ಮೈಸೂರು

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು : ಸಂಸದ ಯದುವೀರ್‌

ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು. ಮೈಸೂರಿನ ಹೆಗ್ಗುರುತು ಪಾರಂಪರಿಕತೆಯನ್ನು ಉಳಿಸಿಕೊಂಡು ಅಭಿವೃದ್ಧಿ ಕುರಿತಾಗಿ ಯೋಚಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಭಾನುವಾರ ‘ಗ್ರೇಟರ್ ಮೈಸೂರು ಅಥವಾ ಗ್ರೇಟರ್ ವಿಷನ್ ನಗರದ ನಿಜವಾದ ಅಗತ್ಯವೇನು?’ ಎಂಬ ವಿಷಯ ಕುರಿತ ಸಾರ್ವಜನಿಕ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮೈಸೂರು ನಗರದ ಐದು ಕಿಮೀ ನಂತರ ವ್ಯಾಪಿಸಿರುವ ಆಧುನಿಕ ಮೈಸೂರು ಅಭಿವೃದ್ಧಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ರಾಜ್ಯ ಮತ್ತು ಕೇಂದ್ರಸರ್ಕಾರ ಎರಡೂ ಸೇರಿ ಮಾಡಬೇಕಾದ ಕೆಲಸವಿದು. ನಾವು ಗ್ರೇಟರ್ ಮೈಸೂರು ವಿರೋಧಿಗಳಲ್ಲ. ಆದರೆ, ಅದು ನಗರದ ಅಭಿವೃದ್ಧಿಗೆ ಪೂರಕವಾದ ಚೌಕಟ್ಟಿನಲ್ಲಿ ಆಗಬೇಕು ಎಂದು ಸ್ಪಷ್ಟಪಡಿಸಿದರು.

ನಗರೀಕರಣ ಹಾಗೂ ಅಭಿವೃದ್ಧಿಯ ದಿಕ್ಕಿನಲ್ಲಿ ಆಗುವ ಸಕಾರಾತ್ಮಕ ಹಾಗೂ ನಕಾರಾತ್ಮಕ ಬೆಳವಣಿಗೆಯನ್ನು ನಿಲ್ಲಿಸಲಾಗದು. ಆದರೆ, ಅಭಿವೃದ್ಧಿಯು ಒಳ್ಳೆಯ ಚೌಕಟ್ಟಿನಲ್ಲಿ ನಡೆಯಬೇಕು. ಆಗ ನಗರವು ನೈಸರ್ಗಿಕವಾಗಿ ಬೆಳೆಯುತ್ತದೆ. ಜನರಿಗೆ ಗುಣಮಟ್ಟದ ಜೀವನ ಸಿಗುತ್ತದೆ ಎಂದು ಪ್ರತಿಪಾದಿಸಿದರು.

ಇದನ್ನೂ ಓದಿ:-ಬಾಲವಿಕಾಸ ಅಕಾಡೆಮಿಯ ಬಾಲಗೌರವ ಪ್ರಶಸ್ತಿ : ಮೈಸೂರಿನ ತಬಲಾ ಬಾಲ ಪ್ರತಿಭೆ ಪಂಚಮಿ ಬಿದನೂರು ಸೇರಿದಂತೆ ಅನೇಕರಿಗೆ ಪ್ರಶಸ್ತಿ

ಹುಣಸೂರು ಶಾಸಕ ಜಿ.ಡಿ.ಹರೀಶ್‌ಗೌಡ ಮಾತನಾಡಿ, ‘ಗ್ರೇಟರ್ ಮೈಸೂರು ಎಂದರೆ ಆಡಳಿತದ ಪರಿಮಿತಿಯನ್ನು ವಿಸ್ತರಿಸುವುದಷ್ಟೇ ಆಗಿದೆ. ಏನೇನಿರಬೇಕು ಎಂಬುದನ್ನು ವರದಿಯಾಗಿ ಸಿದ್ಧಪಡಿಸಿ ಸರ್ಕಾರಕ್ಕೆ ತಲುಪಿಸಬೇಕು’ ಎಂದರು. ಮೈಸೂರು ಮಹಾರಾಜರಿಗೆ ಇದ್ದ ದೂರದೃಷ್ಟಿತ್ವ ಈಗ ಆಡಳಿತ ನಡೆಸುತ್ತಿರುವವರಿಗೂ ಇರಬೇಕಾಗಿದೆ. ಪಾರಂಪರಿಕ ಹಾಗೂ ಸಾಂಸ್ಕೃತಿಕ ನಗರ ಎಂಬುದನ್ನೂ ಉಳಿಸಿಕೊಂಡು ಸಮಗ್ರ ಅಭಿವೃದ್ಧಿ ಮಾಡಬೇಕಾಗುತ್ತದೆ. ಮೈಸೂರಿನವರೇ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆಲ್ಲವೂ ಗೊತ್ತಿದೆ. ನಗರಕ್ಕೂ ಹಾನಿಯಾಗದಂತೆ ಹಾಗೂ ಸೇರ್ಪಡೆ ಮಾಡಿಕೊಳ್ಳಲಾಗುವ ಪ್ರದೇಶಗಳು ಒಳಗೊಂಡಂತೆ ಸಮಗ್ರವಾದ ಅಭಿವೃದ್ಧಿ ಆಗಬೇಕು’ ಎಂದು ತಿಳಿಸಿದರು.

ನಿವೃತ್ತ ಐಎಎಸ್ ಅಧಿಕಾರಿ ರವೀಂದ್ರ, ‘ಮೈಸೂರು ವಿಶೇಷವಾದ ನಗರ. ಇದು ಮಾದರಿ ನಗರವಾಗಿ ಉಳಿಯಬೇಕು. ಯೋಜನೆ ಪ್ರಕಾರ ಬೆಳವಣಿಗೆ ಇರಬೇಕು’ ಎಂದರು.

ಆಯೋಜಕ ಡಾ.ಸುಶ್ರುತ್ ಗೌಡ ಮಾತನಾಡಿದರು. ಚಲನಚಿತ್ರ ಕಲಾವಿದ ಪ್ರಕಾಶ್ ಬೆಳವಾಡಿ, ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್, ಅರ್ಥಶಾಸ್ತ್ರಜ್ಞ ಕೆ.ಸಿ.ಬಸವರಾಜ್, ಪತ್ರಕರ್ತ ಶ್ಯಾಮಸುಂದರ್ ವಟ್ಟಂ, ಉದ್ಯಮಿ ನಾಗರಾಜ್ ಗರ್ಗೇಶ್ವರಿ, ಡಾ.ರಮೇಶ್, ಕೆ.ವಿ.ಚೇತನ್, ಆಂಥೋನಿ ಪೌಲ್‌ರಾಜ್ ಪಾಲ್ಗೊಂಡಿದ್ದರು. ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸರ್ಕಾರಕ್ಕೆ ಸಲ್ಲಿಸುವ ನಿರ್ಣಯ ಕೈಗೊಳ್ಳಲಾಯಿತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

11 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

11 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

11 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

11 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

11 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

11 hours ago