ಮೈಸೂರು

ಬೌದ್ಧಿಕ ದಿವಾಳಿತನ ಪ್ರದರ್ಶಿಸುವ ಪ್ರತಾಪ್‌ ಸಿಂಹ : ಅಬ್ದುಲ್‌ ಮಜೀದ್‌ ಟೀಕೆ

ಮೈಸೂರು : ಪ್ರತಾಪ್ ಸಿಂಹನಿಗೆ ಇತಿಹಾಸ ಗೊತ್ತಿಲ್ಲ, ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕೆಆರ್‌ಎಸ್ ಜಲಾಶಯವನ್ನು ಟಿಪ್ಪುಸುಲ್ತಾನ್ ಕಟ್ಟಿಸಿದ್ದು ಎಂದು ಎಲ್ಲೂ ಹೇಳಿಲ್ಲ, ಕಾವೇರಿ ನದಿಗೆ ಅಣೆಕಟ್ಟೆ ಕಟ್ಟುವ ಯೋಜನೆ ರೂಪಿಸಿ ಅದಕ್ಕೆ ಮೊದಲು ಅಡಿಗಲ್ಲು ಹಾಕಿಸಿದ್ದು ಟಿಪ್ಪು ಎಂದು ಹೇಳಿದ್ದಾರೆ ಅಷ್ಟೇ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದರು.

ಮಹದೇವಪುರ ರಸ್ತೆಯಲ್ಲಿರುವ ಎಸ್‌ಡಿಪಿಐ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಶಾಸನವನ್ನು ಕೆಆರ್‌ಎಸ್ ಜಲಾಶಯ ಕಟ್ಟಿಸಿದ ಮಹಾತ್ಮರಾದ ನಾಲ್ವಡಿ ಕೃಷ್ಣರಾಜ ಪಡೆಯರ್ ಅವರೇ ಜಲಾಶಯದ ಬಳಿ ಟಿಪ್ಪು ಪರ್ಶಿಯನ್ ಭಾಷೆಯಲ್ಲಿ ಬರೆಸಿದ್ದ ಶಾಸನವನ್ನು ಕನ್ನಡದಲ್ಲಿ ಬರೆಸಿ ಜಲಾಶಯದ ಬಳಿಯೇ ಹಾಕಿಸುವ ಮೂಲಕ ತಮ್ಮ ದೊಡ್ಡತನವನ್ನು ಮೆರೆದಿದ್ದಾರೆ. ಆದರೆ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ಮಾತ್ರ ತಮ್ಮ ಬೌದ್ಧಿಕ ದಿವಾಳಿತನವನ್ನು ಪ್ರದರ್ಶಿಸಿದ್ದಾರೆ ಎಂದು ಟೀಕಿಸಿದರು.

ವಿಶ್ವವಿಖ್ಯಾತ ಆಗ್ರಾದ ತಾಜ್‌ಮಹಲ್, ದೆಹಲಿಯ ಕೆಂಪುಕೋಟೆ, ಕುತುಬ್ ಮಿನಾರ್, ಅಷ್ಟೇ ಏಕೆ ಕರ್ನಾಟಕದಲ್ಲಿರುವ ಗೋಲ್ ಗುಂಬಜ್ ಕಟ್ಟಡಗಳ ಡಿಪಿಆರ್ ಮಾಡಿದವರು ಯಾರು ಎಂಬುದು ಗೊತ್ತಿದೆಯಾ? ಎಂದು ಪ್ರಶ್ನಿಸಿದರು.

ಹೈದರ್ ಅಲಿಖಾನ್ ಮತ್ತು ಟಿಪ್ಪುಸುಲ್ತಾನ್ ಅವರು ಈ ನಾಡಿನ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಯಾರೂ ಮರೆಯಲು ಸಾಧ್ಯವಿಲ್ಲ. ನೀರಾವರಿ ಇಲ್ಲದ ಸಂದರ್ಭದಲ್ಲಿ ಚೀನಾದಿಂದ ರೇಷ್ಮೆ ಬೆಳೆಯನ್ನು ತರಿಸಿ ತನ್ನ ರಾಜ್ಯದಲ್ಲಿ ಅಭಿವೃದ್ಧಿಪಡಿಸಿದರು. ವಾಣಿಜ್ಯ ಬೆಳೆಗಳಿಗೆ ಪ್ರೋತ್ಸಾಹ ನೀಡಿದರು. ೧೭೮೨ರಲ್ಲಿ ಟಿಪ್ಪು ಸುಲ್ತಾನ್ ಅವರು, ಕಾವೇರಿ ನದಿಗೆ ೭೦ ಅಡಿ ಎತ್ತರದ ಅಣೆಕಟ್ಟೆ ಕಟ್ಟುವ ಮೂಲಕ ರೈತರ ಬದುಕು ಹಸನು ಮಾಡಲು ಯತ್ನಿಸಿ ಅದಕ್ಕೆ ಹಣಕಾಸು ಹೊಂದಿಸಿದ್ದರು. ಆದರೆ, ೩ ನೇ ಮೈಸೂರು ಆಂಗ್ಲೋ ಯುದ್ಧದಲ್ಲಿ ಟಿಪ್ಪು ಬ್ರಿಟೀಷರ ವಿರುದ್ಧ ಸೋಲು ಅನುಭವಿಸಿ ಯುದ್ಧದ ಖರ್ಚು ೩ ಕೋಟಿ ಹಣವನ್ನು ಬ್ರಿಟಿಷರಿಗೆ ಕೊಡಲಾಗದೆ ತಮ್ಮ ಮಕ್ಕಳನ್ನು ಒತ್ತೆ ಇಟ್ಟಿದ್ದು ಯಾರೂ ಮರೆಯಲು ಸಾಧ್ಯವಿಲ್ಲ ಎಂದರು.

