ಮೈಸೂರು

ದೇಶದ ಮೊದಲ ಇಎಸ್‌ಡಿಎಂ ಟೆಕ್ ಯಾತ್ರೆಗೆ ಮೈಸೂರಿನಲ್ಲಿ ಚಾಲನೆ: ಪ್ರಿಯಾಂಕ್‌ ಖರ್ಗೆ

ಮೈಸೂರು: ಕರ್ನಾಟಕ ಇಎಸ್‌ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಂಸ್ ಡಿಸೈನ್ ಮತ್ತು ತಯಾರಿಕೆ) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿಸುವ ಗುರಿ ಹೊಂದಲಾಗಿದ್ದು, ದೇಶದ ಮೊದಲ ಟೆಕ್‌ ಜಾತ್ರೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗುವುದು ಎಂದು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು (ಆಗಸ್ಟ್ 6) ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮತ್ತು ಇಂಡಿಯಾ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಅಸೋಸಿಯೇಷನ್ (ಐಇಎಸ್ಎ) ಸಹಯೋಗದಲ್ಲಿ 4ನೆ ಆವೃತ್ತಿ ಅನಾವರಣಗೊಳಿಸುತ್ತಿರುವ ಸಂದರ್ಭದಲ್ಲಿ ನೀಡಿರುವ ಸಂದೇಶದಲ್ಲಿ ಸಚಿವರು ಮೈಸೂರನ್ನು ಉದ್ಯೋಗಶೀಲ ನಗರವನ್ನಾಗಿ ವರ್ಧಿಸಲು ಮಾಹಿತಿ ತಂತ್ರಜ್ಞಾನ ಇಲಾಖೆ ಯೋಜಿಸಿದೆ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ ಮತ್ತು ಘಟಕ ಗೋದಾಮುಗಳು ಸೇರಿದಂತೆ 20ಕ್ಕೂ ಹೆಚ್ಚು ಇಎಸ್‌ಡಿಎಂ ಕಂಪನಿಗಳು ಕ್ಲಸ್ಟರ್‌ಗೆ ಸೇರ್ಪಡೆಗೊಳ್ಳುತ್ತಿದ್ದು ಸುಮಾರು 600ಕೋಟಿ ರೂ.ಗಳ ಹೊಸ ಹೂಡಿಕೆ ಹರಿದು ಬಂದಿದೆ. ವಿಶ್ವ ಮಟ್ಟದಲ್ಲಿ ಹೂಡಿಕೆಗಳ ಹರಿವು ಹೆಚ್ಚಿಸುವುದು, ಹೊಸ ಉದ್ಯಮಗಳನ್ನು ಆರಂಭಿಸಲು ಉತ್ತೇಜನ ನೀಡುವುದು ಮತ್ತು ರಾಜ್ಯದಲ್ಲಿ ಪ್ರಾರಂಭಿಸಿರುವ ಉದ್ಯಮಗಳನ್ನು ಉಳಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿಸುವುದು ಕರ್ನಾಟಕ ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.

ಹೆಚ್ಚುವರಿಯಾಗಿ, 150 ಎಕರೆಗಳಷ್ಟು ಪಿಸಿಬಿ ಕ್ಲಸ್ಟರ್ ಅನ್ನು ಸ್ಥಾಪಿಸುವ ಉದ್ದೇಶದಿಂದ ಪ್ರಸ್ತುತ ಪರೀಕ್ಷಾ ಸೌಲಭ್ಯವನ್ನು ವಿಸ್ತರಿಸಲು, ಮಲ್ಟಿಟೆನೆನ್ಸಿ ಕ್ಲೀನ್ ರೂಮ್ ಅನ್ನು ಸೇರಿಸಲು ಉದ್ದೇಶಿಸಿದ್ದೇವೆ. ಇದು 5000 ಹೊಸ ಉದ್ಯೋಗಗಳಿಗೆ ಚಾಲನೆ ನೀಡಲಿದೆ, ಅಷ್ಟೇ ಅಲ್ಲದೆ, ಮಹಿಳಾ ಉದ್ಯೋಗಿಗಳನ್ನು ಸಬಲೀಕರಣಗೊಳಿಸಲು ಸಹಕಾರವಾಗಲಿದೆ, ಈ ಎಲ್ಲಾ ಬೆಳವಣಿಗೆಯಿಂದ ಜಾಗತಿಕ ಕಂಪನಿಗಳು ಮೈಸೂರಿನಲ್ಲಿ ಬೆಳೆಯಲು ಇದು ಉತ್ತಮ ಸಮಯವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಏಕ್‌ರೂಪ್ ಕೌರ್ ಮಾತನಾಡಿ, ಜಾಗತಿಕ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ಜೊತೆ ಕೈ ಜೋಡಿಸಿರುವುದು ಮೈಸೂರು-ಬೆಂಗಳೂರನ್ನು ಸೆಮಿಕಾನ್ ಹಬ್ ಆಗಿ ಮಾಡುವಲ್ಲಿ ಬಹುಮುಖ್ಯ ಪಾತ್ರವಹಿಸಲಿದೆ. ಮೈಸೂರು ಸೆಮಿಕಾನ್ ತಯಾರಿಕೆ ಕ್ಷೇತ್ರದಲ್ಲಿ ಹಾಗೂ ಬೆಂಗಳೂರು ಸೆಮಿಕಾನ್ ವಿನ್ಯಾಸ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಬೆಳೆಯಲಿವೆ ಎಂದು ತಿಳಿಸಿದರು.

ಅಂತಾರಾಷ್ಟ್ರೀಯ, ದೇಶಿಯ ಹಾಗೂ ಮೈಸೂರಿನ ಹಲವಾರು ಕಂಪನಿಗಳ ಪ್ರತಿನಿಧಿಗಳು, ರುಚಿ ಬಿಂದಾಲ್, ಐಎಎಸ್, ಪರಿಣಿಕ ಪವನ್ ರಾಮ್ ಕೆಎಎಸ್, ಕೆಡೆಮ್ ಸಂಸ್ಥೆಯ ಸುಧೀರ್, ಗೌರವ್, ಸಂಜಯ್ ಗುಪ್ತಾ, ಚೇತನ್ ಹಾಗೂ ಮೊದಲಾದವರು ಹಾಜರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

3 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

3 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

3 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

3 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

3 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

3 hours ago