ಮೈಸೂರು

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು : ಸಂಸದ ಯದುವೀರ್‌

ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು. ಮೈಸೂರಿನ ಹೆಗ್ಗುರುತು ಪಾರಂಪರಿಕತೆಯನ್ನು ಉಳಿಸಿಕೊಂಡು ಅಭಿವೃದ್ಧಿ ಕುರಿತಾಗಿ ಯೋಚಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಭಾನುವಾರ ‘ಗ್ರೇಟರ್ ಮೈಸೂರು ಅಥವಾ ಗ್ರೇಟರ್ ವಿಷನ್ ನಗರದ ನಿಜವಾದ ಅಗತ್ಯವೇನು?’ ಎಂಬ ವಿಷಯ ಕುರಿತ ಸಾರ್ವಜನಿಕ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮೈಸೂರು ನಗರದ ಐದು ಕಿಮೀ ನಂತರ ವ್ಯಾಪಿಸಿರುವ ಆಧುನಿಕ ಮೈಸೂರು ಅಭಿವೃದ್ಧಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ರಾಜ್ಯ ಮತ್ತು ಕೇಂದ್ರಸರ್ಕಾರ ಎರಡೂ ಸೇರಿ ಮಾಡಬೇಕಾದ ಕೆಲಸವಿದು. ನಾವು ಗ್ರೇಟರ್ ಮೈಸೂರು ವಿರೋಧಿಗಳಲ್ಲ. ಆದರೆ, ಅದು ನಗರದ ಅಭಿವೃದ್ಧಿಗೆ ಪೂರಕವಾದ ಚೌಕಟ್ಟಿನಲ್ಲಿ ಆಗಬೇಕು ಎಂದು ಸ್ಪಷ್ಟಪಡಿಸಿದರು.

ನಗರೀಕರಣ ಹಾಗೂ ಅಭಿವೃದ್ಧಿಯ ದಿಕ್ಕಿನಲ್ಲಿ ಆಗುವ ಸಕಾರಾತ್ಮಕ ಹಾಗೂ ನಕಾರಾತ್ಮಕ ಬೆಳವಣಿಗೆಯನ್ನು ನಿಲ್ಲಿಸಲಾಗದು. ಆದರೆ, ಅಭಿವೃದ್ಧಿಯು ಒಳ್ಳೆಯ ಚೌಕಟ್ಟಿನಲ್ಲಿ ನಡೆಯಬೇಕು. ಆಗ ನಗರವು ನೈಸರ್ಗಿಕವಾಗಿ ಬೆಳೆಯುತ್ತದೆ. ಜನರಿಗೆ ಗುಣಮಟ್ಟದ ಜೀವನ ಸಿಗುತ್ತದೆ ಎಂದು ಪ್ರತಿಪಾದಿಸಿದರು.

ಇದನ್ನೂ ಓದಿ:-ಬಾಲವಿಕಾಸ ಅಕಾಡೆಮಿಯ ಬಾಲಗೌರವ ಪ್ರಶಸ್ತಿ : ಮೈಸೂರಿನ ತಬಲಾ ಬಾಲ ಪ್ರತಿಭೆ ಪಂಚಮಿ ಬಿದನೂರು ಸೇರಿದಂತೆ ಅನೇಕರಿಗೆ ಪ್ರಶಸ್ತಿ

ಹುಣಸೂರು ಶಾಸಕ ಜಿ.ಡಿ.ಹರೀಶ್‌ಗೌಡ ಮಾತನಾಡಿ, ‘ಗ್ರೇಟರ್ ಮೈಸೂರು ಎಂದರೆ ಆಡಳಿತದ ಪರಿಮಿತಿಯನ್ನು ವಿಸ್ತರಿಸುವುದಷ್ಟೇ ಆಗಿದೆ. ಏನೇನಿರಬೇಕು ಎಂಬುದನ್ನು ವರದಿಯಾಗಿ ಸಿದ್ಧಪಡಿಸಿ ಸರ್ಕಾರಕ್ಕೆ ತಲುಪಿಸಬೇಕು’ ಎಂದರು. ಮೈಸೂರು ಮಹಾರಾಜರಿಗೆ ಇದ್ದ ದೂರದೃಷ್ಟಿತ್ವ ಈಗ ಆಡಳಿತ ನಡೆಸುತ್ತಿರುವವರಿಗೂ ಇರಬೇಕಾಗಿದೆ. ಪಾರಂಪರಿಕ ಹಾಗೂ ಸಾಂಸ್ಕೃತಿಕ ನಗರ ಎಂಬುದನ್ನೂ ಉಳಿಸಿಕೊಂಡು ಸಮಗ್ರ ಅಭಿವೃದ್ಧಿ ಮಾಡಬೇಕಾಗುತ್ತದೆ. ಮೈಸೂರಿನವರೇ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆಲ್ಲವೂ ಗೊತ್ತಿದೆ. ನಗರಕ್ಕೂ ಹಾನಿಯಾಗದಂತೆ ಹಾಗೂ ಸೇರ್ಪಡೆ ಮಾಡಿಕೊಳ್ಳಲಾಗುವ ಪ್ರದೇಶಗಳು ಒಳಗೊಂಡಂತೆ ಸಮಗ್ರವಾದ ಅಭಿವೃದ್ಧಿ ಆಗಬೇಕು’ ಎಂದು ತಿಳಿಸಿದರು.

ನಿವೃತ್ತ ಐಎಎಸ್ ಅಧಿಕಾರಿ ರವೀಂದ್ರ, ‘ಮೈಸೂರು ವಿಶೇಷವಾದ ನಗರ. ಇದು ಮಾದರಿ ನಗರವಾಗಿ ಉಳಿಯಬೇಕು. ಯೋಜನೆ ಪ್ರಕಾರ ಬೆಳವಣಿಗೆ ಇರಬೇಕು’ ಎಂದರು.

ಆಯೋಜಕ ಡಾ.ಸುಶ್ರುತ್ ಗೌಡ ಮಾತನಾಡಿದರು. ಚಲನಚಿತ್ರ ಕಲಾವಿದ ಪ್ರಕಾಶ್ ಬೆಳವಾಡಿ, ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್, ಅರ್ಥಶಾಸ್ತ್ರಜ್ಞ ಕೆ.ಸಿ.ಬಸವರಾಜ್, ಪತ್ರಕರ್ತ ಶ್ಯಾಮಸುಂದರ್ ವಟ್ಟಂ, ಉದ್ಯಮಿ ನಾಗರಾಜ್ ಗರ್ಗೇಶ್ವರಿ, ಡಾ.ರಮೇಶ್, ಕೆ.ವಿ.ಚೇತನ್, ಆಂಥೋನಿ ಪೌಲ್‌ರಾಜ್ ಪಾಲ್ಗೊಂಡಿದ್ದರು. ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸರ್ಕಾರಕ್ಕೆ ಸಲ್ಲಿಸುವ ನಿರ್ಣಯ ಕೈಗೊಳ್ಳಲಾಯಿತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

47 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

50 mins ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

52 mins ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

54 mins ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

57 mins ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

1 hour ago