ಮೈಸೂರು: ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಸಮ್ಮಿಲನ ಸಮಾವೇಶದಲ್ಲಿ ಪ್ರತಾಪ್ ಸಿಂಹ ಮತ್ತೊಮ್ಮೆ ತಮ್ಮ ಅಹನೆಯನ್ನು ಹೊರ ಹಾಕಿದ್ದಾರೆ. ಸಭೆಯ ಮಧ್ಯದಲ್ಲಿಯೇ ಎದ್ದು ಹೋಗಿದ್ದು, ಇನ್ನು ಯಾವುದು ಸರಿಯಾಗಿಲ್ಲ ಎಂಬುದನ್ನು ಮತ್ತೊಮ್ಮೆ ಸಾಭೀತು ಪಡಿಸಿದಂತಾಗಿದೆ.
ಮೈಸೂರು-ಕೊಡಗು ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಪ್ರತಾಪ್ ಸಿಂಹ ಅವರು ಯದುವೀರ್ ಒಡೆಯರ್ ಅವರಿಗಾಗಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ನಿಜವಾದರೂ ಅವರಲ್ಲಿರುವ ಬೇಸರ, ಟಿಕೆಟ್ ಸಿಗದಿರುವ ನೋವು ದೂರವಾಗಿಲ್ಲ ಎಂಬಂತೆ ಕಾಣುತ್ತಿದೆ.
ಯದುವೀರ್ ಅವರಿಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಮುಂದಿನ ದಿನಗಳಲ್ಲಿ ಭರ್ಜರಿ ಪ್ರಚಾರ ಮಾಡುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿದ್ದರು. ಆದರೆ ಪ್ರಚಾರದ ಸಭೆಗಳಲ್ಲೆಲ್ಲಾ ತಾವು ಮಾಡಿದ ಸಾಧನೆಗಳನ್ನೇ ಹೇಳುತ್ತಾ ತಮಗೆ ಟಿಕೆಟ್ ಸಿಗದಿರುವುದಕ್ಕೆ ಸಹಾನುಭೂತಿ ಗಿಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬುದು ಹಲವರ ಆರೋಪವಾಗಿತ್ತು. ಅದಕ್ಕೆ ಪುಷ್ಠಯಂಬಂತೆ ಕಾರ್ಯಕ್ರಮದ ಮಧ್ಯದಲ್ಲಿಯೇ ವಿಜಯೇಂದ್ರ ಮತ್ತು ಕುಮಾರಸ್ವಾಮಿ ಅವರ ಅನುಪಸ್ಥಿತಿಯಲ್ಲಿಯೂ ಸಹಾ ಸಭೆ ತೊರೆದ ಸಂಸದ ಪ್ರತಾಪ್ ಸಿಂಹರ ನಡೆ ಹಲವು ಅನುಮಾನಕ್ಕೆ ದಾರಿ ಮಾಡಿಕೊಟ್ಟಿದೆ.
ಅಷ್ಟಕ್ಕೂ ಅವರು ಹೀಗೆ ಮಾಡಿದ್ದಾದರೂ ಯಾಕೆ? ಮತ್ತು ವಿಜಯೇಂದ್ರ ಅವರ ಬಳಿ ಯಾವ ಕಾರಣ ನೀಡಿ ತೆರಳಿದರು ಎಂಬುದು ಕುತೂಹಲಕ್ಕೆ ದಾರಿ ಮಾಡಿಕೊಟ್ಟಿದೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…