Mysore
21
few clouds

Social Media

ಗುರುವಾರ, 20 ಆಗಸ್ಟ್ 2026
Light
Dark

ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಆರಂಭಿಸುವಂತೆ ಸಚಿವ ವಿ.ಸೋಮಣ್ಣರಿಗೆ ಪ್ರತಾಪ್ ಸಿಂಹ ಮನವಿ

ಮೈಸೂರು ; ಪ್ರತಾಪ್‌ ಸಿಂಹ ಅವರು ಸಂಸದರಾಗಿದ್ದ ಕಾಲದಲ್ಲಿ ಅನುಮೋದನೆ ಸಿಕ್ಕಿ, ಪ್ರಧಾನಿ ನರೇಂದ್ರ ಮೋದಿಯಿಂದ ಗುದ್ದಲಿ ಪೂಜೆ ನೆರವೇರಿದ್ದ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿ ಆರಂಭಿಸುವಂತೆ ಸಚಿವ ವಿ.ಸೋಮಣ್ಣರಿಗೆ ಪ್ರತಾಪ್‌ ಸಿಂಹ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಸಚಿವ ವಿ.ಸೋಮಣ್ಣರನ್ನ ಭೇಟಿಯಾದ ಮಾಜಿ ಸಂಸದ ಪ್ರತಾಪ್‌ ಸಿಂಹ, ಮೈಸೂರು ಮುಂಬೈ ನಡುವೆ ಹೊಸ ರೈಲು ಆರಂಭಿಸುವಂತೆ ಹಾಗೂ ಗುದ್ದಲಿ ಪೂಜೆ ಆಗಿರುವ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸುವಂತೆ ಮನವಿ ಮಾಡಿದ್ದಾರೆ.

ಇನ್ನು ಸಚಿವ ವಿ ಸೋಮಣ್ಣ ಅವರನ್ನು ನೂತನ ಸಂಸದ ಯದುವೀರ್‌ ಒಡೆಯರ್‌ ಕೂಡ ಸೌಹಾರ್ದಯುತವಾಗಿ ಭೇಟಿ ಮಾಡಿದ್ದರು. ಈ ಬೆನ್ನಲ್ಲೆ ಪ್ರತಾಪ್‌ ಸಿಂಹ ಕೂಡ ಸೋಮಣ್ಣ ಅವರನ್ನು ಭೇಟಿ ಮಾಡಿರೋದು ಸಾಕಷ್ಟು ಕುತೂಹಲ ಮೂಡಿಸುತ್ತಿದೆ.

Tags:
error: Content is protected !!