ಮೈಸೂರು

ಮುಸಲ್ಮಾನರ ಓಲೈಕೆಯೇ ರಾಜ್ಯ ಸರ್ಕಾರದ ಒನ್‌ಲೈನ್ ಅಜೆಂಡಾ: ಪ್ರತಾಪ್‌ ಸಿಂಹ

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಕೇವಲ ಮುಸಲ್ಮಾನರನ್ನು ಓಲೈಕೆ ಮಾಡುವುದೇ ಒನ್‌ಲೈನ್‌ ಅಜೆಂಡಾವಾಗಿದೆ ಎಂದು ಮಾಜಿ ಸಂಸದ ಸಿಂಹ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಇಂದು(ಫೆಬ್ರವರಿ.19) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬೇಕಾಗಿಲ್ಲ. ಅವರಿಗೆ ಮುಸಲ್ಮಾನರ ಮತ ಬೇಕು ಅಷ್ಟೇ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ನಿಷ್ಠಾವಂತ ಪೊಲೀಸ್‌ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಅಲ್ಲದೇ ರಾಜ್ಯ ಸರ್ಕಾರವನ್ನು ತಾಲಿಬಾನಿ ಸರ್ಕಾರಕ್ಕೆ ಹೋಲಿಸಿ ಸಿಎಂ ಸಿದ್ದರಾಮಯ್ಯ ಅದರ ಮುಖ್ಯಸ್ಥರಾಗಿದ್ದಾರೆಂದು ಆರೋಪ ಮಾಡಿದ್ದಾರೆ.

ಮುಸ್ಲಿಂರು ಬರೀ ಕೌರ್ಯ ಮಾಡುತ್ತಿದ್ದಾರೆ. ಅವರಿಗೆ ಶೌರ್ಯ ಎಂಬುದು ತಿಳಿದಿಲ್ಲ, ಹಿಂದೂಗಳ ಮೇಲೆ ಕಲ್ಲು ಹೊಡೆಯಲು ಕಾಂಗ್ರೆಸ್ ಸರ್ಕಾರ ಪುಂಡ ಮುಸ್ಲಿಂರಿಗೆ ಫ್ರೀ ಪರ್ಮಿಟ್ ನೀಡಿದೆ. ಮುಸಲ್ಮಾನರು ಪ್ರೊಟೆಕ್ಷನ್ ಕೇಳಿದರೆ ಸರ್ಕಾರ ನೀಡಲಿ ಯಾರು ಬೇಡವೆನ್ನುತ್ತಾರೆ. ಆದರೆ ಅವರು ದುಷ್ಕೃತ್ಯಗಳನ್ನು ನಡೆಸಿದಾಗ ಬಂಧಿಸಿ ದಂಡಿಸುವುದನ್ನು ಬಿಟ್ಟು ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಅವರನ್ನು ತಡೆಯುವುದು ಹೇಗೆ? ಅವರಿಗೆ ಹೆದರಿ ಹಿಂದೂಗಳು ಮನೆ ಬಿಟ್ಟು ಬೇರೆ ಕಡೆ ಹೋಗಬೇಕೇ? ಅವರು ಹೊಗೋದಾದರೂ ಎಲ್ಲಿಗೆ ? ಎಂದು ಪ್ರಶ್ನಿಸಿದ್ದಾರೆ.

ಮುಸಲ್ಮಾನರಿಗಾದರೆ 57 ಇಸ್ಲಾಮಿಕ್ ರಾಷ್ಟ್ರಗಳಿವೆ, ಹಿಂದೂಗಳಿಗೆ ಯಾವು ದೇಶವಿದೆ? ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಹಾಗೇ ಸರ್ಕಾರ ನಡೆಸಿದರೆ ಮುಸಲ್ಮಾನರು ಹದ್ದುಬಸ್ತಿನಲ್ಲಿರುತ್ತಾರೆ. ಆದರೆ ನಮ್ಮ ರಾಜ್ಯದಲ್ಲಿ ಮುಸಲ್ಮಾನರು ತಪ್ಪು ಮಾಡಿದರೂ ಸಹ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಹೀಗಾಗಿ ಜಿ.ಪರಮೇಶ್ವರ್‌ ಅವರಿಗೆ ಗೃಹ ಸಚಿವರಾಗಿರಲು ಯಾವುದೇ ನೈತಿಕತೆ ಇಲ್ಲ. ಇನ್ನು ನಮ್ಮ ರಾಜ್ಯದಲ್ಲಿ ಬುಲ್ಡೋಜರ್‌ ಕಾನೂನು ತರಲು ಯಾರಿಗೆ ಧಮ್‌ ಇದೆ? ಯೋಗಿ ಆದಿತ್ಯನಾತ್‌ ಅವರ ರೀತಿಯಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತ ನಡೆಸಕು ಸಾಧ್ಯನಾ ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

1 hour ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

5 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago