ಮೈಸೂರು: ಮೈಸೂರು ದಸರಾ ಬುಧವಾರವಷ್ಟೇ ತಾರ್ಕಿಕ ಅಂತ್ಯ ಕಂಡಿದೆ. ಬುಧವಾರ ಸಂಜೆ ನಡೆದ ಜಂಬೂ ಸವಾರಿ, ಮತ್ತು ಪಂಜಿನ ಕವಾಯತು ಕಾರ್ಯಕ್ರಮಗಳ ನಂತರ ಈ ಬಾರಿಯ ದಸರಾಕ್ಕೆ ವಿದಾಯ ಹೇಳಲಾಗಿದೆ. ಈ ಬಾರಿಯ ದಸರೆಯ ಸೊಬಗನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಕೊಂಡಾಡಿದ್ದಾರೆ.
ಈ ಬಾರಿಯ ಮೈಸೂರು ದಸರಾ ಅದ್ಭುತವಾಗಿತ್ತು. ತಮ್ಮ ಸಂಸ್ಕೃತಿ ಹಾಗೂ ಪರಂಪರೆಯನ್ನು ಇನ್ನೂ ಉಳಿಸಿಕೊಂಡು ಬಂದಿರುವ ಮೈಸೂರು ಜನತೆಯನ್ನು ನಾನು ಶ್ಲಾಘಿಸುತ್ತೇನೆ. ಈ ಬಾರಿಯ ಯೋಗ ದಿನದಂದು ನಾನು ಮೈಸೂರಿಗೆ ಭೇಟಿ ನೀಡಿದ್ದೆ. ಮೈಸೂರಿನ ಜನರೊಂದಿಗೆ ಬೆರೆಯುವ ಅವಕಾಶ ನನಗೆ ಒದಗಿತ್ತು ಎಂದು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಕರ್ನಾಟಕದ ಹೊಸನಗರದವರಾದ ನಿವಾನೆ ಕಲಾನಾಥ್ ಭಟ್ ಎಂಬ ಆರ್ ಎಸ್ಎಸ್ ಸ್ವಯಂಸೇವಕರು ಈ ಬಾರಿಯ ಜಂಬೂಸವಾರಿಗೆ ಸಿಎಂ ಬೊಮ್ಮಾಯಿ ಪುಷ್ಪಾರ್ಚನೆ ಮಾಡುತ್ತಿರುವುದು ಹಾಗೂ ಜಂಬೂ ಸವಾರಿಯು ಜನಸಮೂಹದ ನಡುವೆ ಸಾಗುತ್ತಿರುವ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. ಫೋಟೋಗಳನ್ನು ನೋಡಿ ಮೆಚ್ಚಿಕೊಂಡಿರುವ ಪ್ರಧಾನಿ ಮೋದಿ, ಜಂಬೂ ಸವಾರಿಯನ್ನು ಮನಸಾರೆ ಶ್ಲಾಘಿಸಿದ್ದಾರೆ
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…