ಮೈಸೂರು : ವಿಧಾನ ಪರಿಷತ್ ಸದಸ್ಯ ಯತೀಂದ್ರ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಗಂಭಿರ ಆರೋಪ ಮಾಡಿದ್ದು, ಮೈಸೂರು ಪೊಲೀಸರಿಗೆ ಸಿಎಂ ಮಗನ ಕಾಟ ಹೆಚ್ಚಾಗಿದೆ ಎಂದಿದ್ದಾರೆ.
ಈ ಕುರಿತು ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ಡಾ. ಯತೀಂದ್ರ ವರ್ಗಾವಣೆ ಸಚಿವರಾಗಿದ್ದಾರೆ. ಯಾವುದೇ ವರ್ಗಾವಣೆ ಆಗಬೇಕಾದರೂ ಸಿಎಂ ಪುತ್ರನಿಗೆ ತೆರಿಗೆ ಕಟ್ಟಬೇಕು. ಯಾರು ಜಾಸ್ತಿ ಕಲೆಕ್ಷನ್ ಮಾಡಿ ರಾಹುಲ್ ಗಾಂಧಿಗೆ ಕೊಡುತ್ತೇವೆ ಎಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪೈಪೋಟಿಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನು ಓದಿ : ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ : ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು
ಆರೋಪಿ ಯಾವ ಜಾತಿಯವನು ಎಂದು ನೋಡಿ ನಂತರ ಅವನನ್ನು ಹಿಡಿಯ ಬೇಕಾದ ಸ್ಥಿತಿ ಮೈಸೂರು ಪೊಲೀಸರಿಗೆ ಬಂದಿದೆ. ಅವ್ಯಾಹತವಾಗಿ ಇಸ್ಪೀಟ್ ದಂಧೆ ನಡೆಯುತ್ತಿದ್ದು, ಅದರ ಮೇಲೆ ದಾಳಿ ಮಾಡಲೂ ಪೊಲೀಸರು ಹೆದರುತ್ತಿದ್ದಾರೆ. ದಾಳಿ ಮಾಡಿದರೆ ಎಲ್ಲಿ ಯಾವ ಸಚಿವ, ಶಾಸಕನ ಫೋನ್ ಬರುತ್ತದೆಯೋ ಎಂಬ ಭಯದಲ್ಲಿದ್ದಾರೆ. ಸಿದ್ದರಾಮಯ್ಯ ಕುರ್ಚಿ ಖಾಲಿಯಾದರೆ ತನಗೆ ಸಿಗುತ್ತೆಂಬ ಆಸೆಯಲ್ಲಿ ಗೃಹ ಸಚಿವರು ತಮ್ಮ ಇಲಾಖೆಯನ್ನೇ ಮರೆತಿದ್ದಾರೆ. ಮುಖ್ಯಮಂತ್ರಿಗಳೇ, ವರ್ಗಾವಣೆ ದಂಧೆ ನಿಲ್ಲಿಸಲು ನಿಮ್ಮ ಮಗನಿಗೆ ಹೇಳಿ. ಶಾಸಕರಿಗೆ ವಸೂಲಿ ನಿಲ್ಲಿಸಲು ಹೇಳಿ ಎಂದು ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ.
ಮೈಸೂರಿನಲ್ಲಿ ಅತ್ಯಾಚಾರವೆಸಗಿ 9 ವರ್ಷದ ಬಾಲಕಿ ಕೊಲೆ ಪ್ರಕರಣ ಸಂಬಂಧವೂ ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಉಕ್ರೇನ್-ರಷ್ಯಾ ಯುದ್ಧದ ಬಗ್ಗೆ ಕಾಮೆಂಟ್ ಮಾಡುವ, ಡೊನಾಲ್ಡ್ ಟ್ರಂಪ್ ಬಗ್ಗೆ ಮಾತನಾಡುವ ಕಾಂಗ್ರೆಸ್ನ ಯಾರೊಬ್ಬರೂ ಬಾಲಕಿ ಕೊಲೆ ವಿಚಾರವಾಗಿ ಮಾತನಾಡುತ್ತಿಲ್ಲ. ಪ್ರಿಯಾಂಕ್, ಲಾಡ್ ಒಬ್ಬನಾದರೂ ಬಾಯಿ ತೆರೆಯುತ್ತಿದ್ದಾರಾ? ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಏಕೆ ಈ ಬಗ್ಗೆ ಮಾತಾಡ್ತಿಲ್ಲ? ಸಿದ್ದರಾಮಯ್ಯ ಅವರೇ ಯಾವ ಪುರುಷಾರ್ಥಕ್ಕೆ ಸಿಎಂ ಆಗಿದ್ದೀರಾ ಎಂದು ಮಾಜಿ ಸಂಸದ ವಾಗ್ದಾಳಿ ನಡೆಸಿದ್ದಾರೆ.
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…