ಮೈಸೂರು

ಅಶೋಕಪುರಂ ರೈಲ್ವೆ ಸ್ಟೇಷನ್‌ ಯಾರ್ಡ್‌ ಲೋಕಾರ್ಪಣೆಗೊಳಿಸಿದ ಸಂಸದ ಪ್ರತಾಪ್‌ ಸಿಂಹ

ಮೈಸೂರು: ನಗರದ ಅಶೋಕಪುರಂ ರೈಲ್ವೆ ನಿಲ್ದಾಣದ ನವೀಕರಿಸಿದ ನೂತನ ಯಾರ್ಡ್‌ನ್ನು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಸೋಮವಾರ(ಮಾ.೦೪) ಲೋಕಾರ್ಪಣೆಗೊಳಿಸಿದರು.

ಒಟ್ಟು 37.5 ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಾಗಿದ್ದು, ಈ ಪೈಕಿ 22 ಕೋಟಿ ಸಂಚಾರ ಸೌಲಭ್ಯಗಳ ಉನ್ನತೀಕರಣಕ್ಕೆ ವಿನಿಯೋಗ ಮಾಡಿದರೆ, 10.5 ಕೋಟಿ ರೂ. ಪ್ರಯಾಣಿಕರ ಸೌಕರ್ಯ ಅಭಿವೃದ್ಧಿಗೆ ವ್ಯಯಿಸಲಾಗಿದೆ.

ಉದ್ಘಾಟನೆ ನಂತರ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಇನ್ಮುಂದೆ ಅಶೋಕ್‌ಪುರಂ ರೈಲು ನಿಲ್ದಾಣದಿಂದ 4 ಮೆಮು ರೈಲು,1 ಮಾಲ್ಗುಡಿ ರೈಲು, 1 ಕಾವೇರಿ ಎಕ್ಸ್ ಪ್ರೆಸ್ ರೈಲು ಸೇರಿದಂತೆ ಹಲವು ರೈಲುಗಳು ಸಂಚಾರ ನಡೆಸುವಂತೆ ಕ್ರಮ ವಹಿಸಲಾಗುವುದು. ಜೊತೆಗೆ ಕಡಕೋಳ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.

ಮೈಸೂರಿಗೆ ಗೊತ್ತಿಲ್ಲದೇ ಬಂದ ನನ್ನನ್ನು ಮೈಸೂರು-ಕೊಡಗು ಜನರು ಕೈ ಹಿಡಿದಿದ್ದಾರೆ. ಅವರಿಂದ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಯಿತು. ನಾನು ಯಾವುದೇ ಹೋರಾಟ ಮಾಡಿದರು ಜನರಿಗಾಗಿ ಮಾಡಿದ್ದೇನೆ. ರಾಜಕೀಯಕ್ಕೆ ಬಂದಿರುವುದು ಗುತ್ತಿಗೆದಾರರ ಬಳಿ ಕಮಿಷನ್‌ ಪಡೆಯಲು ಅಲ್ಲ. ಅಭಿವೃದ್ದಿ ಮಾಡಲು ಎಂದು ಗುಡುಗಿದರು.

ಇನ್ನು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್ ಕಾರ್ಡ್ ಮುಂದಿಟ್ಟುಕೊಂಡು ಮತ್ತೊಮ್ಮೆ ಜನಾದೇಶ ಪಡೆಯಲು ಮುಂದಾಗಿದ್ದೇನೆ‌ ಎಂದು ಇದೇ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ಶಾಸಕ ಶ್ರೀವತ್ಸ, ಮಾಜಿ ಮೇಯರ್ ಶಿವಕುಮಾರ್ ಹಾಗೂ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತಿದ್ದರು.

andolana

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

6 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago