ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು ನಡೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.
ಯುಗಾದಿ ಹಬ್ಬದಂದು ನಡೆಯುವ ಈ ಜಾತ್ರೆ ಹಲವು ವಿಶೇಷಗಳಿಂದ ಕೂಡಿದೆ. ಜಾತ್ರೆಯ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ, ಅಭಿಷೇಕಗಳ ಜೊತೆಗೆ ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ಮುತ್ತಿನ ಅಲಂಕಾರ, ಸಹಸ್ರ ನಾಮಾರ್ಚನೆ, ನಿವೇದನೆ, ಮಹಾಮಂಗಳಾರತಿ, ರಾಜೋಪಾಚಾರ, ರಾಷ್ಟ್ರಾರ್ಶಿವಾದ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಬಳಿಕ ಪಾದ ಬೆಟ್ಟದ ಹಾಲುಗಡದ ಕಪಿಲಾ ನದಿಯ ದಂಡೆಯ ಮೇಲಿನ ಜಪ್ಪದಕಟ್ಟೆಯಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.
ಬೆಟ್ಟ ತಲುಪಲು ಸರಗೂರು ಮಾರ್ಗವಾಗಿ ಪುರದಕಟ್ಟೆ ಮೂಲಕ ತಲುಪಬಹುದಾಗಿದ್ದು, ಮೈಸೂರಿನಿಂದ 52 ಕಿ.ಮೀ ಹಾಗೂ ಎಚ್ ಡಿ ಕೋಟೆ ಪಟ್ಟಣದಿಂದ 26 ಹಾಗೂ ಸರಗೂರಿನಿಂದ 14 ಕಿ ಮೀ ದೂರದಲ್ಲಿದೆ.
ಮೈಸೂರು, ಎಚ್.ಡಿ.ಕೋಟೆಯಿಂದ ಬರುವವರು ತುಂಬಸೋಗೆ, ಇಟ್ನಾ ಮಾರ್ಗವಾಗಿಯೂ ಬೆಟ್ಟ ತಲುಪಬುಹುದಾಗಿದೆ.
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…