ಮೈಸೂರು

ಮೈಸೂರು ದಸರಾ ಸೊಬಗನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ

ಮೈಸೂರು: ಮೈಸೂರು ದಸರಾ ಬುಧವಾರವಷ್ಟೇ ತಾರ್ಕಿಕ ಅಂತ್ಯ ಕಂಡಿದೆ. ಬುಧವಾರ  ಸಂಜೆ ನಡೆದ ಜಂಬೂ ಸವಾರಿ, ಮತ್ತು  ಪಂಜಿನ ಕವಾಯತು ಕಾರ್ಯಕ್ರಮಗಳ ನಂತರ ಈ ಬಾರಿಯ ದಸರಾಕ್ಕೆ ವಿದಾಯ ಹೇಳಲಾಗಿದೆ. ಈ ಬಾರಿಯ ದಸರೆಯ ಸೊಬಗನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಕೊಂಡಾಡಿದ್ದಾರೆ.

ಈ ಬಾರಿಯ ಮೈಸೂರು ದಸರಾ ಅದ್ಭುತವಾಗಿತ್ತು. ತಮ್ಮ ಸಂಸ್ಕೃತಿ ಹಾಗೂ ಪರಂಪರೆಯನ್ನು ಇನ್ನೂ ಉಳಿಸಿಕೊಂಡು ಬಂದಿರುವ ಮೈಸೂರು ಜನತೆಯನ್ನು ನಾನು ಶ್ಲಾಘಿಸುತ್ತೇನೆ. ಈ ಬಾರಿಯ ಯೋಗ ದಿನದಂದು ನಾನು ಮೈಸೂರಿಗೆ ಭೇಟಿ ನೀಡಿದ್ದೆ. ಮೈಸೂರಿನ ಜನರೊಂದಿಗೆ ಬೆರೆಯುವ ಅವಕಾಶ ನನಗೆ ಒದಗಿತ್ತು ಎಂದು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

ಕರ್ನಾಟಕದ ಹೊಸನಗರದವರಾದ ನಿವಾನೆ ಕಲಾನಾಥ್ ಭಟ್ ಎಂಬ ಆರ್ ಎಸ್ಎಸ್ ಸ್ವಯಂಸೇವಕರು ಈ ಬಾರಿಯ ಜಂಬೂಸವಾರಿಗೆ ಸಿಎಂ ಬೊಮ್ಮಾಯಿ ಪುಷ್ಪಾರ್ಚನೆ ಮಾಡುತ್ತಿರುವುದು ಹಾಗೂ ಜಂಬೂ ಸವಾರಿಯು ಜನಸಮೂಹದ ನಡುವೆ ಸಾಗುತ್ತಿರುವ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. ಫೋಟೋಗಳನ್ನು ನೋಡಿ ಮೆಚ್ಚಿಕೊಂಡಿರುವ ಪ್ರಧಾನಿ ಮೋದಿ, ಜಂಬೂ ಸವಾರಿಯನ್ನು ಮನಸಾರೆ ಶ್ಲಾಘಿಸಿದ್ದಾರೆ

andolana

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

1 hour ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

8 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

8 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

8 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

8 hours ago