ಮೈಸೂರು

ಬಹುರೂಪಿಗೆ ಮುನ್ನುಡಿ : ನ.30ರಿಂದ ಪ್ರತಿ ಭಾನುವಾರ ನಾಟಕ ಪ್ರದರ್ಶನ

ಮೈಸೂರು : ಬಹು ನಿರೀಕ್ಷಿತ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಮೈಸೂರು ರಂಗಾಯಣ ಸಜ್ಜಾಗುತ್ತಿದ್ದು, ಬಹುರೂಪಿಗೆ ಮುನ್ನುಡಿಯಾಗಿ ರಂಗಾಯಣಗಳ ನಾಟಕೋತ್ಸವವನ್ನು ಆಯೋಜಿಸಿದೆ.

ರಂಗಾಯಣ ಆವರಣದಲ್ಲಿನ ಬಿ.ವಿ. ಕಾರಂತ ರಂಗ ಚಾವಡಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು ಮಾತನಾಡಿ, ನಾಟಕೋತ್ಸವದ ಪೋಸ್ಟರ್ ಬಿಡುಗಡೆ ಮಾಡಿ, ರಂಗಾಯಣದ ಪ್ರಮುಖ ನಾಟಕೋತ್ಸವವಾದ ಬಹುರೂಪಿಗೆ ೨೫ ವರ್ಷ ತುಂಬುತ್ತಿರುವ ಹಿನ್ನೆಲೆ ಈ ಬಾರಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಬಹುರೂಪಿಗೆ ಮುನ್ನುಡಿಯಾಗಿ ನ.೩೦ರಿಂದ ಜ.೪ರವರೆಗೆ ಪ್ರತಿ ಭಾನುವಾರ ನಾಡಿನ ವಿವಿಧ ರಾಂಗಾಯಣಗಳ ತಂಡದಿಂದ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ನಾಟಕ ಉತ್ಸವದಲ್ಲಿ ಯಕ್ಷ ರಂಗಾಯಣ ಕಾರ್ಕಳ, ಶಿವಮೊಗ್ಗ ರಂಗಾಯಣ, ಧಾರವಾಡ ರಂಗಾಯಣ, ವೃತ್ತಿ ರಂಗಾಯಣ ದಾವಣಗೆರೆ, ಕಲಬುರಗಿ ರಂಗಾಯಣ ಹಾಗೂ ಮೈಸೂರು ರಂಗಾಯಣಗಳಿಂದ ವಾರಾಂತ್ಯದಲ್ಲಿನಾಟಕಗಳು ರಂಗಾಯಣದ ಭೂಮಿಗೀತ ರಂಗಮಂದಿರದಲ್ಲಿ ಪ್ರದರ್ಶನ ಕಾಣಲಿವೆ ಎಂದು ತಿಳಿಸಿದರು.

ಇದನ್ನು ಓದಿ: ನವೆಂಬರ್.‌20ರಂದು ಮೈಸೂರಿನಲ್ಲಿ ಕೌದಿ ನಾಟಕ ಪ್ರದರ್ಶನ

ನಾಟಕಗಳ ವಿವರ :
ನ.೩೦ರಂದು ಕಾರ್ಕಳದ ಯಕ್ಷ ರಂಗಾಯಣ ತಂಡದಿಂದ ಬಿ.ಆರ್.ವೆಂಕಟರಮಣ ಐತಾಳ್ ನಿರ್ದೇಶನದ ಗುಲಾಮನ ಸ್ವಾತಂತ್ರ್ಯ ಯಾತ್ರೆ ನಾಟಕ ಪ್ರದರ್ಶನ, ಡಿ.೧ರಂದು ಕಾರ್ಕಳದ ಯಕ್ಷ ರಂಗಾಯಣ ತಂಡದಿಂದ ಶ್ರೀಕಾಂತ್ ಎನ್.ವಿ. ನಿರ್ದೇಶನದ ‘ಮಹಾತ್ಮರ ಬರವಿಗಾಗಿ’ ನಾಟಕ ಪ್ರದರ್ಶನ ಇರಲಿದೆ.

ಡಿ.೭ರಂದು ಮೈಸೂರು ರಂಗಾಯಣ ತಂಡದಿಂದ ಗಣೇಶ್ ಮಂದಾರ್ತಿ ನಿರ್ದೇಶನದ ‘ಮೈ ಫ್ಯಾಮಿಲಿ’ ನಾಟಕ, ಡಿ.೧೪ರಂದು ಶಿವಮೊಗ್ಗ ರಂಗಾಯಣದ ತಂಡದಿಂದ ಚಿದಂಬರರಾವ್ ಜಂಬೆ ನಿರ್ದೇಶನದ ನಮ್ಮೊಳಗೊಬ್ಬ ಗಾಂಽ ನಾಟಕ ಪ್ರದರ್ಶನಗೊಳ್ಳಲಿದೆ. ಹಾಗೆಯೇ, ಡಿ.೨೧ರಂದು ದಾವಣಗೆರೆ ರಂಗಾಯಣ ತಂಡದಿಂದ ಮಾಲತೇಶ್ ಬಡಿಗೇರ್ ನಿರ್ದೇಶನದ ‘ಪ್ರತಿ ಗಂಧರ್ವ’ ನಾಟಕ, ಡಿ.೨೮ರಂದು ಧಾರವಾಡ ರಂಗಾಯಣ ತಂಡದಿಂದ ಡಾ. ಪ್ರಕಾಶ್ ಗರುಡ ನಿರ್ದೇಶನದ ‘ಕಂದಗಲ್ಲ ಭಾರತ’ ನಾಟಕ ಹಾಗೂ ೨೦೨೬ರ ಜ.೪ರಂದು ಕಲಬುರ್ಗಿ ರಂಗಾಯಣ ತಂಡದಿಂದ ಹುಲುಗಪ್ಪ ಕಟ್ಟಿಮನಿ ನಿರ್ದೇಶನದ ‘ಕಾಲಚಕ್ರ’ ನಾಟಕ ಪ್ರದರ್ಶನ ಇರಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕನ್ನಡ ಮತ್ತು ಸಂಸ್ಕ ತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಉಪನಿರ್ದೇಶಕ ಎಂ.ಡಿ. ಸುದರ್ಶನ್, ಹಿರಿಯ ರಂಗ ಕಲಾವಿದೆ ಕೆ.ಆರ್. ನಂದಿನಿ, ಬಿ.ಆರ್. ಶಶಿಕಲಾ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

3 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

3 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

4 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

4 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

4 hours ago