ಮೈಸೂರು

ಪ್ರೀತ್ಸೆ ಅಂತ ಹಿಂದೆ ಬಿದ್ದ ಪ್ರೇಮಿ : ಅಪ್ರಾಪ್ತೆ ನೇಣಿಗೆ ಶರಣು

ನಂಜನಗೂಡು : ಅಪ್ರಾಪ್ತೆಯ ಹಿಂದೆ ಬಿದ್ದು ಪ್ರೀತಿಗೆ ಒತ್ತಾಯಿಸಿ ಮದುವೆ ಆಗುವಂತೆ ಪೀಡಿಸಿ ಮಾನಸಿಕ ಕಿರುಕುಳ ನೀಡಿದ ಹಿನ್ನಲೆ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಂಜನಗೂಡಿನ ನೀಲಕಂಠನಗರದಲ್ಲಿ ನಡೆದಿದೆ.

ಅಪ್ರಾಪ್ತೆ ದಿವ್ಯ(17) ಮೃತ ದುರ್ದೈವಿ. ದೇಬೂರು ಗ್ರಾಮದ ಆದಿತ್ಯ ಎಂಬ ಯುವಕನ ವಿರುದ್ದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಂಜನಗೂಡಿನ ಸರ್ಕಾರಿ ಕಾಲೇಜಿನ ಪ್ರಥಮ ವರ್ಷದ ಪಿಯುಸಿ ಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ದಿವ್ಯ ಹಿಂದೆ ಆದಿತ್ಯ ಪ್ರೀತಿಸುವಂತೆ ದುಂಬಾಲು ಬಿದ್ದಿದ್ದಾನೆ. ಆದಿತ್ಯ ಒತ್ತಾಯವನ್ನ ದಿವ್ಯಾ ತಿರಸ್ಕರಿಸಿದ್ದಾಳೆ. ಅಲ್ಲದೆ ಆದಿತ್ಯಾ ನೀಡುತ್ತಿದ್ದ ಕಿರುಕುಳದ ಬಗ್ಗೆ ಪೋಷಕರ ಗಮನಕ್ಕೆ ತಂದಿದ್ದಾಳೆ. ಹುಡುಗನಿಗೆ ಬುದ್ದಿ ಹೇಳುವಂತೆ ತಂದೆ ಗುರುಮೂರ್ತಿ ಕೆಲವು ಹಿರಿಯರಿಗೆ ಹೇಳಿದ್ದಾರೆ. ಹೀಗಿದ್ದೂ ಆದಿತ್ಯ ತನ್ನ ವರ್ತನೆ ಬದಲಿಸಿಕೊಳ್ಳದೆ ದಿವ್ಯಾ ಹಿಂದೆ ಬಿದ್ದಿದ್ದಾನೆ. ಇದರಿಂದ ಮನ ನೊಂದ ದಿವ್ಯಾ ತನ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಆದಿತ್ಯಾ ವಿರುದ್ದ ಕ್ರಮ ಕೈಗೊಳ್ಳುವಂತೆ ಗುರುಮೂರ್ತಿ ಪ್ರಕರಣ ದಾಖಲಿಸಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago