ಮೈಸೂರು : ನಗರದ ಕ್ರಾಫರ್ಡ್ ಹಾಲ್ ನಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಎಸ್.ನಾಗಾಭರಣ, ಕೇಂದ್ರೀಯ ಭಾಷಾ ಸಂಸ್ಥಾನದ ಕೆಲಸಕ್ಕೆ ನಾನು ಮೈಸೂರಿಗೆ ಬಂದಾಗ ಜಿ.ಹೇಮಂತ್ ಕುಮಾರ್ ಪರಿಚಯ ಆಯಿತು. ನಾನು ಮೂಲತ ತಲಕಾಡಿನವನು. ಮೈಸೂರಿಗೆ ಅದರದೇ ವಿಶಿಷ್ಟತೆ ಇದೆ. ಇದು ನನ್ನ ಊರು. ಇದನ್ನು ಉಳಿಸಿಕೊಳ್ಳಬೇಕು ಎಂಬುದರ ಬಗ್ಗೆ ಹೇಮಂತ್ ಕುಮಾರ್ ಸದಾ ಯೋಚಿಸುತ್ತಾರೆ. ಮೈಸೂರಿನ ಬಗ್ಗೆ ಅವರಿಗೆ ಅಪಾರ ಪ್ರೀತಿ ಅಕ್ಕರೆ. ಮೈಸೂರು ವಿವಿಗೆ ಸಮರ್ಥ ಆಡಳಿತ ಮತ್ತು ಶೈಕ್ಷಣಿಕ ವ್ಯವಸ್ಥೆ ಕಟ್ಟಿಕೊಟ್ಟಿದ್ದಾರೆ. ತಮ್ಮ ನಗುಮೊಗ, ಸ್ನೇಹ ಹೃದಯ ಹಾಗೂ ಶಿಸ್ತಿನಿಂದಲೇ ಎಲ್ಲಾ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ ಎಂದು ನುಡಿದರು.
ಯಾರಾದರೂ ಸಚಿವರ ಜೊತೆ ಓಡಾಡುತ್ತಿದ್ದರೆ ಅದು ವೈಯಕ್ತಿಕ ಕೆಲಸಕ್ಕೆ ಆಗಿರುವುದಿಲ್ಲ. ವಿವಿಗೆ ಬೇಕಾದ ಕೆಲಸ ಮಾಡುವ ಸಲುವಾಗಿ ಸದಾ ಬೆಂಗಳೂರಿಗೆ ಹೇಮಂತ್ ಕುಮಾರ್ ಓಡಾಡುತ್ತಿದ್ದರು. ವಿವಿಗೆ ಬೇಕಾದ ಎಲ್ಲಾ ಸಂಗತಿಗಳ ಬಗ್ಗೆ ಸದಾ ಯೋಚಿಸುತ್ತಿದ್ದರು. ಇಷ್ಟೆಲ್ಲಾ ಕೆಲಸ ಮಾಡಿದರೂ ಹೇಮಂತ್ ಕುಮಾರ್ ಅವರಿಗೆ ಯಾವುದೇ ಹಮ್ಮು ಬಿಮ್ಮುಗಳಿಲ್ಲ.ಅವರ ಕೆಲಸ ಹೀಗೆ ನಿರಂತರವಾಗಿರಲಿ ಎಂದು ಆಶಿಸಿದರು.
ಕೊರೊನಾ ಸಮಯದಲ್ಲಿ ಅವರು ಸಾಕಷ್ಟು ಕೆಲಸ ಮಾಡಿದರು. ಮೈಸೂರು ವಿವಿಗೆ ತನ್ನದೇ ಆದ ಪರಂಪರೆ ಇತ್ತು. ಅದಕ್ಕೆ ಎಲ್ಲೂ ಧಕ್ಕೆ ಬಾರದಂತೆ ಕೆಲಸ ನಿರ್ವಹಿಸಿದ್ದಾರೆ.ನಿಜಕ್ಕೂ ಹೇಮಂತ ಕುಮಾರ್ ಅವರು ಇಡೀ ವಿವಿಯನ್ನು ಕುಟುಂಬದಂತೆ ನೋಡಿಕೊಂಡರು.ಮಾತೃ ಹೃದಯಿಯಂತೆ ಎಲ್ಲರನ್ನೂ ಸಲಹಿದರು. ಜೊತೆಗೆ ಅವರ ಜೀವನ ಬೆಂಕಿಯಲ್ಲಿ ಅರಳಿದ ಹೂವಿನಂತೆ.ನಮ್ಮಿಬ್ಬರಿಗೂ ಏನೋ ಒಂದು ಅವಿನಾಭಾವ ಸಂಬಂಧ ಇದೆ ಎಂದು ಹೇಳಿದರು.
