ಮೈಸೂರು

ತಡರಾತ್ರಿ ಫೇಸ್‌ ಬುಕ್‌ ಲೈವ್‌ನಲ್ಲಿ ಬಂದು ಭಾವುಕರಾದ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಭಾರೀ ಕುತೂಹಲಕ್ಕೆ ಕಾರಣವಾಗಿರುವ ಮೈಸೂರು-ಕೊಡಗು ಕ್ಷೇತ್ರಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆಯ ಮಾತುಗಳು ಕೇಳಿಬರುತ್ತಿರುವಂತೆಯೇ, ಈ ಕುರಿತು ಸೋಮವಾರ ರಾತ್ರಿ ದಿಢೀರ್ ಫೇಸ್ ಬುಕ್ ಲೈವ್ ನಲ್ಲಿ ಬಂದು ಭಾವುಕದ ಮಾತುಗಳನ್ನಾಡಿದ್ದಾರೆ.

ಹೌದು. ಅತ್ತ ದೆಹಲಿಯಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿರುವ ಸಮಯದಲ್ಲಿಯೇ ಸಾಮಾಜಿಕ ಮಾಧ್ಯಮ ಫೇಸ್ ಬುಕ್ ಲೈವ್ ನಲ್ಲಿ ಕಾಣಿಸಿಕೊಂಡ ಪ್ರತಾಪ್ ಸಿಂಹ, ಮಾ. 11ರಂದು ಮೈಸೂರು – ಮನಮಧುರೈ ರೈಲಿಗೆ ಚಾಲನೆ ನೀಡಿದ್ದನ್ನು ಹೇಳಿದರು. ಸಂಸದನಾಗಿ ನನ್ನ ಮೊದಲ ಅವಧಿಯ ಕಡೆ ತಿಂಗಳಲ್ಲಿ ನಾನು ಮೈಸೂರು – ಕಾಚಿಗೂಡ ರೈಲು ತಂದಿದ್ದೆ. ಎರಡನೇ ಅವಧಿಯ ಕಡೆಯ ಹಂತದಲ್ಲಿ ಮೈಸೂರು – ಮನಮಧುರೈ ರೈಲಿಗೆ ಫ್ಲಾಗ್ ಆಫ್ ಮಾಡಿದ್ದೇನೆ ಎಂದು ತಿಳಿಸಿದರು.

ಮೈಸೂರಲ್ಲಿ ರಾಜಕಾರಣ ಮಾಡುವುದು ತುಂಬಾ ಕಷ್ಟ. ರಾಜರ ಊರು ಅಂದಮೇಲೆ ಚಾಡಿಕೋರರು, ಹೊಗಳುಭಟ್ಟರು ಎಲ್ಲರೂ ಇರುತ್ತಾರೆ. ಸಿದ್ದಾಂತ ಬೇರೂರುವುದು ಬಹಳ ಕಷ್ಟ. 1989ರಿಂದ ಮೈಸೂರಿನಲ್ಲಿ ಸತತವಾಗಿ ಎರಡನೇ ಸಲ ಯಾರನ್ನೂ ಗೆಲ್ಲಿಸಿಲ್ಲ. ಜನ ನನ್ನನ್ನು ಗೆಲ್ಲಿಸಿದ್ದಾರೆ. ಜನರಿಗೆ ಅವರ ಮನೆ ಬಾಗಿಲು ಕಾಯುವವರು ಬೇಕು. ಜನರು ಹೋಗಿ ಬಾಗಿಲು ಕಾಯುವರು ಅವರಿಗೆ ಬೇಡ. ಮೈಸೂರಿನಲ್ಲಿ ಎರಡು ಬಾರಿ ರಾಜವಂಶಸ್ಥರನ್ನು ಸೋಲಿಸಿದ್ದಾರೆ. ಆದರೆ 40 ವರ್ಷಗಳಲ್ಲಿ ನಾನೊಬ್ಬನನ್ನು ಮಾತ್ರ ಸತತ ಎರಡು ಬಾರಿ ಗೆಲ್ಲಿಸಿದ್ದಾರೆ. ನನ್ನ ಟಿಕೆಟ್ ಬಗ್ಗೆ ಚಾಮುಂಡೇಶ್ವರಿ ನಿರ್ಧಾರ ಮಾಡುತ್ತಾಳೆ. ಆ ತಾಯಿಗೆ ಬಿಟ್ಟಿದ್ದೇನೆ. ಟಿಕೆಟ್ ನನಗೆ ಕೊಟ್ಟರೆ ನಾನು 3 ಲಕ್ಷ ಅಂತರದಿಂದ ಗೆಲ್ಲುತ್ತೇನೆ. ಕಾರ್ಯಕರ್ತರು ನನ್ನ ಪರ ನಿಂತಿದ್ದಾರೆ ಎಂದು ತಿಳಿಸಿದರು.

ರಾಜಕೀಯದಲ್ಲಿ ದ್ವೇಷ ಅಸೂಯೇ ಸಹಜ ನನ್ನ ಕೆಲಸ ನೋಡಿ ಜನ ಸಾಮಾಜಿಕ ಮಾಧ್ಯಮದಲ್ಲಿ ಬೆಂಬಲಕ್ಕೆ ನಿಂತಿದ್ದಾರೆ ಸಾಕು. ನಿಮ್ಮ ಹೃದಯದಲ್ಲಿ ನನಗೆ ಸ್ಥಾನ ಕೊಟ್ಟಿದ್ದೀರಿ. 28 ವಿಧಾನ ಸಭಾ ಕ್ಷೇತ್ರದಲ್ಲಿ ಯಾವ ಎಂಪಿ ಪರವಾಗಿ ಜನ ನಿಂತಿಲ್ಲ. ನನ್ನ ಪರವಾಗಿ ನಿಂತಿದ್ದಾರೆ. ದೇಶಕ್ಕೆ ಮೋದಿ ಹೇಗೆ ಬೇಕೋ ಹಾಗೇ ಆಯಾ ಕ್ಷೇತ್ರಕ್ಕೆ ಒಬ್ಬೊಬ್ಬ ಛೋಟಾ ಮೋದಿ ಬೇಕು ಅಂತಾ ಬಯಸುತ್ತಾರೆ. ದೇವರು ಆಶೀರ್ವಾದ ಇದ್ದರೆ ಮೂರನೇ ಬಾರಿಗೆ ನಿಮ್ಮ ಸೇವೆ ಮಾಡುತ್ತೇನೆ. ಕೊಡಗಿಗೆ ಎರಡು ಅವಧಿಯಲ್ಲಿ ಸ್ವಲ್ಪ ಕಡಿಮೆ ಕೆಲಸ ಮಾಡಿದ್ದೆ. ಕೊಡಗಿನ ಋಣ ತೀರಿಸಬೇಕಿದೆ. ಆ ಕೆಲಸವನ್ನು ಮೂರನೇ ಬಾರಿಯ ಅವಧಿಯಲ್ಲಿ ಮಾಡುತ್ತೇನೆ. ಮೈಸೂರಿಗೆ ಅತಿ ಹೆಚ್ಚಿನ ಕೆಲಸ ಮಾಡಿರುವುದಾಗಿ ತಿಳಿಸಿದರು.

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

16 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

16 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

16 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

16 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

16 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

16 hours ago