ಮೈಸೂರು

ದಸರಾ ತಾಲೀಮಿಗೆ ಮುಂಚೆ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್

ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ತಯಾರಿ ಶುರುವಾಗಿದೆ. 2023ನೇ ಸಾಲಿನ ಮೈಸೂರು ದಸರಾ ಹಬ್ಬ ಅಕ್ಟೋಬರ್​ನಲ್ಲಿ ನಡೆಯಲಿದೆ. ಹೀಗಾಗಿ ವಿಶ್ವ ವಿಖ್ಯಾತ ಹಬ್ಬಕ್ಕೆ ತಯಾರಿ ಆರಂಭವಾಗಿದೆ. ದಸರಾಗೆ ಬರುವ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಲು ಅರಣ್ಯ ಇಲಾಖೆ ಮುಂದಾಗಿದೆ.

ಕಳೆದ ಬಾರಿ ಗರ್ಭಿಣಿ ಆನೆಯನ್ನ ತಾಲೀಮಿಗೆ ಬಳಸಿ ಅರಣ್ಯ ಇಲಾಖೆ ಮುಜುಗರಕ್ಕೆ ಒಳಗಾಗಿತ್ತು. ಹೀಗಾಗಿ ಈ ಬಾರಿ ಎಚ್ಚೆತ್ತ ಅರಣ್ಯ ಇಲಾಖೆ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಲು ಮುಂದಾಗಿದೆ.

ಆನೆ ಕ್ಯಾಂಪ್​ನಲ್ಲಿ ಪ್ರೆಗ್ನೆನ್ಸಿ ಟೆಸ್ಟ್ ಆದ ಬಳಿಕ ದಸರಾಗೆ ಹೆಣ್ಣಾನೆಗಳು ಆಗಮಿಸಲಿವೆ. ಕಳೆದ ಬಾರಿ ರಾಮಾಪುರ ಕ್ಯಾಂಪ್ ಆನೆ ಲಕ್ಷ್ಮೀ ಗಂಡು ಮರಿಗೆ ಜನ್ಮ ನೀಡಿತ್ತು. ಗರ್ಭಿಣಿ ಆನೆಯನ್ನ ತಾಲೀಮಿಗೆ ಬಳಸಿ ಇಲಾಖೆ ಮುಜುಗರಕ್ಕೆ ಒಳಗಾಗಿತ್ತು. ಸದ್ಯ ದಸರಾಗೆ ಆಗಮಿಸುವ ಅನೆಗಳ ಬಗ್ಗೆ ಎಚ್ಚರಿಕೆ ವಹಿಸಲಾಗುತ್ತಿದೆ.

ಈ ತಿಂಗಳಾಂತ್ಯಕ್ಕೆ ಆನೆಗಳ ಪಟ್ಟಿ ರೆಡಿಯಾಗಲಿದೆ. 14 ಆನೆಗಳನ್ನು ದಸರಾಗೆ ಕರೆತರಲು ಇಲಾಖೆ ಚಿಂತನೆ ನಡೆಸಿದೆ. ಅರ್ಜುನ ಆನೆಗೆ ವಯಸ್ಸಾದ ಕಾರಣ ಈ ಬಾರಿ ದಸರಾ ಹಬ್ಬದಿಂದ ಕೈಬಿಡಲಾಗಿದೆ. ಕ್ಯಾಂಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಈ ಬಾರಿ ದಸರಾ‌ ಜಂಬೂಸವಾರಿ ನಡೆಯಲಿದೆ.

 

lokesh

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ವಾಣಿಜ್ಯ ಮಂಡಳಿ: ಹೊಸ ಬಿರುಸು, ಗರಿಗೆದರಿದ ಕಲಾವಿದರ ಸಂಘ

ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…

2 hours ago

ಹೀಲಿಯಂ ಗ್ಯಾಸ್ ಬಲೂನ್ ಮಾರಾಟಕ್ಕಿಲ್ಲ ಕಡಿವಾಣ

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ…

2 hours ago

ನಗರೀಕರಣದಿಂದ ಮಾದಗಳ್ಳಿ ಕೆರೆಗೆ ಕಂಟಕ

ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್‌…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

5 hours ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

13 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

14 hours ago