ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು ನಡೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.
ಯುಗಾದಿ ಹಬ್ಬದಂದು ನಡೆಯುವ ಈ ಜಾತ್ರೆ ಹಲವು ವಿಶೇಷಗಳಿಂದ ಕೂಡಿದೆ. ಜಾತ್ರೆಯ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ, ಅಭಿಷೇಕಗಳ ಜೊತೆಗೆ ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ಮುತ್ತಿನ ಅಲಂಕಾರ, ಸಹಸ್ರ ನಾಮಾರ್ಚನೆ, ನಿವೇದನೆ, ಮಹಾಮಂಗಳಾರತಿ, ರಾಜೋಪಾಚಾರ, ರಾಷ್ಟ್ರಾರ್ಶಿವಾದ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಬಳಿಕ ಪಾದ ಬೆಟ್ಟದ ಹಾಲುಗಡದ ಕಪಿಲಾ ನದಿಯ ದಂಡೆಯ ಮೇಲಿನ ಜಪ್ಪದಕಟ್ಟೆಯಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.
ಬೆಟ್ಟ ತಲುಪಲು ಸರಗೂರು ಮಾರ್ಗವಾಗಿ ಪುರದಕಟ್ಟೆ ಮೂಲಕ ತಲುಪಬಹುದಾಗಿದ್ದು, ಮೈಸೂರಿನಿಂದ 52 ಕಿ.ಮೀ ಹಾಗೂ ಎಚ್ ಡಿ ಕೋಟೆ ಪಟ್ಟಣದಿಂದ 26 ಹಾಗೂ ಸರಗೂರಿನಿಂದ 14 ಕಿ ಮೀ ದೂರದಲ್ಲಿದೆ.
ಮೈಸೂರು, ಎಚ್.ಡಿ.ಕೋಟೆಯಿಂದ ಬರುವವರು ತುಂಬಸೋಗೆ, ಇಟ್ನಾ ಮಾರ್ಗವಾಗಿಯೂ ಬೆಟ್ಟ ತಲುಪಬುಹುದಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…