ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ತಯಾರಿ ಶುರುವಾಗಿದೆ. 2023ನೇ ಸಾಲಿನ ಮೈಸೂರು ದಸರಾ ಹಬ್ಬ ಅಕ್ಟೋಬರ್ನಲ್ಲಿ ನಡೆಯಲಿದೆ. ಹೀಗಾಗಿ ವಿಶ್ವ ವಿಖ್ಯಾತ ಹಬ್ಬಕ್ಕೆ ತಯಾರಿ ಆರಂಭವಾಗಿದೆ. ದಸರಾಗೆ ಬರುವ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಲು ಅರಣ್ಯ ಇಲಾಖೆ ಮುಂದಾಗಿದೆ.
ಕಳೆದ ಬಾರಿ ಗರ್ಭಿಣಿ ಆನೆಯನ್ನ ತಾಲೀಮಿಗೆ ಬಳಸಿ ಅರಣ್ಯ ಇಲಾಖೆ ಮುಜುಗರಕ್ಕೆ ಒಳಗಾಗಿತ್ತು. ಹೀಗಾಗಿ ಈ ಬಾರಿ ಎಚ್ಚೆತ್ತ ಅರಣ್ಯ ಇಲಾಖೆ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಲು ಮುಂದಾಗಿದೆ.
ಆನೆ ಕ್ಯಾಂಪ್ನಲ್ಲಿ ಪ್ರೆಗ್ನೆನ್ಸಿ ಟೆಸ್ಟ್ ಆದ ಬಳಿಕ ದಸರಾಗೆ ಹೆಣ್ಣಾನೆಗಳು ಆಗಮಿಸಲಿವೆ. ಕಳೆದ ಬಾರಿ ರಾಮಾಪುರ ಕ್ಯಾಂಪ್ ಆನೆ ಲಕ್ಷ್ಮೀ ಗಂಡು ಮರಿಗೆ ಜನ್ಮ ನೀಡಿತ್ತು. ಗರ್ಭಿಣಿ ಆನೆಯನ್ನ ತಾಲೀಮಿಗೆ ಬಳಸಿ ಇಲಾಖೆ ಮುಜುಗರಕ್ಕೆ ಒಳಗಾಗಿತ್ತು. ಸದ್ಯ ದಸರಾಗೆ ಆಗಮಿಸುವ ಅನೆಗಳ ಬಗ್ಗೆ ಎಚ್ಚರಿಕೆ ವಹಿಸಲಾಗುತ್ತಿದೆ.
ಈ ತಿಂಗಳಾಂತ್ಯಕ್ಕೆ ಆನೆಗಳ ಪಟ್ಟಿ ರೆಡಿಯಾಗಲಿದೆ. 14 ಆನೆಗಳನ್ನು ದಸರಾಗೆ ಕರೆತರಲು ಇಲಾಖೆ ಚಿಂತನೆ ನಡೆಸಿದೆ. ಅರ್ಜುನ ಆನೆಗೆ ವಯಸ್ಸಾದ ಕಾರಣ ಈ ಬಾರಿ ದಸರಾ ಹಬ್ಬದಿಂದ ಕೈಬಿಡಲಾಗಿದೆ. ಕ್ಯಾಂಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಈ ಬಾರಿ ದಸರಾ ಜಂಬೂಸವಾರಿ ನಡೆಯಲಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…