ಮೈಸೂರು

ಅಶೋಕಪುರಂ ರೈಲ್ವೆ ಸ್ಟೇಷನ್‌ ಯಾರ್ಡ್‌ ಲೋಕಾರ್ಪಣೆಗೊಳಿಸಿದ ಸಂಸದ ಪ್ರತಾಪ್‌ ಸಿಂಹ

ಮೈಸೂರು: ನಗರದ ಅಶೋಕಪುರಂ ರೈಲ್ವೆ ನಿಲ್ದಾಣದ ನವೀಕರಿಸಿದ ನೂತನ ಯಾರ್ಡ್‌ನ್ನು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಸೋಮವಾರ(ಮಾ.೦೪) ಲೋಕಾರ್ಪಣೆಗೊಳಿಸಿದರು.

ಒಟ್ಟು 37.5 ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಾಗಿದ್ದು, ಈ ಪೈಕಿ 22 ಕೋಟಿ ಸಂಚಾರ ಸೌಲಭ್ಯಗಳ ಉನ್ನತೀಕರಣಕ್ಕೆ ವಿನಿಯೋಗ ಮಾಡಿದರೆ, 10.5 ಕೋಟಿ ರೂ. ಪ್ರಯಾಣಿಕರ ಸೌಕರ್ಯ ಅಭಿವೃದ್ಧಿಗೆ ವ್ಯಯಿಸಲಾಗಿದೆ.

ಉದ್ಘಾಟನೆ ನಂತರ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಇನ್ಮುಂದೆ ಅಶೋಕ್‌ಪುರಂ ರೈಲು ನಿಲ್ದಾಣದಿಂದ 4 ಮೆಮು ರೈಲು,1 ಮಾಲ್ಗುಡಿ ರೈಲು, 1 ಕಾವೇರಿ ಎಕ್ಸ್ ಪ್ರೆಸ್ ರೈಲು ಸೇರಿದಂತೆ ಹಲವು ರೈಲುಗಳು ಸಂಚಾರ ನಡೆಸುವಂತೆ ಕ್ರಮ ವಹಿಸಲಾಗುವುದು. ಜೊತೆಗೆ ಕಡಕೋಳ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.

ಮೈಸೂರಿಗೆ ಗೊತ್ತಿಲ್ಲದೇ ಬಂದ ನನ್ನನ್ನು ಮೈಸೂರು-ಕೊಡಗು ಜನರು ಕೈ ಹಿಡಿದಿದ್ದಾರೆ. ಅವರಿಂದ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಯಿತು. ನಾನು ಯಾವುದೇ ಹೋರಾಟ ಮಾಡಿದರು ಜನರಿಗಾಗಿ ಮಾಡಿದ್ದೇನೆ. ರಾಜಕೀಯಕ್ಕೆ ಬಂದಿರುವುದು ಗುತ್ತಿಗೆದಾರರ ಬಳಿ ಕಮಿಷನ್‌ ಪಡೆಯಲು ಅಲ್ಲ. ಅಭಿವೃದ್ದಿ ಮಾಡಲು ಎಂದು ಗುಡುಗಿದರು.

ಇನ್ನು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳ ರಿಪೋರ್ಟ್ ಕಾರ್ಡ್ ಮುಂದಿಟ್ಟುಕೊಂಡು ಮತ್ತೊಮ್ಮೆ ಜನಾದೇಶ ಪಡೆಯಲು ಮುಂದಾಗಿದ್ದೇನೆ‌ ಎಂದು ಇದೇ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ಶಾಸಕ ಶ್ರೀವತ್ಸ, ಮಾಜಿ ಮೇಯರ್ ಶಿವಕುಮಾರ್ ಹಾಗೂ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತಿದ್ದರು.

andolana

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

3 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

6 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

7 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

8 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

9 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

13 hours ago