ಮೈಸೂರು: ಮೈಸೂರು ದಸರಾ ಬುಧವಾರವಷ್ಟೇ ತಾರ್ಕಿಕ ಅಂತ್ಯ ಕಂಡಿದೆ. ಬುಧವಾರ ಸಂಜೆ ನಡೆದ ಜಂಬೂ ಸವಾರಿ, ಮತ್ತು ಪಂಜಿನ ಕವಾಯತು ಕಾರ್ಯಕ್ರಮಗಳ ನಂತರ ಈ ಬಾರಿಯ ದಸರಾಕ್ಕೆ ವಿದಾಯ ಹೇಳಲಾಗಿದೆ. ಈ ಬಾರಿಯ ದಸರೆಯ ಸೊಬಗನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಕೊಂಡಾಡಿದ್ದಾರೆ.
ಈ ಬಾರಿಯ ಮೈಸೂರು ದಸರಾ ಅದ್ಭುತವಾಗಿತ್ತು. ತಮ್ಮ ಸಂಸ್ಕೃತಿ ಹಾಗೂ ಪರಂಪರೆಯನ್ನು ಇನ್ನೂ ಉಳಿಸಿಕೊಂಡು ಬಂದಿರುವ ಮೈಸೂರು ಜನತೆಯನ್ನು ನಾನು ಶ್ಲಾಘಿಸುತ್ತೇನೆ. ಈ ಬಾರಿಯ ಯೋಗ ದಿನದಂದು ನಾನು ಮೈಸೂರಿಗೆ ಭೇಟಿ ನೀಡಿದ್ದೆ. ಮೈಸೂರಿನ ಜನರೊಂದಿಗೆ ಬೆರೆಯುವ ಅವಕಾಶ ನನಗೆ ಒದಗಿತ್ತು ಎಂದು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಕರ್ನಾಟಕದ ಹೊಸನಗರದವರಾದ ನಿವಾನೆ ಕಲಾನಾಥ್ ಭಟ್ ಎಂಬ ಆರ್ ಎಸ್ಎಸ್ ಸ್ವಯಂಸೇವಕರು ಈ ಬಾರಿಯ ಜಂಬೂಸವಾರಿಗೆ ಸಿಎಂ ಬೊಮ್ಮಾಯಿ ಪುಷ್ಪಾರ್ಚನೆ ಮಾಡುತ್ತಿರುವುದು ಹಾಗೂ ಜಂಬೂ ಸವಾರಿಯು ಜನಸಮೂಹದ ನಡುವೆ ಸಾಗುತ್ತಿರುವ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. ಫೋಟೋಗಳನ್ನು ನೋಡಿ ಮೆಚ್ಚಿಕೊಂಡಿರುವ ಪ್ರಧಾನಿ ಮೋದಿ, ಜಂಬೂ ಸವಾರಿಯನ್ನು ಮನಸಾರೆ ಶ್ಲಾಘಿಸಿದ್ದಾರೆ
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…