ನಂತರ ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಮಾತನಾಡಿ, 30 ವರ್ಷ ಮೀರಿದ ಸಂಬಂಧ ನನ್ನದು ಹಾಗೂ ಹೇಮಂತ್ ಕುಮಾರ್ ಅವರದು. ಒಂದೆರಡು ಮಾತುಗಳಲ್ಲಿ ಅದನ್ನು ಹೇಳಲು ಆಗುವುದಿಲ್ಲ. ನಿಕಟವರ್ತಿಯಾಗಿ ನಾವಿಬ್ಬರು ಕೆಲಸ ಮಾಡಿದ್ದೇವೆ. ಅಣ್ಣನಂತೆ ನನ್ನನ್ನು ಸಲಹಿದ್ದಾರೆ. ವಿದೇಶಕ್ಕೂ ಒಟ್ಟಿಗೆ ಹೋಗಿದ್ದೇವೆ. ಜೊತೆಗೆ ಕೆಲಸ ಮಾಡಿದ್ದೇವೆ. ಹೇಮಂತ ಕುಮಾರ್ ಒರ್ವ ದೈವ ಭಕ್ತ. ಕುಲಪತಿ ಆಗಿ ಕೆಲಸ ಮಾಡುವುದು ಕಷ್ಟ. ಒಳ್ಳೆಯ ಕೆಲಸ ಮಾಡುವುದೇ ಕಷ್ಟವಾಗಿದೆ. ಬರುವ ಪೈಲ್ ಗೆ [ಕಡತ]ಸುಮ್ಮನೆ ಸಹಿ ಮಾಡಿದರೆ ನಾವು ಒಳ್ಳೆಯವರು ಎಂದರು
ವಿಜ್ಞಾನ ತಂತ್ರಜ್ಞಾನ ಇದ್ದರೆ ಈ ದೇಶ ಹಾಗೂ ಜಗತ್ತು. ಆದರೆ, ಯಾರೂ ಕೂಡ ಇದಕ್ಕೆ ಒತ್ತು ನೀಡುತ್ತಿಲ್ಲ. ವಿಜ್ಞಾನ ಕ್ಕೆ ಪೋತ್ಸಾಹ ನೀಡುವ ಕುಲಪತಿಗಳು ಇಂದು ಬೇಕಿದೆ. ಆದರಿಂದ ಕುಲಪತಿಗಳು ಕೆಲಸ ಮಾಡಲು ಬಿಡದೆ ತೊಂದರೆ ಕೊಡುವವರು ಹೆಚ್ಚಾಗಿದ್ದಾರೆ. ಇಂತವರು ಸ್ವಾರ್ಥ ಸಾಧನೆ ಇಟ್ಟುಕೊಂಡು ಯಾರೂ ಕೂಡ ವಿವಿಗೆ ಬರಬಾರದು. ಹೇಮಂತ ಕುಮಾರ್ ಕುಲಪತಿಗಳಾಗಿ ತಮ್ಮದೇ ಆದ ಕೆಲಸ ಮಾಡಿದ್ದಾರೆ. ರಂಗಪ್ಪ ಹೇಳಿದರೆ ಹೇಮಂತ ಕುಮಾರ್ ಸಹಿ ಮಾಡುತ್ತಾರೆ ಎಂಬುದೆಲ್ಲಾ ಸುಳ್ಳು. ಅವರ ಆಡಳಿತಾತ್ಮಕ ಕೆಲಸಕ್ಕೆ ನಾನೆಂದು ಅಡ್ಡಿಪಡಿಸಿಲ್ಲ. ಇದು ಎಲ್ಲಾ ಕುಲಪತಿಗಳ ಮೇಲೆ ಇಂತಹ ಆರೋಪ ಸಹಜ ಎಂದರು.
ಸಮಾರಂಭದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಪ್ರೊ.ಎಸ್.ಎನ್.ಹೆಗ್ಡೆ, ಪ್ರೊ.ಎನ್.ಎಸ್.ರಾಮೇಗೌಡ, ಪ್ರೊ.ಆರ್.ನಿರಂಜನ ಸೇರಿದಂತೆ ಇತರರು ಇದ್ದರು.
ಕೆಲವು ಜನರು ತಮ್ಮ ಮನೆಯ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳ, ರಸ್ತೆ ಬದಿಯಲ್ಲಿ ಸುರಿಯುವ ಮೂಲಕ ವಿರೂಪಗೊಳಿಸಿ ಸ್ವಚ್ಛ ಭಾರತದ ನಿಯಮವನ್ನು…
ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಪುರುಷರಿಗೆ ಸರಿಸಮನಾಗಿ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಮಹಿಳೆಯರು ಒಂದು…
ಕರ್ನಾಟಕದ ಸಂಸ್ಕೃತಿ ಮತ್ತು ಐತಿಹಾಸಿಕ ಪರಂಪರೆಯ ಭಾಗವಾಗಿರುವ ಅನೇಕ ಅಮೂಲ್ಯವಾದ ಶಿಲ್ಪಗಳು ಬ್ರಿಟಿಷ್ ಮ್ಯೂಜಿಯಂ (ಲಂಡನ್), ಲೂವ್ರೇ ಮ್ಯೂಜಿಯಂ (ಪ್ಯಾರಿಸ್),…
ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಪುಟ್ಟ ಗ್ರಾಮ ಬದನವಾಳುಗೆ ೧೯೨೭ಹಾಗೂ ೧೯೩೪ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭೇಟಿ ನೀಡಿ ಕೈಮಗ್ಗ…
ಪ್ರೊ.ಆರ್.ಎಂ.ಚಿಂತಾಮಣಿ ೨೦೨೫-೨೬ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದ ಕೊನೆಯ ವೇಳೆಗೆ (ಡಿಸೆಂಬರ್೨೦೨೫) ದೇಶದಲ್ಲಿ ಉಪಭೋಗ (Consumption) ಮುಂದಾಗಿರುವ ಆರ್ಥಿಕ ಚಟುವಟಿಕೆಗಳು…
ಕೆ.ಬಿ.ರಮೇಶನಾಯಕ ದೇಶದಲ್ಲೇ ಹಲವು ಏಳು-ಬೀಳುಗಳು, ಸ್ಥಿತ್ಯಂತರವನ್ನು ಕಂಡ ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರು ಜಿಲ್ಲೆಯು ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ. ಮುಖ್ಯಮಂತ್ರಿಯಾಗಿ…