ಮೈಸೂರು

ಬಹುರೂಪಿಗೆ ಮುನ್ನುಡಿ : ನ.30ರಿಂದ ಪ್ರತಿ ಭಾನುವಾರ ನಾಟಕ ಪ್ರದರ್ಶನ

ಮೈಸೂರು : ಬಹು ನಿರೀಕ್ಷಿತ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಮೈಸೂರು ರಂಗಾಯಣ ಸಜ್ಜಾಗುತ್ತಿದ್ದು, ಬಹುರೂಪಿಗೆ ಮುನ್ನುಡಿಯಾಗಿ ರಂಗಾಯಣಗಳ ನಾಟಕೋತ್ಸವವನ್ನು ಆಯೋಜಿಸಿದೆ.

ರಂಗಾಯಣ ಆವರಣದಲ್ಲಿನ ಬಿ.ವಿ. ಕಾರಂತ ರಂಗ ಚಾವಡಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು ಮಾತನಾಡಿ, ನಾಟಕೋತ್ಸವದ ಪೋಸ್ಟರ್ ಬಿಡುಗಡೆ ಮಾಡಿ, ರಂಗಾಯಣದ ಪ್ರಮುಖ ನಾಟಕೋತ್ಸವವಾದ ಬಹುರೂಪಿಗೆ ೨೫ ವರ್ಷ ತುಂಬುತ್ತಿರುವ ಹಿನ್ನೆಲೆ ಈ ಬಾರಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಬಹುರೂಪಿಗೆ ಮುನ್ನುಡಿಯಾಗಿ ನ.೩೦ರಿಂದ ಜ.೪ರವರೆಗೆ ಪ್ರತಿ ಭಾನುವಾರ ನಾಡಿನ ವಿವಿಧ ರಾಂಗಾಯಣಗಳ ತಂಡದಿಂದ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ನಾಟಕ ಉತ್ಸವದಲ್ಲಿ ಯಕ್ಷ ರಂಗಾಯಣ ಕಾರ್ಕಳ, ಶಿವಮೊಗ್ಗ ರಂಗಾಯಣ, ಧಾರವಾಡ ರಂಗಾಯಣ, ವೃತ್ತಿ ರಂಗಾಯಣ ದಾವಣಗೆರೆ, ಕಲಬುರಗಿ ರಂಗಾಯಣ ಹಾಗೂ ಮೈಸೂರು ರಂಗಾಯಣಗಳಿಂದ ವಾರಾಂತ್ಯದಲ್ಲಿನಾಟಕಗಳು ರಂಗಾಯಣದ ಭೂಮಿಗೀತ ರಂಗಮಂದಿರದಲ್ಲಿ ಪ್ರದರ್ಶನ ಕಾಣಲಿವೆ ಎಂದು ತಿಳಿಸಿದರು.

ಇದನ್ನು ಓದಿ: ನವೆಂಬರ್.‌20ರಂದು ಮೈಸೂರಿನಲ್ಲಿ ಕೌದಿ ನಾಟಕ ಪ್ರದರ್ಶನ

ನಾಟಕಗಳ ವಿವರ :
ನ.೩೦ರಂದು ಕಾರ್ಕಳದ ಯಕ್ಷ ರಂಗಾಯಣ ತಂಡದಿಂದ ಬಿ.ಆರ್.ವೆಂಕಟರಮಣ ಐತಾಳ್ ನಿರ್ದೇಶನದ ಗುಲಾಮನ ಸ್ವಾತಂತ್ರ್ಯ ಯಾತ್ರೆ ನಾಟಕ ಪ್ರದರ್ಶನ, ಡಿ.೧ರಂದು ಕಾರ್ಕಳದ ಯಕ್ಷ ರಂಗಾಯಣ ತಂಡದಿಂದ ಶ್ರೀಕಾಂತ್ ಎನ್.ವಿ. ನಿರ್ದೇಶನದ ‘ಮಹಾತ್ಮರ ಬರವಿಗಾಗಿ’ ನಾಟಕ ಪ್ರದರ್ಶನ ಇರಲಿದೆ.

ಡಿ.೭ರಂದು ಮೈಸೂರು ರಂಗಾಯಣ ತಂಡದಿಂದ ಗಣೇಶ್ ಮಂದಾರ್ತಿ ನಿರ್ದೇಶನದ ‘ಮೈ ಫ್ಯಾಮಿಲಿ’ ನಾಟಕ, ಡಿ.೧೪ರಂದು ಶಿವಮೊಗ್ಗ ರಂಗಾಯಣದ ತಂಡದಿಂದ ಚಿದಂಬರರಾವ್ ಜಂಬೆ ನಿರ್ದೇಶನದ ನಮ್ಮೊಳಗೊಬ್ಬ ಗಾಂಽ ನಾಟಕ ಪ್ರದರ್ಶನಗೊಳ್ಳಲಿದೆ. ಹಾಗೆಯೇ, ಡಿ.೨೧ರಂದು ದಾವಣಗೆರೆ ರಂಗಾಯಣ ತಂಡದಿಂದ ಮಾಲತೇಶ್ ಬಡಿಗೇರ್ ನಿರ್ದೇಶನದ ‘ಪ್ರತಿ ಗಂಧರ್ವ’ ನಾಟಕ, ಡಿ.೨೮ರಂದು ಧಾರವಾಡ ರಂಗಾಯಣ ತಂಡದಿಂದ ಡಾ. ಪ್ರಕಾಶ್ ಗರುಡ ನಿರ್ದೇಶನದ ‘ಕಂದಗಲ್ಲ ಭಾರತ’ ನಾಟಕ ಹಾಗೂ ೨೦೨೬ರ ಜ.೪ರಂದು ಕಲಬುರ್ಗಿ ರಂಗಾಯಣ ತಂಡದಿಂದ ಹುಲುಗಪ್ಪ ಕಟ್ಟಿಮನಿ ನಿರ್ದೇಶನದ ‘ಕಾಲಚಕ್ರ’ ನಾಟಕ ಪ್ರದರ್ಶನ ಇರಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕನ್ನಡ ಮತ್ತು ಸಂಸ್ಕ ತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಉಪನಿರ್ದೇಶಕ ಎಂ.ಡಿ. ಸುದರ್ಶನ್, ಹಿರಿಯ ರಂಗ ಕಲಾವಿದೆ ಕೆ.ಆರ್. ನಂದಿನಿ, ಬಿ.ಆರ್. ಶಶಿಕಲಾ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

5 mins ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

48 mins ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

1 hour ago

ಶಾರುಖ್‌ ಖಾನ್‌ ಪುತ್ರನಿಂದ ದುರ್ವತನೆ ಪ್ರಕರಣ: ಡಿಜಿ & ಡಿಜಿಪಿಗೆ ದೂರು ಸಲ್ಲಿಕೆ

ಬೆಂಗಳೂರು: ಬಾಲಿವುಡ್‌ ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಬೆಂಗಳೂರಿನ ಪಬ್‌ನಲ್ಲಿ ಮಿಡಲ್‌ ಫಿಂಗಲ್‌ ತೋರಿಸಿ ದುರ್ವತನೆ ಮೆರೆದಿದ್ದು,…

2 hours ago

1000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದು: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಯಾಣಿಕರು

ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…

2 hours ago

9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಕಾಮುಕನನ್ನು ಹಿಡಿದು ಥಳಿಸಿದ ಗ್ರಾಮಸ್ಥರು

ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…

3 hours ago