ಮೈಸೂರು

ಯತೀಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ ಪ್ರತಾಪ್‌ ಸಿಂಹ

ಮೈಸೂರು : ವಿಧಾನ ಪರಿಷತ್‌ ಸದಸ್ಯ ಯತೀಂದ್ರ ವಿರುದ್ಧ ಮಾಜಿ ಸಂಸದ ಪ್ರತಾಪ್​ ಸಿಂಹ ಗಂಭಿರ ಆರೋಪ ಮಾಡಿದ್ದು, ಮೈಸೂರು ಪೊಲೀಸರಿಗೆ ಸಿಎಂ ಮಗನ ಕಾಟ ಹೆಚ್ಚಾಗಿದೆ ಎಂದಿದ್ದಾರೆ.

ಈ ಕುರಿತು ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್‌ ಸಿಂಹ, ಡಾ. ಯತೀಂದ್ರ ವರ್ಗಾವಣೆ ಸಚಿವರಾಗಿದ್ದಾರೆ. ಯಾವುದೇ ವರ್ಗಾವಣೆ ಆಗಬೇಕಾದರೂ ಸಿಎಂ ಪುತ್ರನಿಗೆ ತೆರಿಗೆ ಕಟ್ಟಬೇಕು. ಯಾರು ಜಾಸ್ತಿ ಕಲೆಕ್ಷನ್ ಮಾಡಿ ರಾಹುಲ್ ಗಾಂಧಿಗೆ ಕೊಡುತ್ತೇವೆ ಎಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪೈಪೋಟಿಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ : ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ : ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಆರೋಪಿ ಯಾವ ಜಾತಿಯವನು ಎಂದು ನೋಡಿ ನಂತರ ಅವನನ್ನು ಹಿಡಿಯ ಬೇಕಾದ ಸ್ಥಿತಿ ಮೈಸೂರು ಪೊಲೀಸರಿಗೆ ಬಂದಿದೆ. ಅವ್ಯಾಹತವಾಗಿ ಇಸ್ಪೀಟ್ ದಂಧೆ ನಡೆಯುತ್ತಿದ್ದು, ಅದರ ಮೇಲೆ ದಾಳಿ ಮಾಡಲೂ ಪೊಲೀಸರು ಹೆದರುತ್ತಿದ್ದಾರೆ. ದಾಳಿ ಮಾಡಿದರೆ ಎಲ್ಲಿ ಯಾವ ಸಚಿವ, ಶಾಸಕನ ಫೋನ್ ಬರುತ್ತದೆಯೋ ಎಂಬ ಭಯದಲ್ಲಿದ್ದಾರೆ. ಸಿದ್ದರಾಮಯ್ಯ ಕುರ್ಚಿ ಖಾಲಿಯಾದರೆ ತನಗೆ ಸಿಗುತ್ತೆಂಬ ಆಸೆಯಲ್ಲಿ ಗೃಹ ಸಚಿವರು ತಮ್ಮ ಇಲಾಖೆಯನ್ನೇ ಮರೆತಿದ್ದಾರೆ. ಮುಖ್ಯಮಂತ್ರಿಗಳೇ, ವರ್ಗಾವಣೆ ದಂಧೆ ನಿಲ್ಲಿಸಲು ನಿಮ್ಮ ಮಗನಿಗೆ ಹೇಳಿ. ಶಾಸಕರಿಗೆ ವಸೂಲಿ ನಿಲ್ಲಿಸಲು ಹೇಳಿ ಎಂದು ಪ್ರತಾಪ್​ ಸಿಂಹ ಕಿಡಿ ಕಾರಿದ್ದಾರೆ.

ಮೈಸೂರಿನಲ್ಲಿ ಅತ್ಯಾಚಾರವೆಸಗಿ 9 ವರ್ಷದ ಬಾಲಕಿ ಕೊಲೆ ಪ್ರಕರಣ ಸಂಬಂಧವೂ ರಾಜ್ಯ ಸರ್ಕಾರದ ವಿರುದ್ಧ ಪ್ರತಾಪ್​ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಉಕ್ರೇನ್-ರಷ್ಯಾ ಯುದ್ಧದ ಬಗ್ಗೆ ಕಾಮೆಂಟ್ ಮಾಡುವ, ಡೊನಾಲ್ಡ್ ಟ್ರಂಪ್ ಬಗ್ಗೆ ಮಾತನಾಡುವ ಕಾಂಗ್ರೆಸ್​ನ ಯಾರೊಬ್ಬರೂ ಬಾಲಕಿ ಕೊಲೆ ವಿಚಾರವಾಗಿ ಮಾತನಾಡುತ್ತಿಲ್ಲ. ಪ್ರಿಯಾಂಕ್​, ಲಾಡ್ ಒಬ್ಬನಾದರೂ ಬಾಯಿ ತೆರೆಯುತ್ತಿದ್ದಾರಾ? ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಏಕೆ ಈ ಬಗ್ಗೆ ಮಾತಾಡ್ತಿಲ್ಲ? ಸಿದ್ದರಾಮಯ್ಯ ಅವರೇ ಯಾವ ಪುರುಷಾರ್ಥಕ್ಕೆ ಸಿಎಂ ಆಗಿದ್ದೀರಾ ಎಂದು ಮಾಜಿ ಸಂಸದ ವಾಗ್ದಾಳಿ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪಂಚ.. ತಂತ್ರ !

ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

1 hour ago

ಓದುಗರ ಪತ್ರ: ಮರದ ಕೊಂಬೆಯನ್ನು ತೆರವುಗೊಳಿಸಿ

ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್‌ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…

1 hour ago

ಓದುಗರ ಪತ್ರ: ತಮಿಳುನಾಡಿನಲ್ಲಿ ವಿಜಯ್ ವಿಜಯ

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…

1 hour ago

ಓದುಗರ ಪತ್ರ: ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಪರ್ವ

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…

1 hour ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

4 hours ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

4 hours ago