ಮೈಸೂರು

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು : ಸಂಸದ ಯದುವೀರ್‌

ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು. ಮೈಸೂರಿನ ಹೆಗ್ಗುರುತು ಪಾರಂಪರಿಕತೆಯನ್ನು ಉಳಿಸಿಕೊಂಡು ಅಭಿವೃದ್ಧಿ ಕುರಿತಾಗಿ ಯೋಚಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಭಾನುವಾರ ‘ಗ್ರೇಟರ್ ಮೈಸೂರು ಅಥವಾ ಗ್ರೇಟರ್ ವಿಷನ್ ನಗರದ ನಿಜವಾದ ಅಗತ್ಯವೇನು?’ ಎಂಬ ವಿಷಯ ಕುರಿತ ಸಾರ್ವಜನಿಕ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮೈಸೂರು ನಗರದ ಐದು ಕಿಮೀ ನಂತರ ವ್ಯಾಪಿಸಿರುವ ಆಧುನಿಕ ಮೈಸೂರು ಅಭಿವೃದ್ಧಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ರಾಜ್ಯ ಮತ್ತು ಕೇಂದ್ರಸರ್ಕಾರ ಎರಡೂ ಸೇರಿ ಮಾಡಬೇಕಾದ ಕೆಲಸವಿದು. ನಾವು ಗ್ರೇಟರ್ ಮೈಸೂರು ವಿರೋಧಿಗಳಲ್ಲ. ಆದರೆ, ಅದು ನಗರದ ಅಭಿವೃದ್ಧಿಗೆ ಪೂರಕವಾದ ಚೌಕಟ್ಟಿನಲ್ಲಿ ಆಗಬೇಕು ಎಂದು ಸ್ಪಷ್ಟಪಡಿಸಿದರು.

ನಗರೀಕರಣ ಹಾಗೂ ಅಭಿವೃದ್ಧಿಯ ದಿಕ್ಕಿನಲ್ಲಿ ಆಗುವ ಸಕಾರಾತ್ಮಕ ಹಾಗೂ ನಕಾರಾತ್ಮಕ ಬೆಳವಣಿಗೆಯನ್ನು ನಿಲ್ಲಿಸಲಾಗದು. ಆದರೆ, ಅಭಿವೃದ್ಧಿಯು ಒಳ್ಳೆಯ ಚೌಕಟ್ಟಿನಲ್ಲಿ ನಡೆಯಬೇಕು. ಆಗ ನಗರವು ನೈಸರ್ಗಿಕವಾಗಿ ಬೆಳೆಯುತ್ತದೆ. ಜನರಿಗೆ ಗುಣಮಟ್ಟದ ಜೀವನ ಸಿಗುತ್ತದೆ ಎಂದು ಪ್ರತಿಪಾದಿಸಿದರು.

ಇದನ್ನೂ ಓದಿ:-ಬಾಲವಿಕಾಸ ಅಕಾಡೆಮಿಯ ಬಾಲಗೌರವ ಪ್ರಶಸ್ತಿ : ಮೈಸೂರಿನ ತಬಲಾ ಬಾಲ ಪ್ರತಿಭೆ ಪಂಚಮಿ ಬಿದನೂರು ಸೇರಿದಂತೆ ಅನೇಕರಿಗೆ ಪ್ರಶಸ್ತಿ

