ಹುಣಸೂರು : ಮಕ್ಕಳಲ್ಲಿ ಹುದುಗಿರುವ ಪ್ರತಿಭೆಗಳನ್ನು ಹೊರಹಾಕಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ ಶಾಸಕ ಜಿ.ಟಿ ಹರೀಶ್ಗೌಡ ಹೇಳಿದರು.
ನಗರದ ಬಜಾರ್ ರಸ್ತೆಯಲ್ಲಿರುವ ಸರ್ಕಾರಿ ಮೌಲಾನ ಆಜದ್ ಮಾದರಿ ಶಾಲೆಯಲ್ಲಿ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳಿಂದ ಬಹಳಷ್ಟು ಮಕ್ಕಳು ಬಂದಿದ್ದಾರೆ. ಪ್ರತಿಭಾ ಕಾರಂಜಿಯು ನಮ್ಮ ತಾಲ್ಲೂಕಿನಲ್ಲಿ ಬಹಳ ಯಶಸ್ವಿಯಾಗಿ ಶಿಕ್ಷಣಾಧಿಕಾರಿ ನೇತೃತ್ವದಲ್ಲಿ ಕ್ರಾಸ್ಟರ್ ವಲಯ ಮಟ್ಟದಲ್ಲಿ ನಡೆಯುತ್ತಿದ್ದು, ಮಕ್ಕಳ ತಮ್ಮ ಪ್ರತಿಭೆಗಳನ್ನು ತೋರಿಸುವ ಕಾರ್ಯಕ್ರಮವೇ ಪ್ರತಿಭಾ ಕಾರಂಜಿಯಾಗಿದೆ ಎಂದರು.
ಶಿಕ್ಷಣ ಎಂದರೆ ಕೇವಲ ಪುಸ್ತಕವಲ್ಲ. ಅದರಿಂದಾಚೆಗೆ ಕಲಿಯುವುದು ಬಹಳಷ್ಟಿದೆ. ಕ್ರೀಡೆ, ಕಲೆ ಹೀಗೆ ಬೇರೆ ಬೇರೆ ಕ್ಷೇತ್ರಗಳಲ್ಲಿ ನಾವು ಮಕ್ಕಳಲ್ಲಿ ಇರುವಂತಹ ಪ್ರತಿಭೆಯನ್ನು ಗುರುತಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದರು.
ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಕಲೆ, ಸಾಂಸ್ಕೃತಿಕ, ಕ್ರೀಡೆ ಗಳಲ್ಲಿ ಪ್ರತಿಭೆ ಇರುವುದನ್ನು ನೋಡಿದ್ದೇವೆ. ಶಿಕ್ಷಣ ಇಲಾಖೆ ಹಾಗೂ ಜನಪ್ರತಿನಿಧಿಗಳು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವಂತಹ ಕೆಲಸ ಆಗಬೇಕು ಎಂದರು.
ಕಾರ್ಯಕ್ರಮದಲಿ ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ನಗರಸಭೆ ಸದಸ್ಯ ಮಲ್ಲಿಕ್ ಪಾಷ, ಹರೀಶ್, ಅಕ್ಷರ ದಾಸೋತ್ಸವ ಅಧಿಕಾರಿ ರಾಜೇಂದ್ರ ಕುಮಾರ್, ಬಿ.ಆರ್.ಸಿ. ಹೇಮಲತಾ, ಇ.ಸಿ.ಒ. ಕೇಶವ ಮೂರ್ತಿ, ರಿಜ್ವಾನಾ ಅಫ್ರೋ, ಶಿಕ್ಷಕ ಗೋವೀಂದೇಗೌಡ ಇನ್ನಿತರು ಹಾಜರಿದ್ದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…