ಮೈಸೂರು : ಭಾರೀ ಕುತೂಹಲಕ್ಕೆ ಕಾರಣವಾಗಿರುವ ಮೈಸೂರು-ಕೊಡಗು ಕ್ಷೇತ್ರಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆಯ ಮಾತುಗಳು ಕೇಳಿಬರುತ್ತಿರುವಂತೆಯೇ, ಈ ಕುರಿತು ಸೋಮವಾರ ರಾತ್ರಿ ದಿಢೀರ್ ಫೇಸ್ ಬುಕ್ ಲೈವ್ ನಲ್ಲಿ ಬಂದು ಭಾವುಕದ ಮಾತುಗಳನ್ನಾಡಿದ್ದಾರೆ.
ಹೌದು. ಅತ್ತ ದೆಹಲಿಯಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿರುವ ಸಮಯದಲ್ಲಿಯೇ ಸಾಮಾಜಿಕ ಮಾಧ್ಯಮ ಫೇಸ್ ಬುಕ್ ಲೈವ್ ನಲ್ಲಿ ಕಾಣಿಸಿಕೊಂಡ ಪ್ರತಾಪ್ ಸಿಂಹ, ಮಾ. 11ರಂದು ಮೈಸೂರು – ಮನಮಧುರೈ ರೈಲಿಗೆ ಚಾಲನೆ ನೀಡಿದ್ದನ್ನು ಹೇಳಿದರು. ಸಂಸದನಾಗಿ ನನ್ನ ಮೊದಲ ಅವಧಿಯ ಕಡೆ ತಿಂಗಳಲ್ಲಿ ನಾನು ಮೈಸೂರು – ಕಾಚಿಗೂಡ ರೈಲು ತಂದಿದ್ದೆ. ಎರಡನೇ ಅವಧಿಯ ಕಡೆಯ ಹಂತದಲ್ಲಿ ಮೈಸೂರು – ಮನಮಧುರೈ ರೈಲಿಗೆ ಫ್ಲಾಗ್ ಆಫ್ ಮಾಡಿದ್ದೇನೆ ಎಂದು ತಿಳಿಸಿದರು.
ಮೈಸೂರಲ್ಲಿ ರಾಜಕಾರಣ ಮಾಡುವುದು ತುಂಬಾ ಕಷ್ಟ. ರಾಜರ ಊರು ಅಂದಮೇಲೆ ಚಾಡಿಕೋರರು, ಹೊಗಳುಭಟ್ಟರು ಎಲ್ಲರೂ ಇರುತ್ತಾರೆ. ಸಿದ್ದಾಂತ ಬೇರೂರುವುದು ಬಹಳ ಕಷ್ಟ. 1989ರಿಂದ ಮೈಸೂರಿನಲ್ಲಿ ಸತತವಾಗಿ ಎರಡನೇ ಸಲ ಯಾರನ್ನೂ ಗೆಲ್ಲಿಸಿಲ್ಲ. ಜನ ನನ್ನನ್ನು ಗೆಲ್ಲಿಸಿದ್ದಾರೆ. ಜನರಿಗೆ ಅವರ ಮನೆ ಬಾಗಿಲು ಕಾಯುವವರು ಬೇಕು. ಜನರು ಹೋಗಿ ಬಾಗಿಲು ಕಾಯುವರು ಅವರಿಗೆ ಬೇಡ. ಮೈಸೂರಿನಲ್ಲಿ ಎರಡು ಬಾರಿ ರಾಜವಂಶಸ್ಥರನ್ನು ಸೋಲಿಸಿದ್ದಾರೆ. ಆದರೆ 40 ವರ್ಷಗಳಲ್ಲಿ ನಾನೊಬ್ಬನನ್ನು ಮಾತ್ರ ಸತತ ಎರಡು ಬಾರಿ ಗೆಲ್ಲಿಸಿದ್ದಾರೆ. ನನ್ನ ಟಿಕೆಟ್ ಬಗ್ಗೆ ಚಾಮುಂಡೇಶ್ವರಿ ನಿರ್ಧಾರ ಮಾಡುತ್ತಾಳೆ. ಆ ತಾಯಿಗೆ ಬಿಟ್ಟಿದ್ದೇನೆ. ಟಿಕೆಟ್ ನನಗೆ ಕೊಟ್ಟರೆ ನಾನು 3 ಲಕ್ಷ ಅಂತರದಿಂದ ಗೆಲ್ಲುತ್ತೇನೆ. ಕಾರ್ಯಕರ್ತರು ನನ್ನ ಪರ ನಿಂತಿದ್ದಾರೆ ಎಂದು ತಿಳಿಸಿದರು.
ರಾಜಕೀಯದಲ್ಲಿ ದ್ವೇಷ ಅಸೂಯೇ ಸಹಜ ನನ್ನ ಕೆಲಸ ನೋಡಿ ಜನ ಸಾಮಾಜಿಕ ಮಾಧ್ಯಮದಲ್ಲಿ ಬೆಂಬಲಕ್ಕೆ ನಿಂತಿದ್ದಾರೆ ಸಾಕು. ನಿಮ್ಮ ಹೃದಯದಲ್ಲಿ ನನಗೆ ಸ್ಥಾನ ಕೊಟ್ಟಿದ್ದೀರಿ. 28 ವಿಧಾನ ಸಭಾ ಕ್ಷೇತ್ರದಲ್ಲಿ ಯಾವ ಎಂಪಿ ಪರವಾಗಿ ಜನ ನಿಂತಿಲ್ಲ. ನನ್ನ ಪರವಾಗಿ ನಿಂತಿದ್ದಾರೆ. ದೇಶಕ್ಕೆ ಮೋದಿ ಹೇಗೆ ಬೇಕೋ ಹಾಗೇ ಆಯಾ ಕ್ಷೇತ್ರಕ್ಕೆ ಒಬ್ಬೊಬ್ಬ ಛೋಟಾ ಮೋದಿ ಬೇಕು ಅಂತಾ ಬಯಸುತ್ತಾರೆ. ದೇವರು ಆಶೀರ್ವಾದ ಇದ್ದರೆ ಮೂರನೇ ಬಾರಿಗೆ ನಿಮ್ಮ ಸೇವೆ ಮಾಡುತ್ತೇನೆ. ಕೊಡಗಿಗೆ ಎರಡು ಅವಧಿಯಲ್ಲಿ ಸ್ವಲ್ಪ ಕಡಿಮೆ ಕೆಲಸ ಮಾಡಿದ್ದೆ. ಕೊಡಗಿನ ಋಣ ತೀರಿಸಬೇಕಿದೆ. ಆ ಕೆಲಸವನ್ನು ಮೂರನೇ ಬಾರಿಯ ಅವಧಿಯಲ್ಲಿ ಮಾಡುತ್ತೇನೆ. ಮೈಸೂರಿಗೆ ಅತಿ ಹೆಚ್ಚಿನ ಕೆಲಸ ಮಾಡಿರುವುದಾಗಿ ತಿಳಿಸಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…