ನಾಲ್ಕನೇ ಮೈಸೂರು-ಆಂಗ್ಲೋ ಯುದ್ಧದಲ್ಲಿ ಟಿಪ್ಪು ವೀರ ಮರಣ ಹೊಂದಿದಾಗ ಅಣೆಕಟ್ಟೆ ಕಟ್ಟುವ ಯೋಜನೆ ಇಲ್ಲದಾಯಿತು. ಆದರೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕೆಆರ್‌ಎಸ್ ಜಲಾಶಯ ಕಟ್ಟುವ ಸಂದರ್ಭದಲ್ಲಿ ಸಿಕ್ಕ ಶಾಸನವನ್ನು ಅದೇ ಜಾಗದಲ್ಲಿ ಇರಿಸಿದ್ದರು. ನಿಮ್ಮಂತವರು ಏನಾದರೂ ಆಗ ಇದ್ದಿದ್ದರೆ ಆ ಶಾಸನವನ್ನು ಒಡೆದು ಹಾಕುತ್ತಿದ್ದರು ಎಂದು ವ್ಯಂಗ್ಯವಾಡಿದರು.

ಟಿಪ್ಪುಸುಲ್ತಾನರ ಬಗ್ಗೆ ವ್ಯಂಗ್ಯವಾಗಿ ಮಾತನಾಡುವ ಪ್ರತಾಪ್ ಸಿಂಹ, ಮೈಸೂರು-ಕೊಡಗು ಜಿಲ್ಲೆಯಲ್ಲಿ ೪೦-೫೦ ವರ್ಷಗಳಿಂದ ಉಳುಮೆ ಮಾಡುತ್ತಿರುವ ಭೂ ರಹಿತರು ಅರ್ಜಿ ನಮೂನೆ ೫೦, ೫೩, ೫೭ ರಲ್ಲಿ ತಮಗೆ ಭೂ ಒಡೆತನ ನೀಡುವಂತೆ ಸರ್ಕಾರಕ್ಕೆ ೧೦ ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿ ತಾಲ್ಲೂಕು ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಟಿಪ್ಪು ಸುಲ್ತಾನರು ತಮ್ಮ ಆಳ್ವಿಕೆಯಲ್ಲೇ ಭೂ ರಹಿತ ದಲಿತರಿಗೆ, ಇತರರಿಗೆ ಭೂಮಿ ಒಡೆತನ ನೀಡಿದ್ದರೂ ಎನ್ನುವುದು ಗೊತ್ತಿಲ್ಲದಿದ್ದರೆ, ಇತಿಹಾಸ ಓದು ಎಂದು ಅಬ್ದುಲ್ ಮಜೀದ್ ಏಕವಚನದಲ್ಲೇ ತಿರುಗೇಟು ನೀಡಿದರು.

೧೩೪೦ ರಲ್ಲಿ ಹೊಯ್ಸಳರ ಕಾಲದಲ್ಲಿ ಮುಡುಕುತೋರೆ ಬಳಿ ಅಣೆಕಟ್ಟೆ ಕಟ್ಟಲಾಗಿತ್ತು, ಅದಕ್ಕೂ ಮುನ್ನ ಗಂಗರು ಪಾಂಡವಪುರದ ಬಳಿ ಅಣೆಕಟ್ಟೆ ಕಟ್ಟಿದ್ದಾರೆ. ಅದರ ಡಿಪಿಆರ್ ಕೇಳಲು ನಿನಗೆ ಆಗುತ್ತದೆಯಾ? ಪದೇ ಪದೆ ಟಿಪ್ಪುಸುಲ್ತಾನರ ಅವಹೇಳನ ಸಲ್ಲದು, ಟಿಪ್ಪು ಒಬ್ಬ ಮುಸ್ಲಿಂ ದೊರೆ ಎಂದು ಬಿಜೆಪಿಯವರು ಅವರ ಅಭಿವೃದ್ಧಿ ಕಾರ್ಯಗಳನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ. ಆದರೆ, ಇತಿಹಾಸವನ್ನು ಬದಲಾಯಿಸಲು ಅಸಾಧ್ಯ ಎಂದರು.

ಸುದ್ದಿಗೋಷ್ಠಿಯಲ್ಲಿ ಮಹಾ ನಗರಪಾಲಿಕೆ ಮಾಜಿ ಸದಸ್ಯರಾದ ಸ್ವಾಮಿ, ಮೈಸೂರು ಜಿಲ್ಲಾ ಎಸ್‌ಡಿಪಿಐ ಅಧ್ಯಕ್ಷ ರಫತ್ ಖಾನ್, ಫಿರ್ದೋಸ್, ಸಫಿಯುಲ್ಲಾ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

4 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

5 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

7 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

7 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

11 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

11 hours ago