Mysore
21
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಅಶೋಕಪುರಂ ರೈಲ್ವೆ ಸ್ಟೇಷನ್‌ ಯಾರ್ಡ್‌ ಲೋಕಾರ್ಪಣೆಗೊಳಿಸಿದ ಸಂಸದ ಪ್ರತಾಪ್‌ ಸಿಂಹ

ಮೈಸೂರು: ನಗರದ ಅಶೋಕಪುರಂ ರೈಲ್ವೆ ನಿಲ್ದಾಣದ ನವೀಕರಿಸಿದ ನೂತನ ಯಾರ್ಡ್‌ನ್ನು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಸೋಮವಾರ(ಮಾ.೦೪) ಲೋಕಾರ್ಪಣೆಗೊಳಿಸಿದರು.

ಒಟ್ಟು 37.5 ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಾಗಿದ್ದು, ಈ ಪೈಕಿ 22 ಕೋಟಿ ಸಂಚಾರ ಸೌಲಭ್ಯಗಳ ಉನ್ನತೀಕರಣಕ್ಕೆ ವಿನಿಯೋಗ ಮಾಡಿದರೆ, 10.5 ಕೋಟಿ ರೂ. ಪ್ರಯಾಣಿಕರ ಸೌಕರ್ಯ ಅಭಿವೃದ್ಧಿಗೆ ವ್ಯಯಿಸಲಾಗಿದೆ.

ಉದ್ಘಾಟನೆ ನಂತರ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಇನ್ಮುಂದೆ ಅಶೋಕ್‌ಪುರಂ ರೈಲು ನಿಲ್ದಾಣದಿಂದ 4 ಮೆಮು ರೈಲು,1 ಮಾಲ್ಗುಡಿ ರೈಲು, 1 ಕಾವೇರಿ ಎಕ್ಸ್ ಪ್ರೆಸ್ ರೈಲು ಸೇರಿದಂತೆ ಹಲವು ರೈಲುಗಳು ಸಂಚಾರ ನಡೆಸುವಂತೆ ಕ್ರಮ ವಹಿಸಲಾಗುವುದು. ಜೊತೆಗೆ ಕಡಕೋಳ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.

ಮೈಸೂರಿಗೆ ಗೊತ್ತಿಲ್ಲದೇ ಬಂದ ನನ್ನನ್ನು ಮೈಸೂರು-ಕೊಡಗು ಜನರು ಕೈ ಹಿಡಿದಿದ್ದಾರೆ. ಅವರಿಂದ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಯಿತು. ನಾನು ಯಾವುದೇ ಹೋರಾಟ ಮಾಡಿದರು ಜನರಿಗಾಗಿ ಮಾಡಿದ್ದೇನೆ. ರಾಜಕೀಯಕ್ಕೆ ಬಂದಿರುವುದು ಗುತ್ತಿಗೆದಾರರ ಬಳಿ ಕಮಿಷನ್‌ ಪಡೆಯಲು ಅಲ್ಲ. ಅಭಿವೃದ್ದಿ ಮಾಡಲು ಎಂದು ಗುಡುಗಿದರು.

ಇನ್ನು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್ ಕಾರ್ಡ್ ಮುಂದಿಟ್ಟುಕೊಂಡು ಮತ್ತೊಮ್ಮೆ ಜನಾದೇಶ ಪಡೆಯಲು ಮುಂದಾಗಿದ್ದೇನೆ‌ ಎಂದು ಇದೇ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ಶಾಸಕ ಶ್ರೀವತ್ಸ, ಮಾಜಿ ಮೇಯರ್ ಶಿವಕುಮಾರ್ ಹಾಗೂ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!