ಮೈಸೂರು

ತಡರಾತ್ರಿ ಫೇಸ್‌ ಬುಕ್‌ ಲೈವ್‌ನಲ್ಲಿ ಬಂದು ಭಾವುಕರಾದ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಭಾರೀ ಕುತೂಹಲಕ್ಕೆ ಕಾರಣವಾಗಿರುವ ಮೈಸೂರು-ಕೊಡಗು ಕ್ಷೇತ್ರಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆಯ ಮಾತುಗಳು ಕೇಳಿಬರುತ್ತಿರುವಂತೆಯೇ, ಈ ಕುರಿತು ಸೋಮವಾರ ರಾತ್ರಿ ದಿಢೀರ್ ಫೇಸ್ ಬುಕ್ ಲೈವ್ ನಲ್ಲಿ ಬಂದು ಭಾವುಕದ ಮಾತುಗಳನ್ನಾಡಿದ್ದಾರೆ.

ಹೌದು. ಅತ್ತ ದೆಹಲಿಯಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿರುವ ಸಮಯದಲ್ಲಿಯೇ ಸಾಮಾಜಿಕ ಮಾಧ್ಯಮ ಫೇಸ್ ಬುಕ್ ಲೈವ್ ನಲ್ಲಿ ಕಾಣಿಸಿಕೊಂಡ ಪ್ರತಾಪ್ ಸಿಂಹ, ಮಾ. 11ರಂದು ಮೈಸೂರು – ಮನಮಧುರೈ ರೈಲಿಗೆ ಚಾಲನೆ ನೀಡಿದ್ದನ್ನು ಹೇಳಿದರು. ಸಂಸದನಾಗಿ ನನ್ನ ಮೊದಲ ಅವಧಿಯ ಕಡೆ ತಿಂಗಳಲ್ಲಿ ನಾನು ಮೈಸೂರು – ಕಾಚಿಗೂಡ ರೈಲು ತಂದಿದ್ದೆ. ಎರಡನೇ ಅವಧಿಯ ಕಡೆಯ ಹಂತದಲ್ಲಿ ಮೈಸೂರು – ಮನಮಧುರೈ ರೈಲಿಗೆ ಫ್ಲಾಗ್ ಆಫ್ ಮಾಡಿದ್ದೇನೆ ಎಂದು ತಿಳಿಸಿದರು.

ಮೈಸೂರಲ್ಲಿ ರಾಜಕಾರಣ ಮಾಡುವುದು ತುಂಬಾ ಕಷ್ಟ. ರಾಜರ ಊರು ಅಂದಮೇಲೆ ಚಾಡಿಕೋರರು, ಹೊಗಳುಭಟ್ಟರು ಎಲ್ಲರೂ ಇರುತ್ತಾರೆ. ಸಿದ್ದಾಂತ ಬೇರೂರುವುದು ಬಹಳ ಕಷ್ಟ. 1989ರಿಂದ ಮೈಸೂರಿನಲ್ಲಿ ಸತತವಾಗಿ ಎರಡನೇ ಸಲ ಯಾರನ್ನೂ ಗೆಲ್ಲಿಸಿಲ್ಲ. ಜನ ನನ್ನನ್ನು ಗೆಲ್ಲಿಸಿದ್ದಾರೆ. ಜನರಿಗೆ ಅವರ ಮನೆ ಬಾಗಿಲು ಕಾಯುವವರು ಬೇಕು. ಜನರು ಹೋಗಿ ಬಾಗಿಲು ಕಾಯುವರು ಅವರಿಗೆ ಬೇಡ. ಮೈಸೂರಿನಲ್ಲಿ ಎರಡು ಬಾರಿ ರಾಜವಂಶಸ್ಥರನ್ನು ಸೋಲಿಸಿದ್ದಾರೆ. ಆದರೆ 40 ವರ್ಷಗಳಲ್ಲಿ ನಾನೊಬ್ಬನನ್ನು ಮಾತ್ರ ಸತತ ಎರಡು ಬಾರಿ ಗೆಲ್ಲಿಸಿದ್ದಾರೆ. ನನ್ನ ಟಿಕೆಟ್ ಬಗ್ಗೆ ಚಾಮುಂಡೇಶ್ವರಿ ನಿರ್ಧಾರ ಮಾಡುತ್ತಾಳೆ. ಆ ತಾಯಿಗೆ ಬಿಟ್ಟಿದ್ದೇನೆ. ಟಿಕೆಟ್ ನನಗೆ ಕೊಟ್ಟರೆ ನಾನು 3 ಲಕ್ಷ ಅಂತರದಿಂದ ಗೆಲ್ಲುತ್ತೇನೆ. ಕಾರ್ಯಕರ್ತರು ನನ್ನ ಪರ ನಿಂತಿದ್ದಾರೆ ಎಂದು ತಿಳಿಸಿದರು.

ರಾಜಕೀಯದಲ್ಲಿ ದ್ವೇಷ ಅಸೂಯೇ ಸಹಜ ನನ್ನ ಕೆಲಸ ನೋಡಿ ಜನ ಸಾಮಾಜಿಕ ಮಾಧ್ಯಮದಲ್ಲಿ ಬೆಂಬಲಕ್ಕೆ ನಿಂತಿದ್ದಾರೆ ಸಾಕು. ನಿಮ್ಮ ಹೃದಯದಲ್ಲಿ ನನಗೆ ಸ್ಥಾನ ಕೊಟ್ಟಿದ್ದೀರಿ. 28 ವಿಧಾನ ಸಭಾ ಕ್ಷೇತ್ರದಲ್ಲಿ ಯಾವ ಎಂಪಿ ಪರವಾಗಿ ಜನ ನಿಂತಿಲ್ಲ. ನನ್ನ ಪರವಾಗಿ ನಿಂತಿದ್ದಾರೆ. ದೇಶಕ್ಕೆ ಮೋದಿ ಹೇಗೆ ಬೇಕೋ ಹಾಗೇ ಆಯಾ ಕ್ಷೇತ್ರಕ್ಕೆ ಒಬ್ಬೊಬ್ಬ ಛೋಟಾ ಮೋದಿ ಬೇಕು ಅಂತಾ ಬಯಸುತ್ತಾರೆ. ದೇವರು ಆಶೀರ್ವಾದ ಇದ್ದರೆ ಮೂರನೇ ಬಾರಿಗೆ ನಿಮ್ಮ ಸೇವೆ ಮಾಡುತ್ತೇನೆ. ಕೊಡಗಿಗೆ ಎರಡು ಅವಧಿಯಲ್ಲಿ ಸ್ವಲ್ಪ ಕಡಿಮೆ ಕೆಲಸ ಮಾಡಿದ್ದೆ. ಕೊಡಗಿನ ಋಣ ತೀರಿಸಬೇಕಿದೆ. ಆ ಕೆಲಸವನ್ನು ಮೂರನೇ ಬಾರಿಯ ಅವಧಿಯಲ್ಲಿ ಮಾಡುತ್ತೇನೆ. ಮೈಸೂರಿಗೆ ಅತಿ ಹೆಚ್ಚಿನ ಕೆಲಸ ಮಾಡಿರುವುದಾಗಿ ತಿಳಿಸಿದರು.

andolanait

Recent Posts

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

3 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

5 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

6 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

7 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

11 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

11 hours ago