಿವಾದ ಬಳಿಕ ಇಂದು ಪ್ರತಾಪ್‌ ಸಿಂಹ ರಘುಪತಿ ಭಟ್‌ ಪರವಾಗಿ ಟ್ವೀಟ್‌ ಮಾಡಿ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಬಿಜೆಪಿ ರಘುಪತಿಯವರನ್ನು ಮೂಲೆಗುಂಪು ಮಾಡಿದ್ದಾರೆ ಎಂದು ಹೇಳಿದ್ದಾರೆ. ಪ್ರತಾಪ್‌ ಸಿಂಹ ತಮ್ಮ ಟ್ವೀಟ್‌ನಲ್ಲಿ “ಉಡುಪಿ ಶಾಲೆಯೊಂದರ ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿ ವಿರುದ್ಧ ಹೋರಾಡಿದ ರಘುಪತಿ ಭಟ್ಟರಿಗೆ ಎಂಎಲ್‌ಎ ಟಿಕೆಟ್ಟೂ ಸಿಗಲಿಲ್ಲ, ಎಂಎಲ್‌ಸಿ ಟಿಕೆಟ್ಟನೂ ಕೊಡಲಿಲ್ಲ. ಸಾಲದೆಂಬಂತೆ ಪಕ್ಷದಿಂದಲೂ ಉಚ್ಛಾಟನೆಗೆ ಒಳಗಾಗಿ ಬುರ್ಖಾ ಸ್ಟೂಡೆಂಟ್‌ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ” ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ವ್ಯಾಪಕ ವಿರೋಧ ಚರ್ಚೆಯಾಗುತ್ತಿದ್ದ ಬೆನ್ನಲ್ಲೇ ತಮ್ಮ ಟ್ವೀಟನ್ನು ಪ್ರತಾಪ್‌ ಸಿಂಹ ಅಳಿಸಿ ಹಾಕಿದ್ದಾರೆ.

ಇನ್ನು ಪ್ರತಾಪ್‌ ಸಿಂಹ ಅವರ ಟ್ವೀಟ್‌ಗೆ ಕೃತಜ್ಞನತೆ ಸಲ್ಲಿಸಿದ್ದಾರೆ. “ಪ್ರತಾಪ್‌ ಸಿಂಹ ಅವರಿಗೆ ವಂದನೆಗಳು. ನಿಜವಾದ ಬಿಜೆಪಿ ನಾಯಕರಿಗೆ, ಕಾರ್ಯಕರ್ತರಿಗೆ ಮತ್ತು ಹಿಂದುತ್ವವಾದಿಗಳಿಗೆ ನನ್ನ ನಿಲುವು ಏನೆಂದು ಸ್ಪಷ್ಟವಾಗಿ ತಿಳಿದಿದೆ. ಪರಿವಾರದ ಮನಸ್ಥಿತಿಯ ನಿಷ್ಠಾವಂತ ಕಾರ್ಯಕರ್ತರು ಎಂದಿಗೂ ನನ್ನ ಜೊತೆ ಇದ್ದಾರೆ. ನನ್ನ ಉಸಿರು ಇರುವವರೆಗೆ ಅವರಿಗೆ ಧನಿಯಾಗಿ ಇರುತ್ತೇನೆ” ಎಂದು ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

https://x.com/RaghupathiBhat/status/1797481606569189701

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

1 hour ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

1 hour ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

1 hour ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago