ಮೈಸೂರು

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು : ಸಂಸದ ಯದುವೀರ್‌

ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು. ಮೈಸೂರಿನ ಹೆಗ್ಗುರುತು ಪಾರಂಪರಿಕತೆಯನ್ನು ಉಳಿಸಿಕೊಂಡು ಅಭಿವೃದ್ಧಿ ಕುರಿತಾಗಿ ಯೋಚಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಭಾನುವಾರ ‘ಗ್ರೇಟರ್ ಮೈಸೂರು ಅಥವಾ ಗ್ರೇಟರ್ ವಿಷನ್ ನಗರದ ನಿಜವಾದ ಅಗತ್ಯವೇನು?’ ಎಂಬ ವಿಷಯ ಕುರಿತ ಸಾರ್ವಜನಿಕ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮೈಸೂರು ನಗರದ ಐದು ಕಿಮೀ ನಂತರ ವ್ಯಾಪಿಸಿರುವ ಆಧುನಿಕ ಮೈಸೂರು ಅಭಿವೃದ್ಧಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು. ರಾಜ್ಯ ಮತ್ತು ಕೇಂದ್ರಸರ್ಕಾರ ಎರಡೂ ಸೇರಿ ಮಾಡಬೇಕಾದ ಕೆಲಸವಿದು. ನಾವು ಗ್ರೇಟರ್ ಮೈಸೂರು ವಿರೋಧಿಗಳಲ್ಲ. ಆದರೆ, ಅದು ನಗರದ ಅಭಿವೃದ್ಧಿಗೆ ಪೂರಕವಾದ ಚೌಕಟ್ಟಿನಲ್ಲಿ ಆಗಬೇಕು ಎಂದು ಸ್ಪಷ್ಟಪಡಿಸಿದರು.

ನಗರೀಕರಣ ಹಾಗೂ ಅಭಿವೃದ್ಧಿಯ ದಿಕ್ಕಿನಲ್ಲಿ ಆಗುವ ಸಕಾರಾತ್ಮಕ ಹಾಗೂ ನಕಾರಾತ್ಮಕ ಬೆಳವಣಿಗೆಯನ್ನು ನಿಲ್ಲಿಸಲಾಗದು. ಆದರೆ, ಅಭಿವೃದ್ಧಿಯು ಒಳ್ಳೆಯ ಚೌಕಟ್ಟಿನಲ್ಲಿ ನಡೆಯಬೇಕು. ಆಗ ನಗರವು ನೈಸರ್ಗಿಕವಾಗಿ ಬೆಳೆಯುತ್ತದೆ. ಜನರಿಗೆ ಗುಣಮಟ್ಟದ ಜೀವನ ಸಿಗುತ್ತದೆ ಎಂದು ಪ್ರತಿಪಾದಿಸಿದರು.

ಇದನ್ನೂ ಓದಿ:-ಬಾಲವಿಕಾಸ ಅಕಾಡೆಮಿಯ ಬಾಲಗೌರವ ಪ್ರಶಸ್ತಿ : ಮೈಸೂರಿನ ತಬಲಾ ಬಾಲ ಪ್ರತಿಭೆ ಪಂಚಮಿ ಬಿದನೂರು ಸೇರಿದಂತೆ ಅನೇಕರಿಗೆ ಪ್ರಶಸ್ತಿ

ಹುಣಸೂರು ಶಾಸಕ ಜಿ.ಡಿ.ಹರೀಶ್‌ಗೌಡ ಮಾತನಾಡಿ, ‘ಗ್ರೇಟರ್ ಮೈಸೂರು ಎಂದರೆ ಆಡಳಿತದ ಪರಿಮಿತಿಯನ್ನು ವಿಸ್ತರಿಸುವುದಷ್ಟೇ ಆಗಿದೆ. ಏನೇನಿರಬೇಕು ಎಂಬುದನ್ನು ವರದಿಯಾಗಿ ಸಿದ್ಧಪಡಿಸಿ ಸರ್ಕಾರಕ್ಕೆ ತಲುಪಿಸಬೇಕು’ ಎಂದರು. ಮೈಸೂರು ಮಹಾರಾಜರಿಗೆ ಇದ್ದ ದೂರದೃಷ್ಟಿತ್ವ ಈಗ ಆಡಳಿತ ನಡೆಸುತ್ತಿರುವವರಿಗೂ ಇರಬೇಕಾಗಿದೆ. ಪಾರಂಪರಿಕ ಹಾಗೂ ಸಾಂಸ್ಕೃತಿಕ ನಗರ ಎಂಬುದನ್ನೂ ಉಳಿಸಿಕೊಂಡು ಸಮಗ್ರ ಅಭಿವೃದ್ಧಿ ಮಾಡಬೇಕಾಗುತ್ತದೆ. ಮೈಸೂರಿನವರೇ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆಲ್ಲವೂ ಗೊತ್ತಿದೆ. ನಗರಕ್ಕೂ ಹಾನಿಯಾಗದಂತೆ ಹಾಗೂ ಸೇರ್ಪಡೆ ಮಾಡಿಕೊಳ್ಳಲಾಗುವ ಪ್ರದೇಶಗಳು ಒಳಗೊಂಡಂತೆ ಸಮಗ್ರವಾದ ಅಭಿವೃದ್ಧಿ ಆಗಬೇಕು’ ಎಂದು ತಿಳಿಸಿದರು.

ನಿವೃತ್ತ ಐಎಎಸ್ ಅಧಿಕಾರಿ ರವೀಂದ್ರ, ‘ಮೈಸೂರು ವಿಶೇಷವಾದ ನಗರ. ಇದು ಮಾದರಿ ನಗರವಾಗಿ ಉಳಿಯಬೇಕು. ಯೋಜನೆ ಪ್ರಕಾರ ಬೆಳವಣಿಗೆ ಇರಬೇಕು’ ಎಂದರು.

ಆಯೋಜಕ ಡಾ.ಸುಶ್ರುತ್ ಗೌಡ ಮಾತನಾಡಿದರು. ಚಲನಚಿತ್ರ ಕಲಾವಿದ ಪ್ರಕಾಶ್ ಬೆಳವಾಡಿ, ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್, ಅರ್ಥಶಾಸ್ತ್ರಜ್ಞ ಕೆ.ಸಿ.ಬಸವರಾಜ್, ಪತ್ರಕರ್ತ ಶ್ಯಾಮಸುಂದರ್ ವಟ್ಟಂ, ಉದ್ಯಮಿ ನಾಗರಾಜ್ ಗರ್ಗೇಶ್ವರಿ, ಡಾ.ರಮೇಶ್, ಕೆ.ವಿ.ಚೇತನ್, ಆಂಥೋನಿ ಪೌಲ್‌ರಾಜ್ ಪಾಲ್ಗೊಂಡಿದ್ದರು. ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸರ್ಕಾರಕ್ಕೆ ಸಲ್ಲಿಸುವ ನಿರ್ಣಯ ಕೈಗೊಳ್ಳಲಾಯಿತು.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

5 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

5 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

6 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

11 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

11 hours ago