ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ತಯಾರಿ ಶುರುವಾಗಿದೆ. 2023ನೇ ಸಾಲಿನ ಮೈಸೂರು ದಸರಾ ಹಬ್ಬ ಅಕ್ಟೋಬರ್ನಲ್ಲಿ ನಡೆಯಲಿದೆ. ಹೀಗಾಗಿ ವಿಶ್ವ ವಿಖ್ಯಾತ ಹಬ್ಬಕ್ಕೆ ತಯಾರಿ ಆರಂಭವಾಗಿದೆ. ದಸರಾಗೆ ಬರುವ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಲು ಅರಣ್ಯ ಇಲಾಖೆ ಮುಂದಾಗಿದೆ.
ಕಳೆದ ಬಾರಿ ಗರ್ಭಿಣಿ ಆನೆಯನ್ನ ತಾಲೀಮಿಗೆ ಬಳಸಿ ಅರಣ್ಯ ಇಲಾಖೆ ಮುಜುಗರಕ್ಕೆ ಒಳಗಾಗಿತ್ತು. ಹೀಗಾಗಿ ಈ ಬಾರಿ ಎಚ್ಚೆತ್ತ ಅರಣ್ಯ ಇಲಾಖೆ ಹೆಣ್ಣಾನೆಗಳಿಗೆ ಪ್ರೆಗ್ನೆನ್ಸಿ ಟೆಸ್ಟ್ ಮಾಡಿಸಲು ಮುಂದಾಗಿದೆ.
ಆನೆ ಕ್ಯಾಂಪ್ನಲ್ಲಿ ಪ್ರೆಗ್ನೆನ್ಸಿ ಟೆಸ್ಟ್ ಆದ ಬಳಿಕ ದಸರಾಗೆ ಹೆಣ್ಣಾನೆಗಳು ಆಗಮಿಸಲಿವೆ. ಕಳೆದ ಬಾರಿ ರಾಮಾಪುರ ಕ್ಯಾಂಪ್ ಆನೆ ಲಕ್ಷ್ಮೀ ಗಂಡು ಮರಿಗೆ ಜನ್ಮ ನೀಡಿತ್ತು. ಗರ್ಭಿಣಿ ಆನೆಯನ್ನ ತಾಲೀಮಿಗೆ ಬಳಸಿ ಇಲಾಖೆ ಮುಜುಗರಕ್ಕೆ ಒಳಗಾಗಿತ್ತು. ಸದ್ಯ ದಸರಾಗೆ ಆಗಮಿಸುವ ಅನೆಗಳ ಬಗ್ಗೆ ಎಚ್ಚರಿಕೆ ವಹಿಸಲಾಗುತ್ತಿದೆ.
ಈ ತಿಂಗಳಾಂತ್ಯಕ್ಕೆ ಆನೆಗಳ ಪಟ್ಟಿ ರೆಡಿಯಾಗಲಿದೆ. 14 ಆನೆಗಳನ್ನು ದಸರಾಗೆ ಕರೆತರಲು ಇಲಾಖೆ ಚಿಂತನೆ ನಡೆಸಿದೆ. ಅರ್ಜುನ ಆನೆಗೆ ವಯಸ್ಸಾದ ಕಾರಣ ಈ ಬಾರಿ ದಸರಾ ಹಬ್ಬದಿಂದ ಕೈಬಿಡಲಾಗಿದೆ. ಕ್ಯಾಂಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಈ ಬಾರಿ ದಸರಾ ಜಂಬೂಸವಾರಿ ನಡೆಯಲಿದೆ.
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…
ಮೈಸೂರು : ವನ್ಯಜೀವಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆ ನಡೆಸಿರುವ ಮಹಾರಾಷ್ಟ್ರ ರಾಜ್ಯದ ನಾಗ್ಪುರ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು(ಡಿಆರ್ಐ) ಮೈಸೂರಿನಲ್ಲಿ ಶಂಕಿತ…
ಹೊಸದಿಲ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ವಿರುದ್ಧ ಎದ್ದಿದ್ದ ರಾಜಕೀಯ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…