ಮೈಸೂರು: ನಗರದ ಅಶೋಕಪುರಂ ರೈಲ್ವೆ ನಿಲ್ದಾಣದ ನವೀಕರಿಸಿದ ನೂತನ ಯಾರ್ಡ್ನ್ನು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸೋಮವಾರ(ಮಾ.೦೪) ಲೋಕಾರ್ಪಣೆಗೊಳಿಸಿದರು.
ಒಟ್ಟು 37.5 ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಾಗಿದ್ದು, ಈ ಪೈಕಿ 22 ಕೋಟಿ ಸಂಚಾರ ಸೌಲಭ್ಯಗಳ ಉನ್ನತೀಕರಣಕ್ಕೆ ವಿನಿಯೋಗ ಮಾಡಿದರೆ, 10.5 ಕೋಟಿ ರೂ. ಪ್ರಯಾಣಿಕರ ಸೌಕರ್ಯ ಅಭಿವೃದ್ಧಿಗೆ ವ್ಯಯಿಸಲಾಗಿದೆ.
ಉದ್ಘಾಟನೆ ನಂತರ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಇನ್ಮುಂದೆ ಅಶೋಕ್ಪುರಂ ರೈಲು ನಿಲ್ದಾಣದಿಂದ 4 ಮೆಮು ರೈಲು,1 ಮಾಲ್ಗುಡಿ ರೈಲು, 1 ಕಾವೇರಿ ಎಕ್ಸ್ ಪ್ರೆಸ್ ರೈಲು ಸೇರಿದಂತೆ ಹಲವು ರೈಲುಗಳು ಸಂಚಾರ ನಡೆಸುವಂತೆ ಕ್ರಮ ವಹಿಸಲಾಗುವುದು. ಜೊತೆಗೆ ಕಡಕೋಳ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.
ಮೈಸೂರಿಗೆ ಗೊತ್ತಿಲ್ಲದೇ ಬಂದ ನನ್ನನ್ನು ಮೈಸೂರು-ಕೊಡಗು ಜನರು ಕೈ ಹಿಡಿದಿದ್ದಾರೆ. ಅವರಿಂದ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಯಿತು. ನಾನು ಯಾವುದೇ ಹೋರಾಟ ಮಾಡಿದರು ಜನರಿಗಾಗಿ ಮಾಡಿದ್ದೇನೆ. ರಾಜಕೀಯಕ್ಕೆ ಬಂದಿರುವುದು ಗುತ್ತಿಗೆದಾರರ ಬಳಿ ಕಮಿಷನ್ ಪಡೆಯಲು ಅಲ್ಲ. ಅಭಿವೃದ್ದಿ ಮಾಡಲು ಎಂದು ಗುಡುಗಿದರು.
ಇನ್ನು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್ ಕಾರ್ಡ್ ಮುಂದಿಟ್ಟುಕೊಂಡು ಮತ್ತೊಮ್ಮೆ ಜನಾದೇಶ ಪಡೆಯಲು ಮುಂದಾಗಿದ್ದೇನೆ ಎಂದು ಇದೇ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ಶಾಸಕ ಶ್ರೀವತ್ಸ, ಮಾಜಿ ಮೇಯರ್ ಶಿವಕುಮಾರ್ ಹಾಗೂ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತಿದ್ದರು.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…