ಮೈಸೂರು

ಸಿಎಂ ಸಿದ್ದರಾಮಯ್ಯ ಅವರ ಮೇಲೆ ಬೇಸರವಾಗಿದೆ: ಪ್ರತಾಪ್‌ ಸಿಂಹ ಹೀಗೆಳೀದ್ದೇಕೆ?

ಮೈಸೂರು: ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮಗೆ ಮುಡಾದಿಂದ ನೀಡಲಾಗಿರುವ ನಿವೇಶವನ್ನು ಮುಡಾಕ್ಕೆ ಹಿಂತಿರುಗಿಸುವ ಮೂಲಕ ಮೇಲ್ಪಂಕ್ತಿ ಹಾಕಿ ಕೊಡಬಹುದಾಗಿತ್ತು. ಆದರೆ ಅವರು ಅದನ್ನು ಮಾಡಲಿಲ್ಲ. ಆ ಮೂಲಕ ಈವರೆಗೆ ನಾನು ಅವರ ಮೇಲೆ ಇಟ್ಟಿದ್ದ ನಂಬಿಕೆಯನ್ನು ಹುಸಿಯಾಗಿಸುವ ಮೂಲಕ ಒಬ್ಬ ಮೈಸೂರಿಗನಿಗೆ ಅವರು ನಿರಾಸೆ ಮಾಡಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್‌ ಸಿಂಹ ಹತಾಶೆ ವ್ಯಕ್ತಪಡಿಸಿದರು.

ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ (ಜು.22) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ 20 ವರ್ಷದ ರಾಜಕೀಯ ಜೀವನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಒಂದೇ ಒಂದು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಲ್ಲ. ಅವರ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲದೇ ಬದುಕಿದ ರಾಜಕಾರಣಿ. ಅಂತವರ ವಿರುದ್ಧ ದೂರು ಬಂದಿರುವುದಕ್ಕೆ ಮತನಾಡುತ್ತಿದ್ದೇನೆ ಎಂದರು.

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನನಗೆ ವೈಯಕ್ತಿಕವಾಗಿ ಯಾವುದೇ ದ್ವೇಷವಿಲ್ಲ. ಸಿದ್ದರಾಮಯ್ಯ ಸಾಹೇಬ್ರು ಹಾಗೂ ನನಗೆ ಕೇವಲ ಸೈದ್ಧಾಂತಿಕ ಹಾಗೂ ಧಾರ್ಮಿಕ ವಿಚಾರಗಳಲ್ಲಿ ಮಾತ್ರ ವಿರೋಧ ಹೊರತು, ಅವರನ್ನು ವೈಕ್ತಿಗತವಾಗಿ ಟೀಕಿಸುವ ಗುಣ ನನ್ನಲ್ಲಿಲ್ಲ ಎಂದು ಹೇಳಿದರು.

ಮುಡಾ ಹಗರಣದಲ್ಲಿ ಸಿಎಂ ಅವರಿಗೆ ಅರಿವಿಲ್ಲದೇ ನಿವೇಶನ ಸಿಕ್ಕಿರಬಹುದು. ಈ ವೇಳೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದು ಅವರು ಸಹಾ ತಪ್ಪು ಮಾಡಿರಬಹುದು. ಇದೆಲ್ಲವನ್ನು ಹದಿನಾಲ್ಕು ಬಾರಿ ಬಜೆಟ್‌ ಮಂಡಿಸಿದ, ಓರ್ವ ವಕೀಲರಾದ ಸಿಎಂ ಸಿದ್ದರಾಮಯ್ಯ ಅವರು ಬದಿಗೊತ್ತಿ, ತಮಗೆ ನೀಡಿರುವ ನಿವೇಶನವನ್ನು ಹಿಂತಿರುಗಿಸಿ ಮುಕ್ತ ತನಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿದ್ದರೇ ಅವರ ಮೇಲಿನ ಗೌರವ ಇಮ್ಮಡಿಯಾಗುತ್ತಿತ್ತು.

ಆದರೆ ಅವರು 60ಕೋಟಿ ರೂ ನಿವೇಶನ ಎಂದು ಹೇಳುತ್ತಿರುವುದು ಅಪಹಾಸ್ಯಕ್ಕೆ ದಾರಿ ಮಾಡಿಕೊಟ್ಟಂತಾಗಿದೆ. ಈ ವಿಚಾರವಾಗಿ ಮೈಸೂರಿಗನಾಗಿ ನನಗೆ ವೈಯಕ್ತಿಕವಾಗಿ ಬೇಸರ, ನಿರಾಸೆ ಉಂಟಾಗಿದೆ ಎಂದು ಪ್ರತಾಪ್‌ ಸಿಂಹ ವಿಷಾಧಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

44 mins ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

5 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

5 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

5 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಿಸಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನಲ್ಲಿ ವಾಹನಗಳ ಸಂಚಾರದಟ್ಟಣೆ ವಿಪರೀತವಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಆರ್.ಪಿ .ರಸ್ತೆಯಲ್ಲಿ ರೈಲು ಬರುವ ವೇಳೆ…

5 hours ago

114 ಪ್ರದೇಶಗಳಲ್ಲಿ ಪ್ರವಾಹ, ಭೂಕುಸಿತ ಅಪಾಯ

ನವೀನ್ ಡಿಸೋಜ ಮಳೆ ಕಡಿಮೆಯಿದ್ದರೂ ಜಿಲ್ಲಾಡಳಿತದಿಂದ ಅಗತ್ಯ ಮುನ್ನೆಚ್ಚರಿಕೆ; ಅಪಾಯಕಾರಿ ಪ್ರದೇಶಗಳ ಗುರುತು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಜುಲೈ ಆರಂಭದಿಂದ…

5 hours ago