ಮೈಸೂರು: ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಮ್ಮಿಲನ ಸಮಾವೇಶದಲ್ಲಿ ಪ್ರತಾಪ್ ಸಿಂಹ ಮತ್ತೊಮ್ಮೆ ತಮ್ಮ ಅಹನೆಯನ್ನು ಹೊರ ಹಾಕಿದ್ದಾರೆ. ಸಭೆಯ ಮಧ್ಯದಲ್ಲಿಯೇ ಎದ್ದು ಹೋಗಿದ್ದು, ಇನ್ನು ಯಾವುದು ಸರಿಯಾಗಿಲ್ಲ ಎಂಬುದನ್ನು ಮತ್ತೊಮ್ಮೆ ಸಾಭೀತು ಪಡಿಸಿದಂತಾಗಿದೆ.
ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಪ್ರತಾಪ್ ಸಿಂಹ ಅವರು ಯದುವೀರ್ ಒಡೆಯರ್ ಅವರಿಗಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ನಿಜವಾದರೂ ಅವರಲ್ಲಿರುವ ಬೇಸರ, ಟಿಕೆಟ್ ಸಿಗದಿರುವ ನೋವು ದೂರವಾಗಿಲ್ಲ ಎಂಬಂತೆ ಕಾಣುತ್ತಿದೆ.
ಯದುವೀರ್ ಅವರಿಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಮುಂದಿನ ದಿನಗಳಲ್ಲಿ ಭರ್ಜರಿ ಪ್ರಚಾರ ಮಾಡುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿದ್ದರು. ಆದರೆ ಪ್ರಚಾರದ ಸಭೆಗಳಲ್ಲೆಲ್ಲಾ ತಾವು ಮಾಡಿದ ಸಾಧನೆಗಳನ್ನೇ ಹೇಳುತ್ತಾ ತಮಗೆ ಟಿಕೆಟ್ ಸಿಗದಿರುವುದಕ್ಕೆ ಸಹಾನುಭೂತಿ ಗಿಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬುದು ಹಲವರ ಆರೋಪವಾಗಿತ್ತು. ಅದಕ್ಕೆ ಪುಷ್ಠಯಂಬಂತೆ ಕಾರ್ಯಕ್ರಮದ ಮಧ್ಯದಲ್ಲಿಯೇ ವಿಜಯೇಂದ್ರ ಮತ್ತು ಕುಮಾರಸ್ವಾಮಿ ಅವರ ಅನುಪಸ್ಥಿತಿಯಲ್ಲಿಯೂ ಸಹಾ ಸಭೆ ತೊರೆದ ಸಂಸದ ಪ್ರತಾಪ್ ಸಿಂಹರ ನಡೆ ಹಲವು ಅನುಮಾನಕ್ಕೆ ದಾರಿ ಮಾಡಿಕೊಟ್ಟಿದೆ.
ಅಷ್ಟಕ್ಕೂ ಅವರು ಹೀಗೆ ಮಾಡಿದ್ದಾದರೂ ಯಾಕೆ? ಮತ್ತು ವಿಜಯೇಂದ್ರ ಅವರ ಬಳಿ ಯಾವ ಕಾರಣ ನೀಡಿ ತೆರಳಿದರು ಎಂಬುದು ಕುತೂಹಲಕ್ಕೆ ದಾರಿ ಮಾಡಿಕೊಟ್ಟಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…