ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಕೇವಲ ಮುಸಲ್ಮಾನರನ್ನು ಓಲೈಕೆ ಮಾಡುವುದೇ ಒನ್ಲೈನ್ ಅಜೆಂಡಾವಾಗಿದೆ ಎಂದು ಮಾಜಿ ಸಂಸದ ಸಿಂಹ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಇಂದು(ಫೆಬ್ರವರಿ.19) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬೇಕಾಗಿಲ್ಲ. ಅವರಿಗೆ ಮುಸಲ್ಮಾನರ ಮತ ಬೇಕು ಅಷ್ಟೇ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ನಿಷ್ಠಾವಂತ ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಅಲ್ಲದೇ ರಾಜ್ಯ ಸರ್ಕಾರವನ್ನು ತಾಲಿಬಾನಿ ಸರ್ಕಾರಕ್ಕೆ ಹೋಲಿಸಿ ಸಿಎಂ ಸಿದ್ದರಾಮಯ್ಯ ಅದರ ಮುಖ್ಯಸ್ಥರಾಗಿದ್ದಾರೆಂದು ಆರೋಪ ಮಾಡಿದ್ದಾರೆ.
ಮುಸ್ಲಿಂರು ಬರೀ ಕೌರ್ಯ ಮಾಡುತ್ತಿದ್ದಾರೆ. ಅವರಿಗೆ ಶೌರ್ಯ ಎಂಬುದು ತಿಳಿದಿಲ್ಲ, ಹಿಂದೂಗಳ ಮೇಲೆ ಕಲ್ಲು ಹೊಡೆಯಲು ಕಾಂಗ್ರೆಸ್ ಸರ್ಕಾರ ಪುಂಡ ಮುಸ್ಲಿಂರಿಗೆ ಫ್ರೀ ಪರ್ಮಿಟ್ ನೀಡಿದೆ. ಮುಸಲ್ಮಾನರು ಪ್ರೊಟೆಕ್ಷನ್ ಕೇಳಿದರೆ ಸರ್ಕಾರ ನೀಡಲಿ ಯಾರು ಬೇಡವೆನ್ನುತ್ತಾರೆ. ಆದರೆ ಅವರು ದುಷ್ಕೃತ್ಯಗಳನ್ನು ನಡೆಸಿದಾಗ ಬಂಧಿಸಿ ದಂಡಿಸುವುದನ್ನು ಬಿಟ್ಟು ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಅವರನ್ನು ತಡೆಯುವುದು ಹೇಗೆ? ಅವರಿಗೆ ಹೆದರಿ ಹಿಂದೂಗಳು ಮನೆ ಬಿಟ್ಟು ಬೇರೆ ಕಡೆ ಹೋಗಬೇಕೇ? ಅವರು ಹೊಗೋದಾದರೂ ಎಲ್ಲಿಗೆ ? ಎಂದು ಪ್ರಶ್ನಿಸಿದ್ದಾರೆ.
ಮುಸಲ್ಮಾನರಿಗಾದರೆ 57 ಇಸ್ಲಾಮಿಕ್ ರಾಷ್ಟ್ರಗಳಿವೆ, ಹಿಂದೂಗಳಿಗೆ ಯಾವು ದೇಶವಿದೆ? ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಹಾಗೇ ಸರ್ಕಾರ ನಡೆಸಿದರೆ ಮುಸಲ್ಮಾನರು ಹದ್ದುಬಸ್ತಿನಲ್ಲಿರುತ್ತಾರೆ. ಆದರೆ ನಮ್ಮ ರಾಜ್ಯದಲ್ಲಿ ಮುಸಲ್ಮಾನರು ತಪ್ಪು ಮಾಡಿದರೂ ಸಹ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಹೀಗಾಗಿ ಜಿ.ಪರಮೇಶ್ವರ್ ಅವರಿಗೆ ಗೃಹ ಸಚಿವರಾಗಿರಲು ಯಾವುದೇ ನೈತಿಕತೆ ಇಲ್ಲ. ಇನ್ನು ನಮ್ಮ ರಾಜ್ಯದಲ್ಲಿ ಬುಲ್ಡೋಜರ್ ಕಾನೂನು ತರಲು ಯಾರಿಗೆ ಧಮ್ ಇದೆ? ಯೋಗಿ ಆದಿತ್ಯನಾತ್ ಅವರ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಕು ಸಾಧ್ಯನಾ ಎಂದು ವಾಗ್ದಾಳಿ ನಡೆಸಿದ್ದಾರೆ.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…