ಹುಣಸೂರು ಶಾಸಕ ಜಿ.ಡಿ.ಹರೀಶ್‌ಗೌಡ ಮಾತನಾಡಿ, ‘ಗ್ರೇಟರ್ ಮೈಸೂರು ಎಂದರೆ ಆಡಳಿತದ ಪರಿಮಿತಿಯನ್ನು ವಿಸ್ತರಿಸುವುದಷ್ಟೇ ಆಗಿದೆ. ಏನೇನಿರಬೇಕು ಎಂಬುದನ್ನು ವರದಿಯಾಗಿ ಸಿದ್ಧಪಡಿಸಿ ಸರ್ಕಾರಕ್ಕೆ ತಲುಪಿಸಬೇಕು’ ಎಂದರು. ಮೈಸೂರು ಮಹಾರಾಜರಿಗೆ ಇದ್ದ ದೂರದೃಷ್ಟಿತ್ವ ಈಗ ಆಡಳಿತ ನಡೆಸುತ್ತಿರುವವರಿಗೂ ಇರಬೇಕಾಗಿದೆ. ಪಾರಂಪರಿಕ ಹಾಗೂ ಸಾಂಸ್ಕೃತಿಕ ನಗರ ಎಂಬುದನ್ನೂ ಉಳಿಸಿಕೊಂಡು ಸಮಗ್ರ ಅಭಿವೃದ್ಧಿ ಮಾಡಬೇಕಾಗುತ್ತದೆ. ಮೈಸೂರಿನವರೇ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆಲ್ಲವೂ ಗೊತ್ತಿದೆ. ನಗರಕ್ಕೂ ಹಾನಿಯಾಗದಂತೆ ಹಾಗೂ ಸೇರ್ಪಡೆ ಮಾಡಿಕೊಳ್ಳಲಾಗುವ ಪ್ರದೇಶಗಳು ಒಳಗೊಂಡಂತೆ ಸಮಗ್ರವಾದ ಅಭಿವೃದ್ಧಿ ಆಗಬೇಕು’ ಎಂದು ತಿಳಿಸಿದರು.

ನಿವೃತ್ತ ಐಎಎಸ್ ಅಧಿಕಾರಿ ರವೀಂದ್ರ, ‘ಮೈಸೂರು ವಿಶೇಷವಾದ ನಗರ. ಇದು ಮಾದರಿ ನಗರವಾಗಿ ಉಳಿಯಬೇಕು. ಯೋಜನೆ ಪ್ರಕಾರ ಬೆಳವಣಿಗೆ ಇರಬೇಕು’ ಎಂದರು.

ಆಯೋಜಕ ಡಾ.ಸುಶ್ರುತ್ ಗೌಡ ಮಾತನಾಡಿದರು. ಚಲನಚಿತ್ರ ಕಲಾವಿದ ಪ್ರಕಾಶ್ ಬೆಳವಾಡಿ, ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್, ಅರ್ಥಶಾಸ್ತ್ರಜ್ಞ ಕೆ.ಸಿ.ಬಸವರಾಜ್, ಪತ್ರಕರ್ತ ಶ್ಯಾಮಸುಂದರ್ ವಟ್ಟಂ, ಉದ್ಯಮಿ ನಾಗರಾಜ್ ಗರ್ಗೇಶ್ವರಿ, ಡಾ.ರಮೇಶ್, ಕೆ.ವಿ.ಚೇತನ್, ಆಂಥೋನಿ ಪೌಲ್‌ರಾಜ್ ಪಾಲ್ಗೊಂಡಿದ್ದರು. ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸರ್ಕಾರಕ್ಕೆ ಸಲ್ಲಿಸುವ ನಿರ್ಣಯ ಕೈಗೊಳ್ಳಲಾಯಿತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಾಲ್ಮೀಕಿ ಭವನ ಉದ್ಘಾಟಿಸಿ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…

2 hours ago

ಓದುಗರ ಪತ್ರ: ಬಾಳೆಕೆರೆ ಗ್ರಾಮದಲ್ಲಿ ರಸ್ತೆ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…

2 hours ago

ಓದುಗರ ಪತ್ರ: ಸಾರಿಗೆ ಬಸ್ಸುಗಳು ಸಕಾಲಕ್ಕೆ ನಿಗದಿತ ಸ್ಥಳ ತಲುಪಲಿ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…

2 hours ago

ಓದುಗರ ಪತ್ರ: ಮಕ್ಕಳಲ್ಲಿ ಸ್ವಯಂ ಪ್ರೇರಿತ ಓದು ಅವಶ್ಯ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…

2 hours ago

ನಿಯಮ ಮೀರಿ ನಿರ್ಮಿಸಿರುವ ಕಟ್ಟಡ ತೆರವಿಗೆ ಸೂಚನೆ

ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…

2 hours ago

ಸುವರ್ಣಾವತಿಯಲ್ಲಿ ಇಂದಿನಿಂದ ಜಲಸಾಹಸ ಕ್ರೀಡೋತ್ಸವ

ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…

2 hours ago