ಮೈಸೂರು

ಮೈಸೂರು ಲೋಕಸಭಾ ಟಿಕೆಟ್‌ ಹಂಚಿಕೆ ಕುರಿತು ಪ್ರತಾಪ್‌ ಸಿಂಹ ಹೇಳಿದ್ದಿಷ್ಟು!

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್‌ ನನಗೆ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ಆ ಮೂಲಕ ಎಲ್ಲಾ ಊಹಾಪೋಹಗಳಿಗೆ ಸಂಸದರು ಫುಲ್‌ಸ್ಟಾಪ್‌ ಹಾಕಿದ್ದಾರೆ.

ಈ ಬಾರಿ ಸಂಸದ ಪ್ರತಾಪ್‌ ಸಿಂಹ ಬದಲಿಗೆ ರಾಜವಂಶದ ಯದುವೀರ್ ಕೃಷ್ಣದತ್ತ ಒಡೆಯರ್ ಅವರಿಗೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂದು ವರದಿಯಾದ ಬೆನ್ನಲ್ಲೇ ಪ್ರತಾಪ್‌ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರು ರಾಮೇಶ್ವರಂ ರೈಲಿಗೆ ಮೈಸೂರಿನಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ನನ್ನ ಮೇಲೆ ಪ್ರೀತಿ ಇಟ್ಟು ಇಲ್ಲಿಯ ಜನ ಗೆಲ್ಲಿಸಿದ್ದಕ್ಕೆ ಇಷ್ಟೆಲ್ಲ ಮಾಡಿದ್ದೇನೆ. ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸಿದ್ದೇನೆ ಎಂದರು.

ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗುವ ಬಗ್ಗೆ ಭರವಸೆ ಇದೆ. ಆದರೆ ಅಂತಿಮವಾಗಿ ಪಕ್ಷದ ಹೈಕಮಾಂಡ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಇಂದು ಪ್ರತಾಪ್ ಸಿಂಹ ಹೇಳಿದರು.

ಮೊದಲು ಮತ್ತು ಎರಡನೇ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮತಯಾಚನೆ ಮಾಡಿದ್ದೆ. ಈಗ ಮೂರನೇ ಬಾರಿಯೂ ಮೋದಿ ಹೆಸರಿನಲ್ಲೇ ಚುನಾವಣೆ ಎದುರಿಸಿ ಜಯಗಳಿಸುತ್ತೇನೆ ಎಂಬ ವಿಶ್ವಾಸವಿದೆ ಎಂದರು.

ನಾನು ಏನೆಂಬುದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೊತ್ತಿದೆ. ಸೋಲುವ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ವಿಚಾರದಲ್ಲಿ ಹೊಡೆದಾಟ ನಡೆಯುತ್ತಿದೆ. ಮೈಸೂರಿನಲ್ಲಿ ಬಿಜೆಪಿ ಗೆಲ್ಲುವಂತ ಪರಿಸ್ಥಿತಿಯನ್ನು ನಾನು ಸೃಷ್ಟಿ ಮಾಡಿದ್ದೇನೆ. ನನಗೆ ತಾಯಿ ಚಾಮುಂಡಿ, ಪ್ರಧಾನಿ ಮೋದಿ ಆಶೀರ್ವಾದವಿದೆ ಎಂದು ಪ್ರತಾಪ್ ಸಿಂಹ ತಿಳಿಸಿದರು.

andolanait

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

7 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

8 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

8 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

9 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

13 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

17 hours ago