ಮೈಸೂರು: ಮೈಸೂರು ದಸರಾ ಬುಧವಾರವಷ್ಟೇ ತಾರ್ಕಿಕ ಅಂತ್ಯ ಕಂಡಿದೆ. ಬುಧವಾರ ಸಂಜೆ ನಡೆದ ಜಂಬೂ ಸವಾರಿ, ಮತ್ತು ಪಂಜಿನ ಕವಾಯತು ಕಾರ್ಯಕ್ರಮಗಳ ನಂತರ ಈ ಬಾರಿಯ ದಸರಾಕ್ಕೆ ವಿದಾಯ ಹೇಳಲಾಗಿದೆ. ಈ ಬಾರಿಯ ದಸರೆಯ ಸೊಬಗನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಕೊಂಡಾಡಿದ್ದಾರೆ.
ಈ ಬಾರಿಯ ಮೈಸೂರು ದಸರಾ ಅದ್ಭುತವಾಗಿತ್ತು. ತಮ್ಮ ಸಂಸ್ಕೃತಿ ಹಾಗೂ ಪರಂಪರೆಯನ್ನು ಇನ್ನೂ ಉಳಿಸಿಕೊಂಡು ಬಂದಿರುವ ಮೈಸೂರು ಜನತೆಯನ್ನು ನಾನು ಶ್ಲಾಘಿಸುತ್ತೇನೆ. ಈ ಬಾರಿಯ ಯೋಗ ದಿನದಂದು ನಾನು ಮೈಸೂರಿಗೆ ಭೇಟಿ ನೀಡಿದ್ದೆ. ಮೈಸೂರಿನ ಜನರೊಂದಿಗೆ ಬೆರೆಯುವ ಅವಕಾಶ ನನಗೆ ಒದಗಿತ್ತು ಎಂದು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಕರ್ನಾಟಕದ ಹೊಸನಗರದವರಾದ ನಿವಾನೆ ಕಲಾನಾಥ್ ಭಟ್ ಎಂಬ ಆರ್ ಎಸ್ಎಸ್ ಸ್ವಯಂಸೇವಕರು ಈ ಬಾರಿಯ ಜಂಬೂಸವಾರಿಗೆ ಸಿಎಂ ಬೊಮ್ಮಾಯಿ ಪುಷ್ಪಾರ್ಚನೆ ಮಾಡುತ್ತಿರುವುದು ಹಾಗೂ ಜಂಬೂ ಸವಾರಿಯು ಜನಸಮೂಹದ ನಡುವೆ ಸಾಗುತ್ತಿರುವ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. ಫೋಟೋಗಳನ್ನು ನೋಡಿ ಮೆಚ್ಚಿಕೊಂಡಿರುವ ಪ್ರಧಾನಿ ಮೋದಿ, ಜಂಬೂ ಸವಾರಿಯನ್ನು ಮನಸಾರೆ ಶ್ಲಾಘಿಸಿದ್ದಾರೆ
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…