ಮೈಸೂರು

ಮೈಸೂರು ದಸರಾ ಸೊಬಗನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಮೈಸೂರು: ಮೈಸೂರು ದಸರಾ ಬುಧವಾರವಷ್ಟೇ ತಾರ್ಕಿಕ ಅಂತ್ಯ ಕಂಡಿದೆ. ಬುಧವಾರ  ಸಂಜೆ ನಡೆದ ಜಂಬೂ ಸವಾರಿ, ಮತ್ತು  ಪಂಜಿನ ಕವಾಯತು ಕಾರ್ಯಕ್ರಮಗಳ ನಂತರ ಈ ಬಾರಿಯ ದಸರಾಕ್ಕೆ ವಿದಾಯ ಹೇಳಲಾಗಿದೆ. ಈ ಬಾರಿಯ ದಸರೆಯ ಸೊಬಗನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಕೊಂಡಾಡಿದ್ದಾರೆ.

ಈ ಬಾರಿಯ ಮೈಸೂರು ದಸರಾ ಅದ್ಭುತವಾಗಿತ್ತು. ತಮ್ಮ ಸಂಸ್ಕೃತಿ ಹಾಗೂ ಪರಂಪರೆಯನ್ನು ಇನ್ನೂ ಉಳಿಸಿಕೊಂಡು ಬಂದಿರುವ ಮೈಸೂರು ಜನತೆಯನ್ನು ನಾನು ಶ್ಲಾಘಿಸುತ್ತೇನೆ. ಈ ಬಾರಿಯ ಯೋಗ ದಿನದಂದು ನಾನು ಮೈಸೂರಿಗೆ ಭೇಟಿ ನೀಡಿದ್ದೆ. ಮೈಸೂರಿನ ಜನರೊಂದಿಗೆ ಬೆರೆಯುವ ಅವಕಾಶ ನನಗೆ ಒದಗಿತ್ತು ಎಂದು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

ಕರ್ನಾಟಕದ ಹೊಸನಗರದವರಾದ ನಿವಾನೆ ಕಲಾನಾಥ್ ಭಟ್ ಎಂಬ ಆರ್ ಎಸ್ಎಸ್ ಸ್ವಯಂಸೇವಕರು ಈ ಬಾರಿಯ ಜಂಬೂಸವಾರಿಗೆ ಸಿಎಂ ಬೊಮ್ಮಾಯಿ ಪುಷ್ಪಾರ್ಚನೆ ಮಾಡುತ್ತಿರುವುದು ಹಾಗೂ ಜಂಬೂ ಸವಾರಿಯು ಜನಸಮೂಹದ ನಡುವೆ ಸಾಗುತ್ತಿರುವ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. ಫೋಟೋಗಳನ್ನು ನೋಡಿ ಮೆಚ್ಚಿಕೊಂಡಿರುವ ಪ್ರಧಾನಿ ಮೋದಿ, ಜಂಬೂ ಸವಾರಿಯನ್ನು ಮನಸಾರೆ ಶ್ಲಾಘಿಸಿದ್ದಾರೆ

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago