ಮೈಸೂರು

ನೀರು ಕಲುಷಿತವಾಗುವುದನ್ನು ತಡೆಗಟ್ಟಿ : ಸಿಇಒ ಕೆ.ಎಂ.ಗಾಯಿತ್ರಿ

ಮೈಸೂರು: ಸಾರ್ವಜನಿಕವಾಗಿ ಬಳಕೆಯಾಗುವ ಕೊಳವೆ ಬಾವಿ, ಬೋರ್ ವೆಲ್, ಶುದ್ಧ ಕುಡಿಯುವ ನೀರು ಘಟಕಗಳ ಅಕ್ಕ ಪಕ್ಕ ಸ್ವಚ್ಛತೆಯನ್ನು ಕಾಪಾಡಿ ನೀರು ಕಲುಷಿತ ಆಗದಂತೆ ಎಚ್ಚರಿಕೆ ವಹಿಸಿ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಎಂ ಗಾಯಿತ್ರಿ ತಿಳಿಸಿದರು.

ತಿ ನರಸೀಪುರ ತಾಲ್ಲೂಕಿನ ಸೋಸಲೆ, ಬೆನಕನಹಳ್ಳಿ, ದೊಡ್ಡೇಬಾಗಿಲು ಗ್ರಾ. ಪಂ. ಯ ಹೊರಳಹಳ್ಳಿ, ಕೊಳತ್ತೂರು, ಚಿದರವಳ್ಳಿ ಹಾಗೂ ಉಕ್ಕಲಗೆರೆ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದ ಅವರು ಕುಡಿಯುವ ನೀರಿನ ಸ್ವಚ್ಛತೆ ಬಗ್ಗೆ ಮೊದಲ ಆಧ್ಯತೆ ವಹಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವಂತಹ ಕೊಳವೆ ಬಾವಿಗಳು, ಶುದ್ಧ ಕುಡಿಯುವ ನೀರಿನ ಘಟಕಗಳು ಹಾಗೂ ಜಾನುವಾರು ಕುಡಿಯುವ ತೊಟ್ಟಿಗಳ ಹತ್ತಿರ ಕಡ್ಡಾಯವಾಗಿ ಸ್ವಚ್ಛತೆಯನ್ನು ಕಾಪಾಡಬೇಕು. ಎಲ್ಲೆಂದರಲ್ಲಿ ತ್ಯಾಜ್ಯವನ್ನು ಬಿಸಾಡದೆ ಊರಾಚೆ ಸಾಗಿಸಿ ಪರಿಸರವನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು. ನೀರಿನ ಟ್ಯಾಂಕ್, ಬೋರ್ ವೆಲ್ ಗಳ ಸ್ವಚ್ಛತೆ ಹಾಗೂ ಶುದ್ಧತೆಗಾಗಿ ನೀರಿನ ಪರೀಕ್ಷೆಯನ್ನು ಕಾಲ ಕಾಲಕ್ಕೆ ಮಾಡುವಂತೆ ತಿಳಿಸಿದರು.

ಪ್ರತಿಯೊಬ್ಬ ನೀರುಗಂಟೆಗಳಿಂದ ನೀರು ಬಿಡುವ ಅವಧಿ, ಎಷ್ಟು ಮನೆಗಳಿವೆ ಎಂಬ ಮಾಹಿತಿ ಸಂಗ್ರಹಿಸಿ, ನೀರಿನ ಶುದ್ಧತೆ ಬಗ್ಗೆ ಈ ಮುಂಚೆ ತರಬೇತಿ ನೀಡಿದ್ದು, ಅದರಂತೆ ನೀರಿನ ಶುದ್ಧತೆ ಪರೀಕ್ಷಿಸಿ ನೀರು ಬಿಡಬೇಕು. ಆಶಾ ಕಾರ್ಯಕರ್ತೆಯರು ಪ್ರತಿದಿನ ಮನೆ ಮನೆಗೆ ಭೇಟಿ ನೀಡಿ ಸಾಂಕ್ರಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಅರಿವು ಮೂಡಿಸಬೇಕು. ಕುಡಿಯುವ ನೀರನ್ನು ಕುದಿಸಿ ಆರಿಸಿ ಬಳಸುವಂತೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿ. ಪಂ. ಉಪಕಾರ್ಯದರ್ಶಿ (ಆಡಳಿತ) ನಾಗರಾಜು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ರಂಜಿತ್, ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರ, ಸಹಾಯಕ ನಿರ್ದೇಶಕರು (ಗ್ರಾ.ಉ) ಶಶಿಕುಮಾರ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇ ಕೈಲಾಶ್ ಮೂರ್ತಿ, ಜೆಇ ಮಂಜುನಾಥ್, ಪಂಚಾಯತಿ ಅಭಿವೃಧ್ದಿ ಅಧಿಕಾರಿಗಳು, ಟಿ ಸಿ, ಟಿಎಇ, ಗ್ರಾ.ಪಂ. ಅಧ್ಯಕ್ಷರು ಹಾಗೂ ಸದಸ್ಯರು ಇದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

10 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

10 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

13 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago