ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ತಯಾರಿ ಶುರುವಾಗಿದೆ. 2023ನೇ ಸಾಲಿನ ಮೈಸೂರು ದಸರಾ ಹಬ್ಬ ಅಕ್ಟೋಬರ್ನಲ್ಲಿ ನಡೆಯಲಿದೆ. ಹೀಗಾಗಿ ವಿಶ್ವ ವಿಖ್ಯಾತ ಹಬ್ಬಕ್ಕೆ ತಯಾರಿ ಆರಂಭವಾಗಿದೆ. ದಸರಾಗೆ ಬರುವ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಲು ಅರಣ್ಯ ಇಲಾಖೆ ಮುಂದಾಗಿದೆ.
ಕಳೆದ ಬಾರಿ ಗರ್ಭಿಣಿ ಆನೆಯನ್ನ ತಾಲೀಮಿಗೆ ಬಳಸಿ ಅರಣ್ಯ ಇಲಾಖೆ ಮುಜುಗರಕ್ಕೆ ಒಳಗಾಗಿತ್ತು. ಹೀಗಾಗಿ ಈ ಬಾರಿ ಎಚ್ಚೆತ್ತ ಅರಣ್ಯ ಇಲಾಖೆ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಲು ಮುಂದಾಗಿದೆ.
ಆನೆ ಕ್ಯಾಂಪ್ನಲ್ಲಿ ಪ್ರೆಗ್ನೆನ್ಸಿ ಟೆಸ್ಟ್ ಆದ ಬಳಿಕ ದಸರಾಗೆ ಹೆಣ್ಣಾನೆಗಳು ಆಗಮಿಸಲಿವೆ. ಕಳೆದ ಬಾರಿ ರಾಮಾಪುರ ಕ್ಯಾಂಪ್ ಆನೆ ಲಕ್ಷ್ಮೀ ಗಂಡು ಮರಿಗೆ ಜನ್ಮ ನೀಡಿತ್ತು. ಗರ್ಭಿಣಿ ಆನೆಯನ್ನ ತಾಲೀಮಿಗೆ ಬಳಸಿ ಇಲಾಖೆ ಮುಜುಗರಕ್ಕೆ ಒಳಗಾಗಿತ್ತು. ಸದ್ಯ ದಸರಾಗೆ ಆಗಮಿಸುವ ಅನೆಗಳ ಬಗ್ಗೆ ಎಚ್ಚರಿಕೆ ವಹಿಸಲಾಗುತ್ತಿದೆ.
ಈ ತಿಂಗಳಾಂತ್ಯಕ್ಕೆ ಆನೆಗಳ ಪಟ್ಟಿ ರೆಡಿಯಾಗಲಿದೆ. 14 ಆನೆಗಳನ್ನು ದಸರಾಗೆ ಕರೆತರಲು ಇಲಾಖೆ ಚಿಂತನೆ ನಡೆಸಿದೆ. ಅರ್ಜುನ ಆನೆಗೆ ವಯಸ್ಸಾದ ಕಾರಣ ಈ ಬಾರಿ ದಸರಾ ಹಬ್ಬದಿಂದ ಕೈಬಿಡಲಾಗಿದೆ. ಕ್ಯಾಂಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಈ ಬಾರಿ ದಸರಾ ಜಂಬೂಸವಾರಿ ನಡೆಯಲಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…