ಮೈಸೂರು

ಸಿಎಂ ಸಿದ್ದರಾಮಯ್ಯ ಅವರ ಮೇಲೆ ಬೇಸರವಾಗಿದೆ: ಪ್ರತಾಪ್‌ ಸಿಂಹ ಹೀಗೆಳೀದ್ದೇಕೆ?

ಮೈಸೂರು: ಮುಡಾ ಹಗರಣ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮಗೆ ಮುಡಾದಿಂದ ನೀಡಲಾಗಿರುವ ನಿವೇಶವನ್ನು ಮುಡಾಕ್ಕೆ ಹಿಂತಿರುಗಿಸುವ ಮೂಲಕ ಮೇಲ್ಪಂಕ್ತಿ ಹಾಕಿ ಕೊಡಬಹುದಾಗಿತ್ತು. ಆದರೆ ಅವರು ಅದನ್ನು ಮಾಡಲಿಲ್ಲ. ಆ ಮೂಲಕ ಈವರೆಗೆ ನಾನು ಅವರ ಮೇಲೆ ಇಟ್ಟಿದ್ದ ನಂಬಿಕೆಯನ್ನು ಹುಸಿಯಾಗಿಸುವ ಮೂಲಕ ಒಬ್ಬ ಮೈಸೂರಿಗನಿಗೆ ಅವರು ನಿರಾಸೆ ಮಾಡಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್‌ ಸಿಂಹ ಹತಾಶೆ ವ್ಯಕ್ತಪಡಿಸಿದರು.

ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ (ಜು.22) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ 20 ವರ್ಷದ ರಾಜಕೀಯ ಜೀವನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಒಂದೇ ಒಂದು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಲ್ಲ. ಅವರ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಇಲ್ಲದೇ ಬದುಕಿದ ರಾಜಕಾರಣಿ. ಅಂತವರ ವಿರುದ್ಧ ದೂರು ಬಂದಿರುವುದಕ್ಕೆ ಮತನಾಡುತ್ತಿದ್ದೇನೆ ಎಂದರು.

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನನಗೆ ವೈಯಕ್ತಿಕವಾಗಿ ಯಾವುದೇ ದ್ವೇಷವಿಲ್ಲ. ಸಿದ್ದರಾಮಯ್ಯ ಸಾಹೇಬ್ರು ಹಾಗೂ ನನಗೆ ಕೇವಲ ಸೈದ್ಧಾಂತಿಕ ಹಾಗೂ ಧಾರ್ಮಿಕ ವಿಚಾರಗಳಲ್ಲಿ ಮಾತ್ರ ವಿರೋಧ ಹೊರತು, ಅವರನ್ನು ವೈಕ್ತಿಗತವಾಗಿ ಟೀಕಿಸುವ ಗುಣ ನನ್ನಲ್ಲಿಲ್ಲ ಎಂದು ಹೇಳಿದರು.

ಮುಡಾ ಹಗರಣದಲ್ಲಿ ಸಿಎಂ ಅವರಿಗೆ ಅರಿವಿಲ್ಲದೇ ನಿವೇಶನ ಸಿಕ್ಕಿರಬಹುದು. ಈ ವೇಳೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದು ಅವರು ಸಹಾ ತಪ್ಪು ಮಾಡಿರಬಹುದು. ಇದೆಲ್ಲವನ್ನು ಹದಿನಾಲ್ಕು ಬಾರಿ ಬಜೆಟ್‌ ಮಂಡಿಸಿದ, ಓರ್ವ ವಕೀಲರಾದ ಸಿಎಂ ಸಿದ್ದರಾಮಯ್ಯ ಅವರು ಬದಿಗೊತ್ತಿ, ತಮಗೆ ನೀಡಿರುವ ನಿವೇಶನವನ್ನು ಹಿಂತಿರುಗಿಸಿ ಮುಕ್ತ ತನಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿದ್ದರೇ ಅವರ ಮೇಲಿನ ಗೌರವ ಇಮ್ಮಡಿಯಾಗುತ್ತಿತ್ತು.

ಆದರೆ ಅವರು 60ಕೋಟಿ ರೂ ನಿವೇಶನ ಎಂದು ಹೇಳುತ್ತಿರುವುದು ಅಪಹಾಸ್ಯಕ್ಕೆ ದಾರಿ ಮಾಡಿಕೊಟ್ಟಂತಾಗಿದೆ. ಈ ವಿಚಾರವಾಗಿ ಮೈಸೂರಿಗನಾಗಿ ನನಗೆ ವೈಯಕ್ತಿಕವಾಗಿ ಬೇಸರ, ನಿರಾಸೆ ಉಂಟಾಗಿದೆ ಎಂದು ಪ್ರತಾಪ್‌ ಸಿಂಹ ವಿಷಾಧಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

5 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

6 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

6 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

6 hours ago