ಮೈಸೂರು : ವಿಧಾನ ಪರಿಷತ್ ಸದಸ್ಯ ಯತೀಂದ್ರ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಗಂಭಿರ ಆರೋಪ ಮಾಡಿದ್ದು, ಮೈಸೂರು ಪೊಲೀಸರಿಗೆ ಸಿಎಂ ಮಗನ ಕಾಟ ಹೆಚ್ಚಾಗಿದೆ ಎಂದಿದ್ದಾರೆ.
ಈ ಕುರಿತು ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ಡಾ. ಯತೀಂದ್ರ ವರ್ಗಾವಣೆ ಸಚಿವರಾಗಿದ್ದಾರೆ. ಯಾವುದೇ ವರ್ಗಾವಣೆ ಆಗಬೇಕಾದರೂ ಸಿಎಂ ಪುತ್ರನಿಗೆ ತೆರಿಗೆ ಕಟ್ಟಬೇಕು. ಯಾರು ಜಾಸ್ತಿ ಕಲೆಕ್ಷನ್ ಮಾಡಿ ರಾಹುಲ್ ಗಾಂಧಿಗೆ ಕೊಡುತ್ತೇವೆ ಎಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪೈಪೋಟಿಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನು ಓದಿ : ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ : ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು
ಆರೋಪಿ ಯಾವ ಜಾತಿಯವನು ಎಂದು ನೋಡಿ ನಂತರ ಅವನನ್ನು ಹಿಡಿಯ ಬೇಕಾದ ಸ್ಥಿತಿ ಮೈಸೂರು ಪೊಲೀಸರಿಗೆ ಬಂದಿದೆ. ಅವ್ಯಾಹತವಾಗಿ ಇಸ್ಪೀಟ್ ದಂಧೆ ನಡೆಯುತ್ತಿದ್ದು, ಅದರ ಮೇಲೆ ದಾಳಿ ಮಾಡಲೂ ಪೊಲೀಸರು ಹೆದರುತ್ತಿದ್ದಾರೆ. ದಾಳಿ ಮಾಡಿದರೆ ಎಲ್ಲಿ ಯಾವ ಸಚಿವ, ಶಾಸಕನ ಫೋನ್ ಬರುತ್ತದೆಯೋ ಎಂಬ ಭಯದಲ್ಲಿದ್ದಾರೆ. ಸಿದ್ದರಾಮಯ್ಯ ಕುರ್ಚಿ ಖಾಲಿಯಾದರೆ ತನಗೆ ಸಿಗುತ್ತೆಂಬ ಆಸೆಯಲ್ಲಿ ಗೃಹ ಸಚಿವರು ತಮ್ಮ ಇಲಾಖೆಯನ್ನೇ ಮರೆತಿದ್ದಾರೆ. ಮುಖ್ಯಮಂತ್ರಿಗಳೇ, ವರ್ಗಾವಣೆ ದಂಧೆ ನಿಲ್ಲಿಸಲು ನಿಮ್ಮ ಮಗನಿಗೆ ಹೇಳಿ. ಶಾಸಕರಿಗೆ ವಸೂಲಿ ನಿಲ್ಲಿಸಲು ಹೇಳಿ ಎಂದು ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ.
ಮೈಸೂರಿನಲ್ಲಿ ಅತ್ಯಾಚಾರವೆಸಗಿ 9 ವರ್ಷದ ಬಾಲಕಿ ಕೊಲೆ ಪ್ರಕರಣ ಸಂಬಂಧವೂ ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಉಕ್ರೇನ್-ರಷ್ಯಾ ಯುದ್ಧದ ಬಗ್ಗೆ ಕಾಮೆಂಟ್ ಮಾಡುವ, ಡೊನಾಲ್ಡ್ ಟ್ರಂಪ್ ಬಗ್ಗೆ ಮಾತನಾಡುವ ಕಾಂಗ್ರೆಸ್ನ ಯಾರೊಬ್ಬರೂ ಬಾಲಕಿ ಕೊಲೆ ವಿಚಾರವಾಗಿ ಮಾತನಾಡುತ್ತಿಲ್ಲ. ಪ್ರಿಯಾಂಕ್, ಲಾಡ್ ಒಬ್ಬನಾದರೂ ಬಾಯಿ ತೆರೆಯುತ್ತಿದ್ದಾರಾ? ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಏಕೆ ಈ ಬಗ್ಗೆ ಮಾತಾಡ್ತಿಲ್ಲ? ಸಿದ್ದರಾಮಯ್ಯ ಅವರೇ ಯಾವ ಪುರುಷಾರ್ಥಕ್ಕೆ ಸಿಎಂ ಆಗಿದ್ದೀರಾ ಎಂದು ಮಾಜಿ ಸಂಸದ ವಾಗ್ದಾಳಿ ನಡೆಸಿದ್ದಾರೆ.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…