Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಡಿವಿಜಿ ಸಾಲು ಹಂಚಿಕೊಂಡು ವಿರೋಧಿಗಳಿಗೆ ಪ್ರತಾಪ್ ಸಿಂಹ ಟಾಂಗ್

ಮೈಸೂರು: ಸಂಸದರಾಗಿ 10ವರ್ಷಗಳ ಸೇವೆ ಸಲ್ಲಿಸಿದ ಹಾಲಿ ಸಂಸದ ಪ್ರತಾಪ್ ಸಿಂಹ ಅವರು 3ನೇ ಬಾರಿಯೂ ಲೋಕಸಭಾ ಕ್ಷೇತ್ರದ ಚುನಾವಣೆ ಟಿಕೆಟ್ ಸಿಗುವ ನೀರಿಕ್ಷೆಯಲ್ಲಿದ್ದರು. ಆದರೆ ಬಿಜೆಪಿ ಪಕ್ಷವೂ ಹೊಸ ಅಭ್ಯರ್ಥಿಗೆ ಮನ್ನಣೆ ನೀಡಿದ್ದು, ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಿದೆ.

ಸದ್ಯ ಬಿಜೆಪಿ ಟಿಕೆಟ್ ನಿಂದ ವಂಚಿತರಾಗಿರುವ ಪ್ರತಾಪ್ ಸಿಂಹ ಅವರು ಮಂಕಾಗಿದ್ದು, ಸತ್ತೆನೆಂದೆನಬೇಡ, ಸೋತೆನೆಂದನಬೇಡ, ಬತ್ತಿತೆನ್ನೊಳು ಸತ್ತದೂಟೆಯೆನಬೇಡ, ಮೃತ್ಯುವೆನ್ನುವುದೊಂದು ತೆರೆಯಿಳಿತ, ತೆರೆಯೇರು, ಮತ್ತೆತೋರ್ಪುದು ನಾಳೆ ಸೋಲು ಗೆಲುವು ಸ್ವಾಭಾವಿಕವೇ , ಒಂದು ಸಲ ಸೋಲಾಗಬಹುದು ಒಂದು ಸಲ ಗೆಲುವಾಗಬಹುದು, ಇಂದು ಬಿದ್ದ ಅಲೆ ನಾಳೆ ಏಳುತ್ತದೆ. ಇಂದು ಬಂದ ಸೋಲು ನಾಳೆ ಗೆಲುವಾಗುತ್ತದೆ ಎಂದು ಡಿವಿಜಿಯವರ ಸಾಲುಗಳನ್ನು ಹಂಚಿಕೊಂಡು ವಿರೋಧಿಗಳಿಗೆ ಟಾಂಗ್ ನೀಡುವ ಮೂಲಕ ಡಿವಿಜಿ ನನ್ನ ನೆಚ್ಚಿನ ಬರಹಗಾರ ಎಂದು ಪೋಸ್ಟ್ ಮಾಡಿದ್ದಾರೆ.

Tags:
error: Content is protected !!