ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ನನಗೆ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಆ ಮೂಲಕ ಎಲ್ಲಾ ಊಹಾಪೋಹಗಳಿಗೆ ಸಂಸದರು ಫುಲ್ಸ್ಟಾಪ್ ಹಾಕಿದ್ದಾರೆ.
ಈ ಬಾರಿ ಸಂಸದ ಪ್ರತಾಪ್ ಸಿಂಹ ಬದಲಿಗೆ ರಾಜವಂಶದ ಯದುವೀರ್ ಕೃಷ್ಣದತ್ತ ಒಡೆಯರ್ ಅವರಿಗೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂದು ವರದಿಯಾದ ಬೆನ್ನಲ್ಲೇ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರು ರಾಮೇಶ್ವರಂ ರೈಲಿಗೆ ಮೈಸೂರಿನಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ನನ್ನ ಮೇಲೆ ಪ್ರೀತಿ ಇಟ್ಟು ಇಲ್ಲಿಯ ಜನ ಗೆಲ್ಲಿಸಿದ್ದಕ್ಕೆ ಇಷ್ಟೆಲ್ಲ ಮಾಡಿದ್ದೇನೆ. ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸಿದ್ದೇನೆ ಎಂದರು.
ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗುವ ಬಗ್ಗೆ ಭರವಸೆ ಇದೆ. ಆದರೆ ಅಂತಿಮವಾಗಿ ಪಕ್ಷದ ಹೈಕಮಾಂಡ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಇಂದು ಪ್ರತಾಪ್ ಸಿಂಹ ಹೇಳಿದರು.
ಮೊದಲು ಮತ್ತು ಎರಡನೇ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮತಯಾಚನೆ ಮಾಡಿದ್ದೆ. ಈಗ ಮೂರನೇ ಬಾರಿಯೂ ಮೋದಿ ಹೆಸರಿನಲ್ಲೇ ಚುನಾವಣೆ ಎದುರಿಸಿ ಜಯಗಳಿಸುತ್ತೇನೆ ಎಂಬ ವಿಶ್ವಾಸವಿದೆ ಎಂದರು.
ನಾನು ಏನೆಂಬುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೊತ್ತಿದೆ. ಸೋಲುವ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ವಿಚಾರದಲ್ಲಿ ಹೊಡೆದಾಟ ನಡೆಯುತ್ತಿದೆ. ಮೈಸೂರಿನಲ್ಲಿ ಬಿಜೆಪಿ ಗೆಲ್ಲುವಂತ ಪರಿಸ್ಥಿತಿಯನ್ನು ನಾನು ಸೃಷ್ಟಿ ಮಾಡಿದ್ದೇನೆ. ನನಗೆ ತಾಯಿ ಚಾಮುಂಡಿ, ಪ್ರಧಾನಿ ಮೋದಿ ಆಶೀರ್ವಾದವಿದೆ ಎಂದು ಪ್ರತಾಪ್ ಸಿಂಹ ತಿಳಿಸಿದರು.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…