ಮೈಸೂರು

ಮೈಸೂರು| ಯೋಗ ದಿನಾಚರಣೆ ಪ್ರಯುಕ್ತ ಅರಮನೆ ಆವರಣದಲ್ಲಿ ಪೂರ್ವಭಾವಿ ತಾಲೀಮು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಇಂದು ಪೂರ್ವಭಾವಿ ತಾಲೀಮು ನಡೆಸಲಾಯಿತು.

11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಆಯುಷ್ ಇಲಾಖೆ ಹಾಗೂ ಮೈಸೂರು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಅರಮನೆ ಮುಂಭಾಗ ಏರ್ಪಡಿಸಿದ್ದ ಪೂರ್ವಭಾವಿ ಯೋಗ ಅಭ್ಯಾಸದಲ್ಲಿ ನೂರಾರು ಯೋಗಪಟುಗಳು ವಿವಿಧ ಯೋಗಾಸನ ಮಾಡುವ ಮುಖಾಂತರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಪೂರ್ವಭಾವಿಯಾಗಿ ಯೋಗ ಆಯುಷ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪೂರ್ವಭಾವಿ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ದಿನದಂದು ಇದೇ ಅರಮನೆ ಆವರಣದಲ್ಲಿ ಯೋಗ ದಿನಾಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸುವುದೇ ಈ ಕಾರ್ಯಕ್ರಮಗಳ ಮೂಲ ಉದ್ದೇಶವಾಗಿದೆ. ಈ ಕಾರ್ಯಕ್ರಮಕ್ಕೆ ಯೋಗ ಸಂಸ್ಥೆಗಳ ನೆರವಿನಿಂದ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕ ದೇವಿ ಹೇಳಿದರು.

ಅರಮನೆ ಮುಂಭಾಗ ವಿವಿಧ ಆಸನಗಳನ್ನು ಮಾಡುವ ಮುಖಾಂತರ ಪೂರ್ವಭಾವಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದು ಸಂತಸ ತಂದಿದೆ. ನಮ್ಮ ಆರೋಗ್ಯ ವೃದ್ಧಿಸಿಕೊಳ್ಳಲು ಯೋಗ ಒಂದು ವರದಾನವಾಗಿದೆ. ಎಲ್ಲರೂ ಸಹ ಯೋಗಾಸನ ಮಾಡಿದರೆ ಉತ್ತಮ ಆರೋಗ್ಯ ಕಂಡುಕೊಳ್ಳಲು ಸಾಧ್ಯ ಎಂದು ಯೋಗ ಪಟು ಚಾಂದಿನಿ ಹೇಳಿದರು.

ಯೋಗವೊಂದು ಆರೋಗ್ಯವಾಗಿರಲು ಒಂದು ಸಾಧನವಾಗಿದೆ. ಎಲ್ಲರೂ ಯೋಗ ಮಾಡಿದರೆ ತಮ್ಮ ಆರೋಗ್ಯವನ್ನು ತಾವೇ ಕಾಪಾಡಿಕೊಳ್ಳಲು ಸಾಧ್ಯ. ನಾನು ಅಂದ ವಿದ್ಯಾರ್ಥಿ ಆಗಿದ್ದರು ಯೋಗ ಅಭ್ಯಾಸದಲ್ಲಿ ತೊಡಗಿಕೊಂಡಿದ್ದೇನೆ ಎಂದು ಅಂದ ವಿದ್ಯಾರ್ಥಿ ಪೃಥ್ವಿರಾಜ್ ಸಂತಸ ವ್ಯಕ್ತಪಡಿಸಿದರು.

ಮಹಿಳೆಯರು ಹೆಚ್ಚು ಯೋಗ ಅಭ್ಯಾಸದಲ್ಲಿ ತೊಡಗಿಕೊಂಡರೆ ಅವರು ದಿನನಿತ್ಯದ ಕೆಲಸ ಕಾರ್ಯಗಳಿಗೆ ಅನುಕೂಲಕರವಾಗಲಿದೆ. ಋತುಮಾನದಲ್ಲಿ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ ಎಂದು ಯೋಗ ಪಟು ಶಿಲ್ಪ ಎಂ.ಎಸ್ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

13 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

17 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

17 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

18 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

19 hours ago