ಮೈಸೂರು

ನೀರು ಕಲುಷಿತವಾಗುವುದನ್ನು ತಡೆಗಟ್ಟಿ : ಸಿಇಒ ಕೆ.ಎಂ.ಗಾಯಿತ್ರಿ

ಮೈಸೂರು: ಸಾರ್ವಜನಿಕವಾಗಿ ಬಳಕೆಯಾಗುವ ಕೊಳವೆ ಬಾವಿ, ಬೋರ್ ವೆಲ್, ಶುದ್ಧ ಕುಡಿಯುವ ನೀರು ಘಟಕಗಳ ಅಕ್ಕ ಪಕ್ಕ ಸ್ವಚ್ಛತೆಯನ್ನು ಕಾಪಾಡಿ ನೀರು ಕಲುಷಿತ ಆಗದಂತೆ ಎಚ್ಚರಿಕೆ ವಹಿಸಿ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಗಾಯಿತ್ರಿ ತಿಳಿಸಿದರು.

ತಿ ನರಸೀಪುರ ತಾಲ್ಲೂಕಿನ ಸೋಸಲೆ, ಬೆನಕನಹಳ್ಳಿ, ದೊಡ್ಡೇಬಾಗಿಲು ಗ್ರಾ. ಪಂ. ಯ ಹೊರಳಹಳ್ಳಿ, ಕೊಳತ್ತೂರು, ಚಿದರವಳ್ಳಿ ಹಾಗೂ ಉಕ್ಕಲಗೆರೆ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದ ಅವರು ಕುಡಿಯುವ ನೀರಿನ ಸ್ವಚ್ಛತೆ ಬಗ್ಗೆ ಮೊದಲ ಆಧ್ಯತೆ ವಹಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವಂತಹ ಕೊಳವೆ ಬಾವಿಗಳು, ಶುದ್ಧ ಕುಡಿಯುವ ನೀರಿನ ಘಟಕಗಳು ಹಾಗೂ ಜಾನುವಾರು ಕುಡಿಯುವ ತೊಟ್ಟಿಗಳ ಹತ್ತಿರ ಕಡ್ಡಾಯವಾಗಿ ಸ್ವಚ್ಛತೆಯನ್ನು ಕಾಪಾಡಬೇಕು. ಎಲ್ಲೆಂದರಲ್ಲಿ ತ್ಯಾಜ್ಯವನ್ನು ಬಿಸಾಡದೆ ಊರಾಚೆ ಸಾಗಿಸಿ ಪರಿಸರವನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು. ನೀರಿನ ಟ್ಯಾಂಕ್, ಬೋರ್ ವೆಲ್ ಗಳ ಸ್ವಚ್ಛತೆ ಹಾಗೂ ಶುದ್ಧತೆಗಾಗಿ ನೀರಿನ ಪರೀಕ್ಷೆಯನ್ನು ಕಾಲ ಕಾಲಕ್ಕೆ ಮಾಡುವಂತೆ ತಿಳಿಸಿದರು.

ಪ್ರತಿಯೊಬ್ಬ ನೀರುಗಂಟೆಗಳಿಂದ ನೀರು ಬಿಡುವ ಅವಧಿ, ಎಷ್ಟು ಮನೆಗಳಿವೆ ಎಂಬ ಮಾಹಿತಿ ಸಂಗ್ರಹಿಸಿ, ನೀರಿನ ಶುದ್ಧತೆ ಬಗ್ಗೆ ಈ ಮುಂಚೆ ತರಬೇತಿ ನೀಡಿದ್ದು, ಅದರಂತೆ ನೀರಿನ ಶುದ್ಧತೆ ಪರೀಕ್ಷಿಸಿ ನೀರು ಬಿಡಬೇಕು. ಆಶಾ ಕಾರ್ಯಕರ್ತೆಯರು ಪ್ರತಿದಿನ ಮನೆ ಮನೆಗೆ ಭೇಟಿ ನೀಡಿ ಸಾಂಕ್ರಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಅರಿವು ಮೂಡಿಸಬೇಕು. ಕುಡಿಯುವ ನೀರನ್ನು ಕುದಿಸಿ ಆರಿಸಿ ಬಳಸುವಂತೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿ. ಪಂ. ಉಪಕಾರ್ಯದರ್ಶಿ (ಆಡಳಿತ) ನಾಗರಾಜು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ರಂಜಿತ್, ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರ, ಸಹಾಯಕ ನಿರ್ದೇಶಕರು (ಗ್ರಾ.ಉ) ಶಶಿಕುಮಾರ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇ ಕೈಲಾಶ್ ಮೂರ್ತಿ, ಜೆಇ ಮಂಜುನಾಥ್, ಪಂಚಾಯತಿ ಅಭಿವೃಧ್ದಿ ಅಧಿಕಾರಿಗಳು, ಟಿ ಸಿ, ಟಿಎಇ, ಗ್ರಾ.ಪಂ. ಅಧ್ಯಕ್ಷರು ಹಾಗೂ ಸದಸ್ಯರು ಇದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

26 mins ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

38 mins ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

50 mins ago

ಮೈಸೂರು | ಚಿರತೆ ಸೆರೆ ; ನಿಟ್ಟುಸಿರುಬಿಟ್ಟ ಕುಟುಂಬಸ್ಥರು

ಮೈಸೂರು : ನಗರದ ಹೃದಯ ಭಾಗವಾದ ಸಿದ್ದಾರ್ಥ ನಗರದ ಸುರೇಶ್‌ ಎಂಬುವವರ ಮನೆಗೆ ಏಕಾಏಕಿ ನುಗ್ಗಿದ ಚಿರತೆಯನ್ನು ಅರಣ್ಯ ಇಲಾಖೆ…

59 mins ago

ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ; ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಕ್ಷೇಪ

ಮೈಸೂರು : ಡಿಲಿಮಿಟೇಶನ್ ಕಾಯ್ದೆ (ಕ್ಷೇತ್ರ ಪುನರ್ವಿಂಗಡಣೆ ಕಾಯ್ದೆ)ಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್…

1 hour ago

ಸಮೃದ್ಧೀಕರಿಸಿದ ಯುರೇನಿಯಂ ಹಸ್ತಾಂತರಿಸಲು ಇರಾನ್ ಒಪ್ಪಿದೆ : ಟ್ರಂಪ್

ವಾಷಿಂಗ್ಟನ್ : ಇರಾನ್ ತನ್ನ ಬಳಿಯಿರುವ ಸಮೃದ್ಧೀಕರಿಸಿದ ಯುರೇನಿಯಂ ಸಂಗ್ರಹವನ್ನು ಅಮೆರಿಕಕ್ಕೆ ಹಸ್ತಾಂತರಿಸಲು ಒಪ್ಪಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

1 hour ago